25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ ಗ್ರಾಮ ಪಂಚಾಯತ್ ನ ಗ್ರಾಮ ಸಭೆ: ಗರ್ಭಿಣಿಯರು, ಬೆನ್ನುನೋವಿದ್ದರು ಈ ರಸ್ತೆಯಲ್ಲಿ ಸಾಗಿದರೆ ಸಮಸ್ಯೆ ಗ್ಯಾರಂಟಿ

ಸುಲ್ಕೇರಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯು ಪಂಚಾಯತ್ ಅದ್ಯಕ್ಷೆ ಗಿರಿಜಾರವರ ಅಧ್ಯಕ್ಷತೆಯಲ್ಲಿ ಜ.18 ರಂದು ಪಂಚಾಯತ್ ಸಭಾ ಭವನದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಉಪವಲಯಾರಣ್ಯಧಿಕಾರಿ ಸುರೇಶ್ ಗೌಡ ಸಭೆಯನ್ನು ನಡೆಸಿಕೊಟ್ಟರು.

ಗ್ರಾಮಸಭೆಯಲ್ಲಿ ಗರ್ಭಿಣಿಯರು, ಬೆನ್ನುನೋವಿದ್ದರು ಅಳದಂಗಡಿ ಅರೋಗ್ಯ ಕೇಂದ್ರದ ರಸ್ತೆಯಲ್ಲಿ ಸಾಗಿದರೆ ಸಮಸ್ಯೆ ಗ್ಯಾರಂಟಿ ಆದಷ್ಟು ಬೇಗ ಅಳದಂಗಡಿ ಆರೋಗ್ಯ ಕೇಂದ್ರಕ್ಕೆ ಹೋಗುವ ರಸ್ತೆ ಸರಿಪಡಿಸುವಂತೆ ಗ್ರಾಮಸ್ಥರು ಆಗ್ರಹಿಸಿದರು. ಸುಲ್ಕೇರಿ ಗ್ರಾ.ಪಂ ವ್ಯಾಪ್ತಿಯಲ್ಲಿ ನೆಟ್ವರ್ಕ್ ಸಮಸ್ಯೆಯಿದ್ದು ಟವರ್ ನಿರ್ಮಿಸಬೇಕು,ಕಾಡು ಪ್ರಾಣಿಗಳ ಹಾವಳಿಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳುವುದು, ದಾರಿದೀಪ ವಿಸ್ತರಣೆ, ರಸ್ತೆ ರಿಪೇರಿ, ಶುದ್ದ ನೀರಿನ‌ ಘಟಕದ ನಿರ್ವಹಣೆ ಹಾಗೂ ಗ್ರಾಮದ ಅಭಿವೃದ್ಧಿ ದೃಷ್ಟಿಯಿಂದ ಗ್ರಾಮಸ್ಥರು ಚರ್ಚಿಸಿದರು.

ಗ್ರಾಮಸ್ಥರ ಪರವಾಗಿ ವೀರೇಂದ್ರ ಜೈನ್, ವಿಶ್ವನಾಥ ಶೆಟ್ಟಿ, ಸದಾನಂದ ಗೌಡ ಮಜ್ಜೋಡಿ ಚರ್ಚಿಸಿದರು.

ವೇದಿಕೆಯಲ್ಲಿ ಪಂಚಾಯತ್ ಉಪಾಧ್ಯಕ್ಷ ಶುಭಕರ ಪೂಜಾರಿಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ,ಗ್ರಾ.ಪಂ ಸದಸ್ಯರಾದ ರವಿ ಪೂಜಾರಿ ಹಾರಡ್ಡೆ,ನಾರಾಯಣ ಪೂಜಾರಿ ಸುಲ್ಕೇರಿ,ಪೂರ್ಣೀಮಾ ನಾವರ,
ಹಾಗೂ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

ಪಂಚಾಯತ್ ಕಾರ್ಯದರ್ಶಿ ಕೊರಗಪ್ಪ ನಾಯ್ಕ್,ಸಿಬ್ಬಂದಿಗಳು ಸಹಕರಿಸಿದರು.ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ತಮ್ಮ ಇಲಾಖೆಯಲ್ಲಿ ದೊರೆಯುವ ಸೌಲಭ್ಯ ಹಾಗೂ ಮಾಹಿತಿ ನೀಡಿದರು.

Related posts

ಆರಂಬೋಡಿ : ತುಂಬೆದಲೆಕ್ಕಿ ಶ್ರೀ ಸತ್ಯನಾರಾಯಣ ಭಜನ ಮಂದಿರದ ನೂತನ ಗುಡಿಗೆ ಶಿಲಾನ್ಯಾಸ

Suddi Udaya

ಎಸ್‌ಡಿಎಂ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ವತಿಯಿಂದ ನೀಟ್ ಸಾಧಕ ಆದಿತ್ ಜೈನ್ ಗೆ ಸನ್ಮಾನ

Suddi Udaya

ಸುರ್ಯ: ಕೊಡಮಣಿತ್ತಾಯ – ಪಿಲಿಚಾಮುಂಡಿ, ಕಲ್ಕುಡ – ಕಲ್ಲುರ್ಟಿ, ಮಹಮ್ಮಾಯಿ ದೈವ ಸನ್ನಿಧಿಯಲ್ಲಿ ದೊಂಪದಬಲಿ ಉತ್ಸವ

Suddi Udaya

ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ಮಲವಂತಿಗೆ ಗ್ರಾಮದ ಯುವಕ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya

ಕೊಲ್ಲಿ ಬ್ರಹ್ಮಕಲಶಕ್ಕೆ ಲಾಯಿಲ ಗ್ರಾಮಸ್ಥರಿಂದ ಹೊರ ಕಾಣಿಕೆ ಸಮರ್ಪಣೆ

Suddi Udaya
error: Content is protected !!