ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ, ಫಲ್ಗುಣಿ ಮಹಿಳಾ ಮಂಡಳಿ ವತಿಯಿಂದ ರಾಮತಾರಕ ಮಂತ್ರ ಪಠಣ ಹಾಗೂ ಹರಿಕಥಾ ಸತ್ಸಂಗ

Suddi Udaya

ಶಿರ್ಲಾಲು : ಅಯೋಧ್ಯೆಯಲ್ಲಿ ಶ್ರೀ ರಾಮ ದೇವರ ಪ್ರಾಣಪ್ರತಿಷ್ಠೆ ಹಾಗೂ ಮಂದಿರದ ಲೋಕಾರ್ಪಣೆ ಕಾರ್ಯಕ್ರಮದ ಪ್ರಯುಕ್ತ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ, ಫಲ್ಗುಣಿ ಮಹಿಳಾ ಮಂಡಳಿ ಶಿರ್ಲಾಲು ಇದರ ವತಿಯಿಂದ ರಾಮತಾರಕ ಮಂತ್ರ ಪಠಣ ಹಾಗೂ ಹರಿಕಥಾ ಸತ್ಸಂಗ ಕಾರ್ಯಕ್ರಮವು ಜ.22ರಂದು ನಡೆಯಲಿದೆ.

ಬೆಳಿಗ್ಗೆ 10ಗಂಟೆಗೆ ರಾಮ ತಾರಕ ಮಂತ್ರ ಪಠಣ ಭಜನಾ ಕಾರ್ಯಕ್ರಮ, ಮಧ್ಯಾಹ್ನ 12 ಗಂಟೆಗೆ ವಿಶೇಷ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ, ಸಂಜೆ 6ರಿಂದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಸಾಮರಸ್ಯ ಸಹಸಂಚಾಲಕ ಶಿವಪ್ರಸಾದ್ ಮಲೆಬೆಟ್ಟು ಇವರಿಂದ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ನಂತರ ಗ್ರಾಮದ ಕರಸೇವಕರಿಗೆ ಗೌರವಾರ್ಪಣೆ, ರಾತ್ರಿ 8.30 ರಿಂದ ಪಿ. ಗುರು ರಾಜ್ ಮತ್ತು ತಂಡ ಮಂಗಳೂರು ಇವರಿಂದ ಶ್ರೀರಾಮ ಪಾದುಕಾ ಪಟ್ಟಾಭಿಷೇಕ ಎಂಬ ಹರಿಕಥೆ ಕಾರ್ಯಕ್ರಮ ನಡೆಯಲಿದೆ.

Leave a Comment

error: Content is protected !!