25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: 35 ಮಂದಿ ವಿಕಲಚೇತನರಿಗೆ ಸಾಧನಾ ಸಲಕರಣೆಗಳ ವಿತರಣೆ

ಉಜಿರೆ: ಮದ್ದಡ್ಕದಲ್ಲಿರುವ ಬ್ರೈಟ್ ಇಂಡಿಯಾ ಸಂಸ್ಥೆಯ ಆಶ್ರಯದಲ್ಲಿ ಕಳೆದ ನಲ್ವತ್ತು ವರ್ಷಗಳಿಂದ ವಿಕಲಚೇತನರಿಗೆ ಆರ್ಥಿಕ ಸಾಕ್ಷರತೆ, ಸ್ವಯಂಉದ್ಯೋಗ, ಕಂಪ್ಯೂಟರ್ ತರಬೇತಿ, ಉದ್ಯಮಶೀಲತಾಭಿವೃದ್ಧಿ ಮೊದಲಾದ ವಿಷಯಗಳಲ್ಲಿ ತರಬೇತಿ, ಮಾರ್ಗದರ್ಶನ ಮತ್ತು ಪ್ರೋತ್ಸಾಹ ನೀಡಿ ಸ್ವಾವಲಂಬಿ ಜೀವನಕ್ಕೆ ಪ್ರೇರಣೆ ನೀಡಲಾಗುತ್ತದೆ ಎಂದು ಸಂಸ್ಥೆಯ ಕೋಶಾಧಿಕಾರಿ ಶಿಶುಪಾಲ ಪೂವಣಿ ಹೇಳಿದರು.


ಅವರು ಜ.16 ರಂದು ಉಜಿರೆಯಲ್ಲಿ ಜನಜಾಗೃತಿಸೌಧದಲ್ಲಿ 35 ಮಂದಿ ವಿಕಲಚೇತನರಿಗೆ1,65,೦೦೦ ರೂ. ಮೌಲ್ಯದ ಸಾಧನಾಸಲಕರಣೆಗಳನ್ನು ವಿತರಿಸಿ ಮಾತನಾಡಿದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನ ಮತ್ತು ಆಶೀರ್ವಾದಗಳೊಂದಿಗೆ ವಿಕಲಚೇತನರಿಗೆ ಗಾಲಿಕುರ್ಚಿ, ಶ್ರವಣಸಾಧನ, ಊರುಗೋಲು, ವಾಟರ್‌ಬೆಡ್ ಮೊದಲಾದ ಸಾಧನಾ ಸಲಕರಣೆಗಳನ್ನು ವಿತರಿಸಲಾಯಿತು.


ಇಂದಬೆಟ್ಟು ಗ್ರಾಮದ ಫಲಾನುಭವಿ ಜೋಸೆಫ್ ಮಾತನಾಡಿ ವಿಕಲಚೇತನರು ತಮಗೆ ಸಿಗುವ ಸವಲತ್ತುಗಳ ಸದುಪಯೋಗ ಪಡೆದು ಧೈರ್ಯ ಮತ್ತು ಆತ್ಮವಿಶ್ವಾಸದೊಂದಿಗೆ ಸ್ವಾವಲಂಬಿ ಜೀವನ ನಡೆಸಬೇಕು. ಕೀಳರಿಮೆ ತೊರೆದು ಸಮಾಜದ ಮುಖ್ಯವಾಹಿನಿಯಲ್ಲಿ ಮುಕ್ತವಾಗಿ ಬೆರೆಯಬೇಕು ಎಂದು ಸಲಹೆ ನೀಡಿದರು. ಈ ದಿಸೆಯಲ್ಲಿ ಪೂಜ್ಯ ಹೆಗ್ಗಡೆಯವರ ನೆರವು ಮತ್ತು ಪ್ರೋತ್ಸಾಹವನ್ನು ಧನ್ಯತೆಯಿಂದ ಸ್ಮರಿಸಿದರು.


ಜನಜಾಗೃತಿ ವೇದಿಕೆಯ ಯೋಜನಾಧಿಕಾರಿ ಮೋಹನ ಸ್ವಾಗತಿಸಿದರು. ಎಸ್.ಡಿ.ಎಂ. ಮೆಡಿಕಲ್ ಟ್ರಸ್ಟ್ನ ವಜ್ರನಾಭಯ್ಯ ಧನ್ಯವಾದವಿತ್ತರು.

Related posts

ನಿಡ್ಲೆ ಗ್ರಾ,ಪಂ.ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಭಜನಾ ಮಂಡಳಿಯ ಬೆಳ್ಳಿಹಬ್ಬ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡೂರು: ಮುಂಗುಡಮೆಯ ಸೀತಾರಾಮ ಆಚಾರ್ಯ ಮನೆಯ ಬಳಿ ಗುಡ್ಡ ಕುಸಿತ

Suddi Udaya

ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯ: ರಾಷ್ಟ್ರೀಯ ಹೆದ್ದಾರಿಗಳ ಇಕ್ಕೆಲಗಳಲ್ಲಿ ತುಂಬಿಕೊಂಡಿದ್ದ ತ್ಯಾಜ್ಯಗಳ ವಿಲೇವಾರಿ

Suddi Udaya

ಏಷಿಯನ್ ನೆಟ್ ಬಾಲ್ ಚಾಂಪಿಯನ್ಶಿಪ್’ ಕ್ರೀಡಾಕೂಟ: ಭಾರತ ತಂಡದ ಪ್ರಾಥಮಿಕ ತರಬೇತಿ ಶಿಬಿರಕ್ಕೆ ಎಸ್.ಡಿ.ಎಂ ಕಾಲೇಜಿನ ಚಿಂತನ್ ಬಿ ಸಿ, ಪುನೀತ್ ಆಯ್ಕೆ

Suddi Udaya

ಗುರುವಾಯನಕೆರೆ ವಿದ್ವತ್ ಕಾಲೇಜಿನಲ್ಲಿ ಕಿಚನಾಮಿಕ್ಸ್ ಸಡಗರ

Suddi Udaya
error: Content is protected !!