22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ. 3-4: ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆ: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ

ಉಜಿರೆ: ಭಾರತೀಯ ಜೈನ್‌ಮಿಲನ್ ಆಶ್ರಯದಲ್ಲಿ ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆ ಫೆ. 3 ಮತ್ತು 4 ರಂದು ಕಾರ್ಕಳದಲ್ಲಿ ಬಾಹುಬಲಿ ಪ್ರವಚನ ಮಂದಿರದಲ್ಲಿ ನಡೆಯಲಿದ್ದು, ಆಮಂತ್ರಣ ಪತ್ರವನ್ನು ಜ.15 ರಂದು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.


ಭಾರತೀಯ ಜೈನ್‌ಮಿಲನ್‌ನ ಮಂಗಳೂರು ವಿಭಾಗದ ಉಪಾಧ್ಯಕ್ಷರಾದ ಸುದರ್ಶನ್ ಜೈನ್, ಕಾರ್ಯದರ್ಶಿ ಶುಭಾಶ್ಚಂದ್ರ ಜೈನ್, ಯುವರಾಜ ಬಲಿಪ, ಸೋಮಶೇಖರ ಶೆಟ್ಟಿ, ಪ್ರಮೋದ್ ಕುಮಾರ್ ಉಜಿರೆ, ಶ್ರೀವರ್ಮ ಅಜ್ರಿ, ಮೂಡಬಿದ್ರೆಯ ನೋಟರಿ ಶ್ವೇತಾ ಜೈನ್, ಕಾರ್ಕಳದ ಶಶಿಕಲಾ ಹೆಗ್ಡೆ, ಮಾಲತಿವಸಂತರಾಜ್ ಮತ್ತು ಯೋಗರಾಜ ಶಾಸ್ತ್ರಿ ಉಪಸ್ಥಿತರಿದ್ದರು.


ಧರ್ಮಸ್ಥಳದ ಹೇಮಾವತಿ ಹೆಗ್ಗಡೆಯವರನ್ನು ಆಮಂತ್ರಿಸಲಾಯಿತು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸುದರ್ಶನ್ ಜೈನ್ ಬಂಟ್ವಾಳ, ಕಾರ್ಕಳದಲ್ಲಿ ಯುಗಲ ಮುನಿಗಳಾದ ಪೂಜ್ಯ ಅಮೋಘಕೀರ್ತಿ ಮುನಿಮಹಾರಾಜರು ಮತ್ತು ಪೂಜ್ಯ ಅಮರಕೀರ್ತಿ ಮುನಿಮಹಾರಾಜರು ಹಾಗೂ ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಫೆ. 3 ರಂದು ಶನಿವಾರ ಪೂರ್ವಾಹ್ನ ಗಂಟೆ 9.30 ಕ್ಕೆ ಆನೆಕೆರೆ ಬಸದಿಯಿಂದ ಭವ್ಯ ಮೆರವಣಿಗೆ ಬಳಿಕ ಭಾರತೀಯ ಜೈನ್‌ಮಿಲನ್‌ನ ರಾಷ್ಟಿçÃಯ ಕಾರ್ಯಧ್ಯಕ್ಷರಾದ ಧರ್ಮಸ್ಥಳದ ಸುರೇಂದ್ರಕುಮಾರ್ ರಾಜ್ಯ ಮಟ್ಟದ ಜಿನಭಜನಾ ಸ್ಪರ್ಧೆ ಉದ್ಘಾಟಿಸುವರು ಎಂದು ತಿಳಿಸಿದರು.


ಶನಿವಾರ ಉಪಾಂತ್ಯ ಸ್ಪರ್ಧೆಗಳು ಹಾಗೂ ಭಾನುವಾರ ಅಂತಿಮ ಸ್ಪರ್ಧೆಗಳು ನಡೆಯಲಿವೆ.

Related posts

ಬೆಳ್ತಂಗಡಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಪಿಸಿ ಸೆಬಾಸ್ಟಿಯಾನ್ ಆಯ್ಕೆ

Suddi Udaya

ಉಜಿರೆಯಲ್ಲಿ ಜಿ-ಮಾಲ್ ಉದ್ಘಾಟನೆ: ಬೆಳೆಯುತ್ತಿರುವ ಉಜಿರೆಗೆ ಜಿ-ಮಾಲ್ ಶೋಭೆ ತಂದಿದೆ: ಶರತ್‌ಕೃಷ್ಣ ಪಡ್ವೆಟ್ನಾಯ

Suddi Udaya

ಉಜಿರೆಯಲ್ಲಿ 5ನೇ ವರ್ಷದ ಕೇರಳ ಸಾಂಪ್ರದಾಯಿಕ “ವಿಷುಕಣಿ” ಆಚರಣೆ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ರಾಣಿಜರಿ ಪರಿಸರದಲ್ಲಿ ಬೆಂಕಿ

Suddi Udaya

ಬಳಂಜ ಗ್ರಾ.ಪಂ. ಸದಸ್ಯರ ಸಹಕಾರದಿಂದ ಕಾಪಿನಡ್ಕದಲ್ಲಿದ್ದ ಅಪಾಯಕಾರಿ ವಿದ್ಯುತ್ ಕಂಬ ಸರಿಪಡಿಸಿದ ಮೆಸ್ಕಾಂ ಇಲಾಖೆ, ಗ್ರಾಮಸ್ಥರಿಂದ ಶ್ಲಾಘನೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ಪ್ರಕರಣ: ಸ್ಥಳ ಮಹಜರು ನಡೆಸಿ ಧರ್ಮಸ್ಥಳ ಠಾಣೆಗೆ ಬಂದ ಎಸ್.ಐ.ಟಿ ತಂಡ

Suddi Udaya
error: Content is protected !!