22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: 35 ಮಂದಿ ವಿಕಲಚೇತನರಿಗೆ ಸಾಧನಾ ಸಲಕರಣೆಗಳ ವಿತರಣೆ

ಉಜಿರೆ: ಮದ್ದಡ್ಕದಲ್ಲಿರುವ ಬ್ರೈಟ್ ಇಂಡಿಯಾ ಸಂಸ್ಥೆಯ ಆಶ್ರಯದಲ್ಲಿ ಕಳೆದ ನಲ್ವತ್ತು ವರ್ಷಗಳಿಂದ ವಿಕಲಚೇತನರಿಗೆ ಆರ್ಥಿಕ ಸಾಕ್ಷರತೆ, ಸ್ವಯಂಉದ್ಯೋಗ, ಕಂಪ್ಯೂಟರ್ ತರಬೇತಿ, ಉದ್ಯಮಶೀಲತಾಭಿವೃದ್ಧಿ ಮೊದಲಾದ ವಿಷಯಗಳಲ್ಲಿ ತರಬೇತಿ, ಮಾರ್ಗದರ್ಶನ ಮತ್ತು ಪ್ರೋತ್ಸಾಹ ನೀಡಿ ಸ್ವಾವಲಂಬಿ ಜೀವನಕ್ಕೆ ಪ್ರೇರಣೆ ನೀಡಲಾಗುತ್ತದೆ ಎಂದು ಸಂಸ್ಥೆಯ ಕೋಶಾಧಿಕಾರಿ ಶಿಶುಪಾಲ ಪೂವಣಿ ಹೇಳಿದರು.


ಅವರು ಜ.16 ರಂದು ಉಜಿರೆಯಲ್ಲಿ ಜನಜಾಗೃತಿಸೌಧದಲ್ಲಿ 35 ಮಂದಿ ವಿಕಲಚೇತನರಿಗೆ1,65,೦೦೦ ರೂ. ಮೌಲ್ಯದ ಸಾಧನಾಸಲಕರಣೆಗಳನ್ನು ವಿತರಿಸಿ ಮಾತನಾಡಿದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನ ಮತ್ತು ಆಶೀರ್ವಾದಗಳೊಂದಿಗೆ ವಿಕಲಚೇತನರಿಗೆ ಗಾಲಿಕುರ್ಚಿ, ಶ್ರವಣಸಾಧನ, ಊರುಗೋಲು, ವಾಟರ್‌ಬೆಡ್ ಮೊದಲಾದ ಸಾಧನಾ ಸಲಕರಣೆಗಳನ್ನು ವಿತರಿಸಲಾಯಿತು.


ಇಂದಬೆಟ್ಟು ಗ್ರಾಮದ ಫಲಾನುಭವಿ ಜೋಸೆಫ್ ಮಾತನಾಡಿ ವಿಕಲಚೇತನರು ತಮಗೆ ಸಿಗುವ ಸವಲತ್ತುಗಳ ಸದುಪಯೋಗ ಪಡೆದು ಧೈರ್ಯ ಮತ್ತು ಆತ್ಮವಿಶ್ವಾಸದೊಂದಿಗೆ ಸ್ವಾವಲಂಬಿ ಜೀವನ ನಡೆಸಬೇಕು. ಕೀಳರಿಮೆ ತೊರೆದು ಸಮಾಜದ ಮುಖ್ಯವಾಹಿನಿಯಲ್ಲಿ ಮುಕ್ತವಾಗಿ ಬೆರೆಯಬೇಕು ಎಂದು ಸಲಹೆ ನೀಡಿದರು. ಈ ದಿಸೆಯಲ್ಲಿ ಪೂಜ್ಯ ಹೆಗ್ಗಡೆಯವರ ನೆರವು ಮತ್ತು ಪ್ರೋತ್ಸಾಹವನ್ನು ಧನ್ಯತೆಯಿಂದ ಸ್ಮರಿಸಿದರು.


ಜನಜಾಗೃತಿ ವೇದಿಕೆಯ ಯೋಜನಾಧಿಕಾರಿ ಮೋಹನ ಸ್ವಾಗತಿಸಿದರು. ಎಸ್.ಡಿ.ಎಂ. ಮೆಡಿಕಲ್ ಟ್ರಸ್ಟ್ನ ವಜ್ರನಾಭಯ್ಯ ಧನ್ಯವಾದವಿತ್ತರು.

Related posts

ಕುತ್ಲೂರು ಗುರುನಾರಾಯಣ ಸೇವಾ ಸಂಘ ದ ಅಧ್ಯಕ್ಷರಾಗಿ ಕೇಶವ ಪೂಜಾರಿ ಆಯ್ಕೆ

Suddi Udaya

ಕರಂಬಾರು ಹಿ.ಪ್ರಾ. ಶಾಲೆಯಲ್ಲಿ ಭರತನಾಟ್ಯ ತರಗತಿ ಉದ್ಘಾಟನೆ

Suddi Udaya

ಕೊಕ್ಕಡ ವಿಶ್ವ ಹಿಂದೂ ಪರಿಷದ್ , ಕೊಕ್ಕಡ ಶ್ರೀ ರಾಮ ಸೇವಾ ಟ್ರಸ್ಟ್, ಆಶ್ರಯದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಸಿ.ಆರ್ ರಿಕೇಶ್ ಶರ್ಮಾ ಬಳಂಜ ಶಾಲೆಗೆ ಭೇಟಿ, ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಬಳಂಜ ಶಾಲೆಗೆ ರೂ.1ಲಕ್ಷ ಮೊತ್ತದ ಯೋಜನೆಗಳ ಹಸ್ತಾಂತರ

Suddi Udaya

ಪದ್ಮುಂಜದಲ್ಲಿ ವಾಹನ ತಡೆದು ಹಲ್ಲೆ ಪ್ರಕರಣ-ಶರತ್ ಚೌಟನಿಗೆ ಜೈಲು ಶಿಕ್ಷೆ

Suddi Udaya

ಕೊಕ್ಕಡ: ಎಂಡೋ ಪೀಡಿತ ವಿಶೇಷ ಚೇತನರಿಗೆ ಉಚಿತ ಬಸ್ ಪಾಸ್ ವಿತರಣೆ

Suddi Udaya
error: Content is protected !!