25.3 C
ಪುತ್ತೂರು, ಬೆಳ್ತಂಗಡಿ
May 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಸಿಸಿ ಕೆಮರಾ ಅಳವಡಿಸುವಿಕೆ ಮತ್ತು ಜೇನು ಸಾಕಾಣಿಕೆ ತರಬೇತಿ ಕಾರ್ಯಕ್ರಮಗಳ ಸಮಾರೋಪ ಸಮಾರಂಭ

ಉಜಿರೆ: ನಮ್ಮ ದೇಶದ ದೊಡ್ಡ ಆಸ್ತಿ ಯಾವುದೆಂದರೆ ಮಾನವ ಸಂಪನ್ಮೂಲ, ಈ ಸಂಪತ್ತು ನಮ್ಮ ದೇಶವನ್ನು ಒಂದು ಬಲಿಷ್ಠ ದೇಶವನ್ನಾಗಿ ಮಾಡಿದೆ. ದೇಶದ ಪ್ರತಿಯೊಬ್ಬ ಯುವ ಜನತೆಯು ಉದ್ಯೋಗದ ಮೂಲಕ ದೇಶಕ್ಕೆ ಒಂದು ಸಣ್ಣ ಕೊಡುಗೆ ಕೊಟ್ಟರೆ ನಮ್ಮ ದೇಶ ಎಲ್ಲಾ ದೇಶಗಳಿಗಿಂತ ಅಗ್ರಗಣೀಯವಾಗಿ ಬೆಳೆಯುತ್ತದೆ ಎಂದರು.

ಅವರು ರುಡ್‌ಸೆಟ್ ಸಂಸ್ಥೆಯಲ್ಲಿ ನಡೆದ ಸಿಸಿ ಕೆಮರಾ ಅಳವಡಿಸುವಿಕೆ ಮತ್ತು ಜೇನು ಸಾಕಾಣಿಕೆ ತರಬೇತಿ ಕಾರ್ಯಕ್ರಮಗಳ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಎಲ್ಲರಿಗೂ ಉದ್ಯೋಗ ಕೊಡಲು ಸಾದ್ಯವಿಲ್ಲ, ಆದರೆ ರುಡ್‌ಸೆಟ್ ನಂತಹ ಸಂಸ್ಥೆಗಳು ಇಂತಹ ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿ, ಬೆಳೆದು ನಿಂತಿರುವಂತದ್ದು ಹೆಮ್ಮೆಯ ವಿಷಯ, ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗೆಡೆಯವರು ತುಂಬಾ ದೂರದೃಷ್ಠಿಯಿಂದ ಈ ಸಂಸ್ಥೆಯನ್ನು ಪ್ರಾರಂಭ ಮಾಡಿದ್ದಾರೆ, ಈ ಸಂಸ್ಥೆಯ ಹೆಸರನ್ನು ಉಳಿಸುವ ಕೆಲಸವನ್ನು ಇಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಮಾಡಬೇಕು, ಎಂದು ಬೆಸ್ಟ್ ಫೌಂಡೇಶನ್ ಅಧ್ಯಕ್ಷರೂ ಮತ್ತು ಕೆಪಿಸಿಸಿ ಯ ಪ್ರಧಾನ ಕಾರ್ಯದರ್ಶೀಗಳಾದ ರಕ್ಷಿತ್ ಶಿವರಾಂರವರು ಅಭಿಪ್ರಾಯ ಪಟ್ಟರು.

ಕಾರ್ಯಕ್ರಮದಲ್ಲಿ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ಎಮ್. ಸುರೇಶ್‌ರವರು ಅಧ್ಯಕ್ಷ ಸ್ಥಾನ ವಹಿಸಿದ್ದರು, ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್‌ರವರು ಕಾರ್ಯಕ್ರಮ ನಿರೂಪಿಸಿ, ಹಿರಿಯ ಉಪನ್ಯಾಕರಾದ ಶ್ರೀಮತಿ ಅನಸೂಯ ವಂದಿಸಿದರು. ಕೆಲವು ಶಿಭಿರಾರ್ಥಿಗಳು ತರಬೇತಿಯ ಅನಿಸಿಕೆಯನ್ನು ವ್ಯಕ್ತಪಡಿಸಿದರು.

Related posts

ಮಂತ್ರದೇವತಾ ದೈವಸ್ಥಾನದ ಧರ್ಮದರ್ಶಿ ಮನೋಜ್ ಕಟ್ಟೆಮಾರ್ ಅವರ ಹುಟ್ಟುಹಬ್ಬ

Suddi Udaya

ಬೀಡಿ ಬ್ರಾಂಚ್ ನ ಕಟ್ಟಡದ ಅಡ್ಡಕ್ಕೆ ವ್ಯಕ್ತಿ ನೇಣು ಹಾಕಿಕೊಂಡು ಆತ್ಮಹತ್ಯೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಶಿವನ ಸನ್ನಿಧಿಗೆ ಹರಿದು ಬಂದ ಬೃಹತ್ ಹಸಿರುವಾಣಿ ಹೊರೆಕಾಣಿಕೆ, ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ ರವರಿಂದ ಉಗ್ರಾಣ ಮುಹೂರ್ತ

Suddi Udaya

ನೆರಿಯ: ಶ್ರೀ ಕ್ಷೇತ್ರ ಗ್ರಾ.ಯೋಜನೆಯಿಂದ ಸಹಾಯಧನ ಹಸ್ತಾಂತರ

Suddi Udaya

ಜೆಸಿಐಯ ರಾಷ್ಟ್ರೀಯ ಉಪಾಧ್ಯಕ್ಷರಿಂದ ಬೆಳ್ತಂಗಡಿ ಜೆಸಿಐ ಗೆ ಮನ್ನಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮಧ್ಯಂತರ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!