22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ತಾಲೂಕು ಮರಾಟಿ ಸಂಘದ ಗೌರವಾಧ್ಯಕ್ಷ ಲಿಂಗಪ್ಪ ನಾಯ್ಕ್ ನಿಧನ

ಹೊಸಂಗಡಿ: ಶ್ರೀ ಆದಿಶಕ್ತಿ ಮಹಮ್ಮಾಯಿ ದೇವಸ್ಥಾನದ ಬಡಕೋಡಿ ಇದರ ಜೀರ್ಣೋದ್ದಾರ ಮತ್ತು ಬ್ರಹ್ಮ ಕಲಶೋತ್ಸವದ ಕ್ಷೇತ್ರ ಸಮಿತಿಯ ಅಧ್ಯಕ್ಷರಾಗಿ, ಬೆಳ್ತಂಗಡಿ ತಾಲೂಕು ಮರಾಠಿ ಸಂಘದ ಗೌರವ ಅಧ್ಯಕ್ಷರು ಮತ್ತು ಫ್ರೆಂಡ್ಸ್ ಕ್ಲಬ್ ಹೊಸಂಗಡಿ ಇದರ ಸಕ್ರಿಯ ಸದಸ್ಯರು ಆಗಿರುವ ಲಿಂಗಪ್ಪ ನಾಯ್ಕ್(54ವರ್ಷ)ಬಡಕೋಡಿ ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ಅತ್ಯುತ್ತಮ ಸಂಘಟಕರಾದ ಇವರು ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ರಂಗದಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಇವರು ಚಿತ್ರ ಕಲಾವಿದರು ಆಗಿದ್ದರು. ಶ್ರೀ ಆದಿಶಕ್ತಿ ಮಹಮ್ಮಾಯಿ ದೇವಸ್ಥಾನ ಬಡಕೋಡಿ ಇದರ ಜೀರ್ಣೋದ್ದಾರ ಕಾರ್ಯದಲ್ಲಿ ಇವರ ಕೊಡುಗೆ ಅಪಾರವಾದುದು. ಸೆಂಟ್ರಲ್ ಮೆರೆಯಿನೆನ್ ಫಿಶೆರೀಸ್ ರೆಸೆರ್ಚ್ ಇನ್ಸ್ಟಿಟ್ಯೂಟ್ ಆಫ್ ಮಂಗಳೂರು (CMFRIM) ಇದರ ಕೃಷಿ ವಿಭಾಗದ ತಾಂತ್ರಿಕ ಅಧಿಕಾರಿಯಾಗಿದ್ದ ಇವರು ತಾಯಿ ಗುಲಾಬಿ, ಪತ್ನಿ ಹರಿಣಾಕ್ಷಿ ಮತ್ತು ಇಬ್ಬರು ಪುತ್ರಿಯರಾದ ಪ್ರತೀಕ್ಷಾ,ಅಪೇಕ್ಷಾ ಹಾಗೂ ಸಹೋದರಿಯರು ಮತ್ತು ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಅಂತರ್ ರಾಜ್ಯ ಮಹಿಳೆಯರ ವಾಲಿಬಾಲ್ ಪಂದ್ಯಾಟ : ಎಸ್.ಡಿ.ಎಂ ಕಾಲೇಜಿಗೆ ಪ್ರಶಸ್ತಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾಗಿ ರಂಜಿತ್ ಹೆಚ್ ಡಿ ಬಳಂಜ

Suddi Udaya

ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸೂಕ್ತ ತನಿಖೆ ನಡೆಸಿ ಕ್ರಮಕ್ಕೆ ಅಕ್ಬರ್ ಬೆಳ್ತಂಗಡಿ ಆಗ್ರಹ

Suddi Udaya

ಬೆಳ್ತಂಗಡಿಯ ಬಿ.ಕೆ ಧನಂಜಯ ರಾವ್ ರವರ ನೂತನ ಕಚೇರಿ ರಾವ್ ಅಸೋಸಿಯೇಟ್ಸ್ ಉದ್ಘಾಟನೆ

Suddi Udaya

ಧರ್ಮಸ್ಥಳ: ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ ಹಾಗೂ ಖ್ಯಾತ ಚಲನಚಿತ್ರ ನಟ ಸಿಹಿಕಹಿ ಚಂದ್ರು ರವರಿಂದ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ

Suddi Udaya

ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya
error: Content is protected !!