ಉಜಿರೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ಮೆರವಣಿಗೆ

Suddi Udaya

ಉಜಿರೆ: ಬೆಳ್ತಂಗಡಿ ಸಂಚಾರಿ ಪೊಲೀಸ್ ಹಾಗೂ ಆಟೋ ಚಾಲಕ ಮಾಲಕರು ಮತ್ತು ಸಾರ್ವಜನಿಕರು ಸೇರಿ ಜ.15ರಂದು ಉಜಿರೆಯಿಂದ ಸಿದ್ಧವನದವರೆಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ಮೆರವಣಿಗೆ ನಡೆಯಿತು.

ಮದ್ಯಪಾನ ಮಾಡಿ ವಾಹನ ಚಲಾಯಿಸಬೇಡಿ, ಮೂರು ಜನರನ್ನು ಕುಳ್ಳಿರಿಸಿ ದ್ವಿಚಕ್ರ ವಾಹನ ಚಲಾಯಿಸಬೇಡಿ, ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸಬೇಡಿ, ಸೈಡ್ ಮಿರರ್ ಅಳವಡಿಸಿ, ವಾಹನ ಚಲಾಯಿಸುವಾಗ ಕಡ್ಡಾಯವಾಗಿ ಸೀಟ್ ಬೆಲ್ಟ್ ಧರಿಸಿ ಎಂದು ಜನರ ಸುರಕ್ಷತಾ ದೃಷ್ಟಿಯಿಂದ ಈ ಕಾರ್ಯಕ್ರಮವು ನಡೆಯಿತು.

Leave a Comment

error: Content is protected !!