ಜ.24: ನಾಲ್ಕೂರುನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ

Suddi Udaya

ಬಳಂಜ: ಇಲ್ಲಿಯ ನಾಲ್ಕೂರು ಬಾಕಿಮಾರು ಗದ್ದೆ ಕುರೆಲ್ಯ ಗುತ್ತುವಿನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ ಜ.24 ರಂದು ನಡೆಯಲಿದೆ.

ಬರೆಮೇಲು ಜಯಂತ ಭಟ್ ಇವರ ಮನೆಯಿಂದ ಶ್ರೀದೇವರ ವೈಭವೋಪೇತ ಮೆರವಣಿಗೆ ಹೊರಟು, ಕುರೆಲ್ಯ ಗುತ್ತು ಬಾಕಿಮಾರು ಗದ್ದೆಯಲ್ಲಿ ಚೌಕಿ ಪೂಜೆ ಸಂಜೆ 5.30 ರಿಂದ ಶ್ರೀ ಕಟೀಲು ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಎಂಬ ಯಕ್ಷಗಾನ ಸೇವಾ ಬಯಲಾಟ ನಡೆಯಲಿದೆ.

ನಂತರ ರಾತ್ರಿ 8.30 ಕ್ಕೆ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ, ಯಕ್ಷಗಾನ ಕಲಾವಿದ ರಾಜ್ಯ ಪ್ರಶಸ್ತಿ ವಿಜೇತ ಕೊರಗಪ್ಪ ಶೆಟ್ಟಿ ಅರ್ವ, ಯಕ್ಷಗಾನ ಕಲಾವಿದ ಶ್ರೀಧರ ಭಟ್ ನಾಲ್ಕೂರು ಇವರಿಗೆ ಅಭಿನಂದನಾ ಸಮಾರಂಭ ನಡೆಯಲಿದೆ ಎಂದು ನೋಣಯ್ಯ ಶೆಟ್ಟಿ,ರವೀಂದ್ರ ಶೆಟ್ಟಿ ಬಳಂಜ ತಿಳಿಸಿದ್ದಾರೆ.

Leave a Comment

error: Content is protected !!