24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌಜನ್ಯ ಹೋರಾಟದ ನೆಪದಲ್ಲಿ ತೇಜೋವಧೆ ಸರಿಯಲ್ಲ : ಭಾಸ್ಕರ್ ಧರ್ಮಸ್ಥಳ

ಬೆಳ್ತಂಗಡಿ : ಕು| ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಒತ್ತಾಯಿಸಿ ತಾಲೂಕಿನಲ್ಲಿ ನಡೆಯುತ್ತಿರುವ ಹೋರಾಟದ ನೆಪದಲ್ಲಿ ತೇಜೋವಧೆ, ಸುಳ್ಳು ಆರೋಪಗಳನ್ನು ಮಾಡುತ್ತಿರುವುದು ಸರಿಯಲ್ಲ ಎಂದು ಬಜರಂಗದಳದ ಮುಖಂಡ ಭಾಸ್ಕರ್ ಧರ್ಮಸ್ಥಳ ಹೇಳಿದರು.

ಅವರು ಜ.16 ರಂದು ಬೆಳ್ತಂಗಡಿಯಲ್ಲಿ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಕಳೆದ ಕೆಲವೊಂದು ತಿಂಗಳಿನಿಂದ ತಾಲೂಕಿನ ವ್ಯಾಪ್ತಿಯಲ್ಲಿ ಸೌಜನ್ಯ ನ್ಯಾಯಕ್ಕಾಗಿ ಹೋರಾಟಗಳು ನಡೆಯುತ್ತಿದ್ದು, ಹೋರಾಟದ ವೇದಿಕೆಯಲ್ಲಿ ನಮ್ಮ ಮೇಲೆ ನಮ್ಮ ತೇಜೋವಧೆ ಹಾಗೂ ಪ್ರಧಾನಿಯವರಿಗೆ, ತಾಲೂಕಿನ ಶಾಸಕರಿಗೆ, ಡಾ. ಹೆಗ್ಗಡೆಯವರಿಗೆ ಬೈಯ್ಯುತ್ತಿರುವುದು ಸರಿಯಲ್ಲ ಎಂದು ಹೇಳಿದರು. ರಾಜೇಶ್ ಅವರು ಮಾತನಾಡಿ ಸೌಜನ್ಯ ಅವರ ಪರ ಹೋರಾಟದ ಹೆಸರಲ್ಲಿ ತೇಜೋವಧೆ ಮಾಡಿ, ಹೋರಾಟಗಾರರು ಜನರ ದಾರಿ ತಪ್ಪಿಸುತ್ತಿದ್ದಾರೆ. ಸೌಜನ್ಯಳಿಗೆ ನ್ಯಾಯ ಸಿಗಬೇಕು ಎಂಬ ಹೋರಾಟಕ್ಕೆ ನನ್ನ ಬೆಂಬಲವಿದೆ. ಆದರೆ ನನ್ನ ಹೆಸರನ್ನು ಹೇಳಿ ವೇದಿಕೆಯಲ್ಲಿ, ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದರು. ದಾಮೋದರ ಗೌಡ ಹಾಗೂ ಸಂದೀಪ್ ರೈ ಮಾತನಾಡಿ, ತಮ್ಮ ಬಗ್ಗೆ ಮಾಡುತ್ತಿರುವ ತೇಜೋವಧೆಯ ಬಗ್ಗೆ ಹೇಳಿದರು. ಪತ್ರಿಕಾ ಗೋಷ್ಠಿಯಲ್ಲಿ ಗಣೇಶ್ ಕಳೆಂಜ ಉಪಸ್ಥಿತರಿದ್ದರು. ಸಂದೀಪ್ ರೈ ಸ್ವಾಗತಿಸಿ ದಾಮೋದರ ಗೌಡ ಧನ್ಯವಾದವಿತ್ತರು.

Related posts

5, 8, 9 ಮತ್ತು 11ನೇ ತರಗತಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಹೈಕೋರ್ಟ್ ಆದೇಶ

Suddi Udaya

ಧರ್ಮಸ್ಥಳ: ನೇತ್ರಾವತಿ ನದಿ ತೀರದಲ್ಲಿ ಸ್ವಚ್ಛತೆ ಮಾಡುವ ಮೂಲಕ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಪರೀಕ್ಷೆಗೆ ಸಂಬಂಧಿಸಿದ ಗೊಂದಲಗಳನ್ನು ಪರಿಹರಿಸಲು ಕೂಡಲೇ ಕ್ರಮಕೈಗೊಳ್ಳುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಗೆ ಆಗ್ರಹ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮದ್ದಡ್ಕ :12 ನೇ ವರ್ಷದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಕಡಿರ ನಾಗಬನದಲ್ಲಿ ನಾಗದೇವರಿಗೆ ತಂಬಿಲ ಸೇವೆ

Suddi Udaya

ಕಡಿರುದ್ಯಾವರ ಮತ್ತು ಮುಂಡಾಜೆ ಪಂಚಾಯತ್ ಅರಿವು ಕೇಂದ್ರಗಳಿಗೆ ಕಂಪ್ಯೂಟರ್ ಹಾಗೂ ಸ್ಮಾರ್ಟ್ ಮೊಬೈಲ್ ವಿತರಣೆ

Suddi Udaya
error: Content is protected !!