24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: 35 ಮಂದಿ ವಿಕಲಚೇತನರಿಗೆ ಸಾಧನಾ ಸಲಕರಣೆಗಳ ವಿತರಣೆ

ಉಜಿರೆ: ಮದ್ದಡ್ಕದಲ್ಲಿರುವ ಬ್ರೈಟ್ ಇಂಡಿಯಾ ಸಂಸ್ಥೆಯ ಆಶ್ರಯದಲ್ಲಿ ಕಳೆದ ನಲ್ವತ್ತು ವರ್ಷಗಳಿಂದ ವಿಕಲಚೇತನರಿಗೆ ಆರ್ಥಿಕ ಸಾಕ್ಷರತೆ, ಸ್ವಯಂಉದ್ಯೋಗ, ಕಂಪ್ಯೂಟರ್ ತರಬೇತಿ, ಉದ್ಯಮಶೀಲತಾಭಿವೃದ್ಧಿ ಮೊದಲಾದ ವಿಷಯಗಳಲ್ಲಿ ತರಬೇತಿ, ಮಾರ್ಗದರ್ಶನ ಮತ್ತು ಪ್ರೋತ್ಸಾಹ ನೀಡಿ ಸ್ವಾವಲಂಬಿ ಜೀವನಕ್ಕೆ ಪ್ರೇರಣೆ ನೀಡಲಾಗುತ್ತದೆ ಎಂದು ಸಂಸ್ಥೆಯ ಕೋಶಾಧಿಕಾರಿ ಶಿಶುಪಾಲ ಪೂವಣಿ ಹೇಳಿದರು.


ಅವರು ಜ.16 ರಂದು ಉಜಿರೆಯಲ್ಲಿ ಜನಜಾಗೃತಿಸೌಧದಲ್ಲಿ 35 ಮಂದಿ ವಿಕಲಚೇತನರಿಗೆ1,65,೦೦೦ ರೂ. ಮೌಲ್ಯದ ಸಾಧನಾಸಲಕರಣೆಗಳನ್ನು ವಿತರಿಸಿ ಮಾತನಾಡಿದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನ ಮತ್ತು ಆಶೀರ್ವಾದಗಳೊಂದಿಗೆ ವಿಕಲಚೇತನರಿಗೆ ಗಾಲಿಕುರ್ಚಿ, ಶ್ರವಣಸಾಧನ, ಊರುಗೋಲು, ವಾಟರ್‌ಬೆಡ್ ಮೊದಲಾದ ಸಾಧನಾ ಸಲಕರಣೆಗಳನ್ನು ವಿತರಿಸಲಾಯಿತು.


ಇಂದಬೆಟ್ಟು ಗ್ರಾಮದ ಫಲಾನುಭವಿ ಜೋಸೆಫ್ ಮಾತನಾಡಿ ವಿಕಲಚೇತನರು ತಮಗೆ ಸಿಗುವ ಸವಲತ್ತುಗಳ ಸದುಪಯೋಗ ಪಡೆದು ಧೈರ್ಯ ಮತ್ತು ಆತ್ಮವಿಶ್ವಾಸದೊಂದಿಗೆ ಸ್ವಾವಲಂಬಿ ಜೀವನ ನಡೆಸಬೇಕು. ಕೀಳರಿಮೆ ತೊರೆದು ಸಮಾಜದ ಮುಖ್ಯವಾಹಿನಿಯಲ್ಲಿ ಮುಕ್ತವಾಗಿ ಬೆರೆಯಬೇಕು ಎಂದು ಸಲಹೆ ನೀಡಿದರು. ಈ ದಿಸೆಯಲ್ಲಿ ಪೂಜ್ಯ ಹೆಗ್ಗಡೆಯವರ ನೆರವು ಮತ್ತು ಪ್ರೋತ್ಸಾಹವನ್ನು ಧನ್ಯತೆಯಿಂದ ಸ್ಮರಿಸಿದರು.


ಜನಜಾಗೃತಿ ವೇದಿಕೆಯ ಯೋಜನಾಧಿಕಾರಿ ಮೋಹನ ಸ್ವಾಗತಿಸಿದರು. ಎಸ್.ಡಿ.ಎಂ. ಮೆಡಿಕಲ್ ಟ್ರಸ್ಟ್ನ ವಜ್ರನಾಭಯ್ಯ ಧನ್ಯವಾದವಿತ್ತರು.

Related posts

ಉರುವಾಲು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ

Suddi Udaya

ಬೆಳ್ತಂಗಡಿ ಪ.ಪಂ. ನಲ್ಲಿ ಪೌರ ಕಾರ್ಮಿಕರ ದಿನಾಚರಣೆ

Suddi Udaya

ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಲ್ಲಿ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಉತ್ತಮ ತಳಿಯ ಮೀನು ಮರಿಗಳ ಬಿತ್ತನೆ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ಅಳದಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಉಜಿರೆ: ಕುಂಜರ್ಪ ನಿವಾಸಿ ತಿಮ್ಮಪ್ಪ ಪೂಜಾರಿ ನಿಧನ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!