24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: 35 ಮಂದಿ ವಿಕಲಚೇತನರಿಗೆ ಸಾಧನಾ ಸಲಕರಣೆಗಳ ವಿತರಣೆ

ಉಜಿರೆ: ಮದ್ದಡ್ಕದಲ್ಲಿರುವ ಬ್ರೈಟ್ ಇಂಡಿಯಾ ಸಂಸ್ಥೆಯ ಆಶ್ರಯದಲ್ಲಿ ಕಳೆದ ನಲ್ವತ್ತು ವರ್ಷಗಳಿಂದ ವಿಕಲಚೇತನರಿಗೆ ಆರ್ಥಿಕ ಸಾಕ್ಷರತೆ, ಸ್ವಯಂಉದ್ಯೋಗ, ಕಂಪ್ಯೂಟರ್ ತರಬೇತಿ, ಉದ್ಯಮಶೀಲತಾಭಿವೃದ್ಧಿ ಮೊದಲಾದ ವಿಷಯಗಳಲ್ಲಿ ತರಬೇತಿ, ಮಾರ್ಗದರ್ಶನ ಮತ್ತು ಪ್ರೋತ್ಸಾಹ ನೀಡಿ ಸ್ವಾವಲಂಬಿ ಜೀವನಕ್ಕೆ ಪ್ರೇರಣೆ ನೀಡಲಾಗುತ್ತದೆ ಎಂದು ಸಂಸ್ಥೆಯ ಕೋಶಾಧಿಕಾರಿ ಶಿಶುಪಾಲ ಪೂವಣಿ ಹೇಳಿದರು.


ಅವರು ಜ.16 ರಂದು ಉಜಿರೆಯಲ್ಲಿ ಜನಜಾಗೃತಿಸೌಧದಲ್ಲಿ 35 ಮಂದಿ ವಿಕಲಚೇತನರಿಗೆ1,65,೦೦೦ ರೂ. ಮೌಲ್ಯದ ಸಾಧನಾಸಲಕರಣೆಗಳನ್ನು ವಿತರಿಸಿ ಮಾತನಾಡಿದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನ ಮತ್ತು ಆಶೀರ್ವಾದಗಳೊಂದಿಗೆ ವಿಕಲಚೇತನರಿಗೆ ಗಾಲಿಕುರ್ಚಿ, ಶ್ರವಣಸಾಧನ, ಊರುಗೋಲು, ವಾಟರ್‌ಬೆಡ್ ಮೊದಲಾದ ಸಾಧನಾ ಸಲಕರಣೆಗಳನ್ನು ವಿತರಿಸಲಾಯಿತು.


ಇಂದಬೆಟ್ಟು ಗ್ರಾಮದ ಫಲಾನುಭವಿ ಜೋಸೆಫ್ ಮಾತನಾಡಿ ವಿಕಲಚೇತನರು ತಮಗೆ ಸಿಗುವ ಸವಲತ್ತುಗಳ ಸದುಪಯೋಗ ಪಡೆದು ಧೈರ್ಯ ಮತ್ತು ಆತ್ಮವಿಶ್ವಾಸದೊಂದಿಗೆ ಸ್ವಾವಲಂಬಿ ಜೀವನ ನಡೆಸಬೇಕು. ಕೀಳರಿಮೆ ತೊರೆದು ಸಮಾಜದ ಮುಖ್ಯವಾಹಿನಿಯಲ್ಲಿ ಮುಕ್ತವಾಗಿ ಬೆರೆಯಬೇಕು ಎಂದು ಸಲಹೆ ನೀಡಿದರು. ಈ ದಿಸೆಯಲ್ಲಿ ಪೂಜ್ಯ ಹೆಗ್ಗಡೆಯವರ ನೆರವು ಮತ್ತು ಪ್ರೋತ್ಸಾಹವನ್ನು ಧನ್ಯತೆಯಿಂದ ಸ್ಮರಿಸಿದರು.


ಜನಜಾಗೃತಿ ವೇದಿಕೆಯ ಯೋಜನಾಧಿಕಾರಿ ಮೋಹನ ಸ್ವಾಗತಿಸಿದರು. ಎಸ್.ಡಿ.ಎಂ. ಮೆಡಿಕಲ್ ಟ್ರಸ್ಟ್ನ ವಜ್ರನಾಭಯ್ಯ ಧನ್ಯವಾದವಿತ್ತರು.

Related posts

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಗ್ರಾಮ ಪಂಚಾಯತ್ ಆಸ್ತಿ ತೆರಿಗೆಯನ್ನು ಏಕಕಾಲಕ್ಕೆ ಪಾವತಿಸಿ: ಇಓ ಭವಾನಿಶಂಕರ್

Suddi Udaya

ಸ್ವ-ಉದ್ಯೋಗ ಅಥವಾ ಉದ್ಯೋಗ ತಯಾರಿಕಾ ತರಬೇತಿಗೆ ಅರ್ಜಿ ಆಹ್ವಾನ

Suddi Udaya

ಧರ್ಮಸ್ಥಳ: ಬೈಕ್ ಗೆ ಕಾರು ಡಿಕ್ಕಿ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವಿದ್ವತ್ ಪಿ.ಯು. ಕಾಲೇಜಿನಲ್ಲಿ ಗಾಂಧಿಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಜನ್ಮದಿನಾಚರಣೆ

Suddi Udaya

ಕಲ್ಮಂಜ ಗ್ರಾ.ಪಂ. ವತಿಯಿಂದ ನಿಡಿಗಲ್ ಸೇತುವೆಯಲ್ಲಿ ಸಿಸಿಟಿವಿ ಅಳವಡಿಕೆ

Suddi Udaya
error: Content is protected !!