23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: 35 ಮಂದಿ ವಿಕಲಚೇತನರಿಗೆ ಸಾಧನಾ ಸಲಕರಣೆಗಳ ವಿತರಣೆ

ಉಜಿರೆ: ಮದ್ದಡ್ಕದಲ್ಲಿರುವ ಬ್ರೈಟ್ ಇಂಡಿಯಾ ಸಂಸ್ಥೆಯ ಆಶ್ರಯದಲ್ಲಿ ಕಳೆದ ನಲ್ವತ್ತು ವರ್ಷಗಳಿಂದ ವಿಕಲಚೇತನರಿಗೆ ಆರ್ಥಿಕ ಸಾಕ್ಷರತೆ, ಸ್ವಯಂಉದ್ಯೋಗ, ಕಂಪ್ಯೂಟರ್ ತರಬೇತಿ, ಉದ್ಯಮಶೀಲತಾಭಿವೃದ್ಧಿ ಮೊದಲಾದ ವಿಷಯಗಳಲ್ಲಿ ತರಬೇತಿ, ಮಾರ್ಗದರ್ಶನ ಮತ್ತು ಪ್ರೋತ್ಸಾಹ ನೀಡಿ ಸ್ವಾವಲಂಬಿ ಜೀವನಕ್ಕೆ ಪ್ರೇರಣೆ ನೀಡಲಾಗುತ್ತದೆ ಎಂದು ಸಂಸ್ಥೆಯ ಕೋಶಾಧಿಕಾರಿ ಶಿಶುಪಾಲ ಪೂವಣಿ ಹೇಳಿದರು.


ಅವರು ಜ.16 ರಂದು ಉಜಿರೆಯಲ್ಲಿ ಜನಜಾಗೃತಿಸೌಧದಲ್ಲಿ 35 ಮಂದಿ ವಿಕಲಚೇತನರಿಗೆ1,65,೦೦೦ ರೂ. ಮೌಲ್ಯದ ಸಾಧನಾಸಲಕರಣೆಗಳನ್ನು ವಿತರಿಸಿ ಮಾತನಾಡಿದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನ ಮತ್ತು ಆಶೀರ್ವಾದಗಳೊಂದಿಗೆ ವಿಕಲಚೇತನರಿಗೆ ಗಾಲಿಕುರ್ಚಿ, ಶ್ರವಣಸಾಧನ, ಊರುಗೋಲು, ವಾಟರ್‌ಬೆಡ್ ಮೊದಲಾದ ಸಾಧನಾ ಸಲಕರಣೆಗಳನ್ನು ವಿತರಿಸಲಾಯಿತು.


ಇಂದಬೆಟ್ಟು ಗ್ರಾಮದ ಫಲಾನುಭವಿ ಜೋಸೆಫ್ ಮಾತನಾಡಿ ವಿಕಲಚೇತನರು ತಮಗೆ ಸಿಗುವ ಸವಲತ್ತುಗಳ ಸದುಪಯೋಗ ಪಡೆದು ಧೈರ್ಯ ಮತ್ತು ಆತ್ಮವಿಶ್ವಾಸದೊಂದಿಗೆ ಸ್ವಾವಲಂಬಿ ಜೀವನ ನಡೆಸಬೇಕು. ಕೀಳರಿಮೆ ತೊರೆದು ಸಮಾಜದ ಮುಖ್ಯವಾಹಿನಿಯಲ್ಲಿ ಮುಕ್ತವಾಗಿ ಬೆರೆಯಬೇಕು ಎಂದು ಸಲಹೆ ನೀಡಿದರು. ಈ ದಿಸೆಯಲ್ಲಿ ಪೂಜ್ಯ ಹೆಗ್ಗಡೆಯವರ ನೆರವು ಮತ್ತು ಪ್ರೋತ್ಸಾಹವನ್ನು ಧನ್ಯತೆಯಿಂದ ಸ್ಮರಿಸಿದರು.


ಜನಜಾಗೃತಿ ವೇದಿಕೆಯ ಯೋಜನಾಧಿಕಾರಿ ಮೋಹನ ಸ್ವಾಗತಿಸಿದರು. ಎಸ್.ಡಿ.ಎಂ. ಮೆಡಿಕಲ್ ಟ್ರಸ್ಟ್ನ ವಜ್ರನಾಭಯ್ಯ ಧನ್ಯವಾದವಿತ್ತರು.

Related posts

ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಿ ಕೆ ಹರಿಪ್ರಸಾದ್ ರವರಿಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿ ಸಮಿತಿಯಿಂದ ಅಭಿನಂದನೆ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಮತದಾನ ಕೇಂದ್ರಗಳಿಗೆ ಭೇಟಿ

Suddi Udaya

ಕನ್ಯಾಡಿ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ

Suddi Udaya

ಕರಾವಳಿ ಪ್ರಜಾಧ್ವನಿ ಯಾತ್ರೆ ಕೊಕ್ಕಡದಲ್ಲಿ
ಕಾಂಗ್ರೆಸ್ ಕಾಯ೯ಕತ೯ರ ಸಭೆ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಬಾಲಕಿ ಅಕ್ಷರಿ ಶೆಟ್ಟಿ

Suddi Udaya

ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಜಯಂತ್ ಟಿ ಹಾಜರು: ಒಳದಾರಿಯಲ್ಲಿ ಓಡಿ ಹೋಗಿ ಕಚೇರಿ ಪ್ರವೇಶ

Suddi Udaya
error: Content is protected !!