24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: 35 ಮಂದಿ ವಿಕಲಚೇತನರಿಗೆ ಸಾಧನಾ ಸಲಕರಣೆಗಳ ವಿತರಣೆ

ಉಜಿರೆ: ಮದ್ದಡ್ಕದಲ್ಲಿರುವ ಬ್ರೈಟ್ ಇಂಡಿಯಾ ಸಂಸ್ಥೆಯ ಆಶ್ರಯದಲ್ಲಿ ಕಳೆದ ನಲ್ವತ್ತು ವರ್ಷಗಳಿಂದ ವಿಕಲಚೇತನರಿಗೆ ಆರ್ಥಿಕ ಸಾಕ್ಷರತೆ, ಸ್ವಯಂಉದ್ಯೋಗ, ಕಂಪ್ಯೂಟರ್ ತರಬೇತಿ, ಉದ್ಯಮಶೀಲತಾಭಿವೃದ್ಧಿ ಮೊದಲಾದ ವಿಷಯಗಳಲ್ಲಿ ತರಬೇತಿ, ಮಾರ್ಗದರ್ಶನ ಮತ್ತು ಪ್ರೋತ್ಸಾಹ ನೀಡಿ ಸ್ವಾವಲಂಬಿ ಜೀವನಕ್ಕೆ ಪ್ರೇರಣೆ ನೀಡಲಾಗುತ್ತದೆ ಎಂದು ಸಂಸ್ಥೆಯ ಕೋಶಾಧಿಕಾರಿ ಶಿಶುಪಾಲ ಪೂವಣಿ ಹೇಳಿದರು.


ಅವರು ಜ.16 ರಂದು ಉಜಿರೆಯಲ್ಲಿ ಜನಜಾಗೃತಿಸೌಧದಲ್ಲಿ 35 ಮಂದಿ ವಿಕಲಚೇತನರಿಗೆ1,65,೦೦೦ ರೂ. ಮೌಲ್ಯದ ಸಾಧನಾಸಲಕರಣೆಗಳನ್ನು ವಿತರಿಸಿ ಮಾತನಾಡಿದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನ ಮತ್ತು ಆಶೀರ್ವಾದಗಳೊಂದಿಗೆ ವಿಕಲಚೇತನರಿಗೆ ಗಾಲಿಕುರ್ಚಿ, ಶ್ರವಣಸಾಧನ, ಊರುಗೋಲು, ವಾಟರ್‌ಬೆಡ್ ಮೊದಲಾದ ಸಾಧನಾ ಸಲಕರಣೆಗಳನ್ನು ವಿತರಿಸಲಾಯಿತು.


ಇಂದಬೆಟ್ಟು ಗ್ರಾಮದ ಫಲಾನುಭವಿ ಜೋಸೆಫ್ ಮಾತನಾಡಿ ವಿಕಲಚೇತನರು ತಮಗೆ ಸಿಗುವ ಸವಲತ್ತುಗಳ ಸದುಪಯೋಗ ಪಡೆದು ಧೈರ್ಯ ಮತ್ತು ಆತ್ಮವಿಶ್ವಾಸದೊಂದಿಗೆ ಸ್ವಾವಲಂಬಿ ಜೀವನ ನಡೆಸಬೇಕು. ಕೀಳರಿಮೆ ತೊರೆದು ಸಮಾಜದ ಮುಖ್ಯವಾಹಿನಿಯಲ್ಲಿ ಮುಕ್ತವಾಗಿ ಬೆರೆಯಬೇಕು ಎಂದು ಸಲಹೆ ನೀಡಿದರು. ಈ ದಿಸೆಯಲ್ಲಿ ಪೂಜ್ಯ ಹೆಗ್ಗಡೆಯವರ ನೆರವು ಮತ್ತು ಪ್ರೋತ್ಸಾಹವನ್ನು ಧನ್ಯತೆಯಿಂದ ಸ್ಮರಿಸಿದರು.


ಜನಜಾಗೃತಿ ವೇದಿಕೆಯ ಯೋಜನಾಧಿಕಾರಿ ಮೋಹನ ಸ್ವಾಗತಿಸಿದರು. ಎಸ್.ಡಿ.ಎಂ. ಮೆಡಿಕಲ್ ಟ್ರಸ್ಟ್ನ ವಜ್ರನಾಭಯ್ಯ ಧನ್ಯವಾದವಿತ್ತರು.

Related posts

ಮಧ್ವ ಯಕ್ಷಕೂಟ ಮಡಂತ್ಯಾರು ವಲಯ ಸಮಿತಿ ಪೂರ್ವಭಾವಿ ಸಭೆ:ನೂತನ ಸಮಿತಿ ಅಧ್ಯಕ್ಷರಾಗಿ ರವಿಶಂಕರ್ ಶೆಟ್ಟಿ ಆಯ್ಕೆ

Suddi Udaya

ಕಳೆಂಜ ಕುಶಾಲಪ್ಪ ಗೌಡರ ಮನೆಯ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಗ್ಗೆ ಆರೋಪ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಅಳದಂಗಡಿ ವಿಠಲದಾಸ್ ನಿಧನ

Suddi Udaya

ಕಣಿಯೂರು: ಯುವಕೇಸರಿ ತಂಡದ ವತಿಯಿಂದ ಧನಸಹಾಯ

Suddi Udaya

ಬಳಂಜ: ಬೊಳ್ಳಾಜೆ- ಡೆಂಜೋಲಿ ರಸ್ತೆ ಮದ್ಯೆ ವಿದ್ಯುತ್ ತಂತಿ ಮೇಲೆ ಬಿದ್ದ ಮರವನ್ನು ತೆರವುಗೊಳಿಸಿದ ಸಾರ್ವಜನಿಕರು: ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಬಳಂಜ ಗ್ರಾ‌.ಪಂ ಹಾಗೂ ಅರಣ್ಯ ಇಲಾಖೆಗೆ ಮನವಿ

Suddi Udaya

ಜ.9: ವಿದ್ಯುತ್ ನಿಲುಗಡೆ

Suddi Udaya
error: Content is protected !!