24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ತಾಲೂಕು ಮರಾಟಿ ಸಂಘದ ಗೌರವಾಧ್ಯಕ್ಷ ಲಿಂಗಪ್ಪ ನಾಯ್ಕ್ ನಿಧನ

ಹೊಸಂಗಡಿ: ಶ್ರೀ ಆದಿಶಕ್ತಿ ಮಹಮ್ಮಾಯಿ ದೇವಸ್ಥಾನದ ಬಡಕೋಡಿ ಇದರ ಜೀರ್ಣೋದ್ದಾರ ಮತ್ತು ಬ್ರಹ್ಮ ಕಲಶೋತ್ಸವದ ಕ್ಷೇತ್ರ ಸಮಿತಿಯ ಅಧ್ಯಕ್ಷರಾಗಿ, ಬೆಳ್ತಂಗಡಿ ತಾಲೂಕು ಮರಾಠಿ ಸಂಘದ ಗೌರವ ಅಧ್ಯಕ್ಷರು ಮತ್ತು ಫ್ರೆಂಡ್ಸ್ ಕ್ಲಬ್ ಹೊಸಂಗಡಿ ಇದರ ಸಕ್ರಿಯ ಸದಸ್ಯರು ಆಗಿರುವ ಲಿಂಗಪ್ಪ ನಾಯ್ಕ್(54ವರ್ಷ)ಬಡಕೋಡಿ ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ಅತ್ಯುತ್ತಮ ಸಂಘಟಕರಾದ ಇವರು ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ರಂಗದಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಇವರು ಚಿತ್ರ ಕಲಾವಿದರು ಆಗಿದ್ದರು. ಶ್ರೀ ಆದಿಶಕ್ತಿ ಮಹಮ್ಮಾಯಿ ದೇವಸ್ಥಾನ ಬಡಕೋಡಿ ಇದರ ಜೀರ್ಣೋದ್ದಾರ ಕಾರ್ಯದಲ್ಲಿ ಇವರ ಕೊಡುಗೆ ಅಪಾರವಾದುದು. ಸೆಂಟ್ರಲ್ ಮೆರೆಯಿನೆನ್ ಫಿಶೆರೀಸ್ ರೆಸೆರ್ಚ್ ಇನ್ಸ್ಟಿಟ್ಯೂಟ್ ಆಫ್ ಮಂಗಳೂರು (CMFRIM) ಇದರ ಕೃಷಿ ವಿಭಾಗದ ತಾಂತ್ರಿಕ ಅಧಿಕಾರಿಯಾಗಿದ್ದ ಇವರು ತಾಯಿ ಗುಲಾಬಿ, ಪತ್ನಿ ಹರಿಣಾಕ್ಷಿ ಮತ್ತು ಇಬ್ಬರು ಪುತ್ರಿಯರಾದ ಪ್ರತೀಕ್ಷಾ,ಅಪೇಕ್ಷಾ ಹಾಗೂ ಸಹೋದರಿಯರು ಮತ್ತು ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಪೋಲಿಸ್ ಇಲಾಖೆಯಲ್ಲಿ ಎ ಎಸ್ ಐ ಯಾಗಿ ಸೇವಾ ನಿವೃತ್ತಿ ಹೊಂದಿದ ಸ್ಯಾಮುವೆಲ್ ಎಂ.ಐ. ನೆಲ್ಯಾಡಿರವರಿಗೆ ಸನ್ಮಾನ

Suddi Udaya

ಡಿ.2 : ಕಾಪಿನಡ್ಕದಲ್ಲಿ 65 ಕೆಜಿ ವಿಭಾಗದ ಪುರುಷರ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಸ.ಕಿ.ಪ್ರಾ.ಶಾಲೆ ಮತ್ತು ಗೆಳೆಯರ ಬಳಗ ಕಾಪಿನಡ್ಕ ಇದರ 25 ನೇ ವರ್ಷದ ರಜತ ಮಹೋತ್ಸವ ಸಂಭ್ರಮ

Suddi Udaya

ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ‘ ಸ್ವಾಗತಮ್ ‘ ಸಮಾರಂಭ

Suddi Udaya

ಪಡಂಗಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಕುವೆಟ್ಟು ಬೂತ್ 114ರಲ್ಲಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯಸ್ಮರಣೆ

Suddi Udaya

ತೋಟಾತ್ತಾಡಿ:ಜುಗಾರಿ ಅಡ್ಡೆಗೆ ಪೊಲೀಸರ ದಾಳಿ

Suddi Udaya
error: Content is protected !!