ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ

Suddi Udaya

ಬೆಳ್ತಂಗಡಿ : ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಬಂಟ್ವಾಳ, ಸಂಚಾರಿ ಪೊಲೀಸ್ ಇಲಾಖೆ ಬೆಳ್ತಂಗಡಿ, ಜೆ ಸಿ ಐ ಬೆಳ್ತಂಗಡಿ ಮಂಜುಶ್ರೀ ಇವರ ಸಹಯೋಗದೊಂದಿಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಜ.17 ರಂದು ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ನಡೆಯಿತು.

ಕಾರ್ಯಕ್ರಮಕ್ಕೆ ಬೆಳ್ತಂಗಡಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ಚಾಲನೆ ನೀಡಿದರು..
ಈ ಸಂದರ್ಭದಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಚರಣ್, ಸಂಚಾರಿ ಪೊಲೀಸ್ ಇಲಾಖೆಯ ಇನ್ಸ್ಪೆಕ್ಟರ್ ಅರ್ಜುನ್, ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್, ಪೋಲಿಸ್ ಇಲಾಖೆ ಸಿಬ್ಬಂದಿಗಳು, ಜೆಸಿಐ ಬೆಳ್ತಂಗಡಿ ಮಂಜುಶ್ರೀ ಸದಸ್ಯರು ಉಪಸ್ಥಿತರಿದ್ದರು.

Leave a Comment

error: Content is protected !!