September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌಜನ್ಯ ಹೋರಾಟದ ನೆಪದಲ್ಲಿ ತೇಜೋವಧೆ ಸರಿಯಲ್ಲ : ಭಾಸ್ಕರ್ ಧರ್ಮಸ್ಥಳ

ಬೆಳ್ತಂಗಡಿ : ಕು| ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಒತ್ತಾಯಿಸಿ ತಾಲೂಕಿನಲ್ಲಿ ನಡೆಯುತ್ತಿರುವ ಹೋರಾಟದ ನೆಪದಲ್ಲಿ ತೇಜೋವಧೆ, ಸುಳ್ಳು ಆರೋಪಗಳನ್ನು ಮಾಡುತ್ತಿರುವುದು ಸರಿಯಲ್ಲ ಎಂದು ಬಜರಂಗದಳದ ಮುಖಂಡ ಭಾಸ್ಕರ್ ಧರ್ಮಸ್ಥಳ ಹೇಳಿದರು.

ಅವರು ಜ.16 ರಂದು ಬೆಳ್ತಂಗಡಿಯಲ್ಲಿ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಕಳೆದ ಕೆಲವೊಂದು ತಿಂಗಳಿನಿಂದ ತಾಲೂಕಿನ ವ್ಯಾಪ್ತಿಯಲ್ಲಿ ಸೌಜನ್ಯ ನ್ಯಾಯಕ್ಕಾಗಿ ಹೋರಾಟಗಳು ನಡೆಯುತ್ತಿದ್ದು, ಹೋರಾಟದ ವೇದಿಕೆಯಲ್ಲಿ ನಮ್ಮ ಮೇಲೆ ನಮ್ಮ ತೇಜೋವಧೆ ಹಾಗೂ ಪ್ರಧಾನಿಯವರಿಗೆ, ತಾಲೂಕಿನ ಶಾಸಕರಿಗೆ, ಡಾ. ಹೆಗ್ಗಡೆಯವರಿಗೆ ಬೈಯ್ಯುತ್ತಿರುವುದು ಸರಿಯಲ್ಲ ಎಂದು ಹೇಳಿದರು. ರಾಜೇಶ್ ಅವರು ಮಾತನಾಡಿ ಸೌಜನ್ಯ ಅವರ ಪರ ಹೋರಾಟದ ಹೆಸರಲ್ಲಿ ತೇಜೋವಧೆ ಮಾಡಿ, ಹೋರಾಟಗಾರರು ಜನರ ದಾರಿ ತಪ್ಪಿಸುತ್ತಿದ್ದಾರೆ. ಸೌಜನ್ಯಳಿಗೆ ನ್ಯಾಯ ಸಿಗಬೇಕು ಎಂಬ ಹೋರಾಟಕ್ಕೆ ನನ್ನ ಬೆಂಬಲವಿದೆ. ಆದರೆ ನನ್ನ ಹೆಸರನ್ನು ಹೇಳಿ ವೇದಿಕೆಯಲ್ಲಿ, ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದರು. ದಾಮೋದರ ಗೌಡ ಹಾಗೂ ಸಂದೀಪ್ ರೈ ಮಾತನಾಡಿ, ತಮ್ಮ ಬಗ್ಗೆ ಮಾಡುತ್ತಿರುವ ತೇಜೋವಧೆಯ ಬಗ್ಗೆ ಹೇಳಿದರು. ಪತ್ರಿಕಾ ಗೋಷ್ಠಿಯಲ್ಲಿ ಗಣೇಶ್ ಕಳೆಂಜ ಉಪಸ್ಥಿತರಿದ್ದರು. ಸಂದೀಪ್ ರೈ ಸ್ವಾಗತಿಸಿ ದಾಮೋದರ ಗೌಡ ಧನ್ಯವಾದವಿತ್ತರು.

Related posts

ಮಳೆಗೆ ಹಾನಿಗೊಳಗಾದ ನಡ ಹಾಗೂ ಉಜಿರೆ ಗ್ರಾಮಗಳ ಮನೆಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಸಮಾಜ ಸೇವಾಟ್ರಸ್ಟ್ ನ ಸಂಸ್ಥಾಪಕ ರವಿ ಕಕ್ಕೆಪದವು ರವರ ಮಾಗದರ್ಶನದಲ್ಲಿ ಕುಮಾರಧಾರದಿಂದ ಕಾಶಿಕಟ್ಟೆಯವರೆಗೆ ಸ್ವಚ್ಛತಾ ಕಾರ್ಯ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya

ನೆರಿಯಾ ಗ್ರಾಮದಲ್ಲಿ “ಮಲೆಕುಡಿಯ ಬುಡಕಟ್ಟು ಕುಟುಂಬಗಳೊಂದಿಗೆ ಶೈಕ್ಷಣಿಕ ವಿನಿಮಯ”

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ವಿವಿಧ ಕುಂದುಕೊರತೆಗಳ ಬಗ್ಗೆ ಚರ್ಚೆ

Suddi Udaya
error: Content is protected !!