23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಇವರ ವತಿಯಿಂದ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಉದ್ಘಾಟನೆ

ಉಜಿರೆ : ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇವರ ನೇತೃತ್ವದಲ್ಲಿ, ಬ್ಯಾಂಕ್ ಆಫ್ ಬರೋಡ ಉಜಿರೆ ಶಾಖೆ ಹಾಗೂ ಕರ್ನಾಟಕ ರಾಜ್ಯ ಟೈಲರ್ ಒಕ್ಕೂಟ ಉಜಿರೆ ವಲಯ ಇವರ ಸಹಕಾರದಲ್ಲಿ10 ದಿನಗಳ ಬಟ್ಟೆ ಕಸೂತಿ ತಯಾರಿಕೆಯ (ಆರಿ ವರ್ಕ್ )ತರಬೇತಿಯ ಉದ್ಘಾಟನಾ ಕಾರ್ಯಕ್ರಮ ಉಜಿರೆ ಯ ಚಿತ್ತಾರ ಟೈಲರಿಂಗ್ ಸಭಾಂಗಣದಲ್ಲಿ ನಡೆಯಿತು.

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ, ಮಂಗಳೂರು ಇಲ್ಲಿಯ ಮುಖ್ಯ ಕಾರ್ಯನಿರ್ವಹನಾಧಿಕಾರಿ ಸಚಿನ್ ಹೆಗ್ಡೆ ಇವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. “ಗ್ರಾಮೀಣ ಪ್ರದೇಶದಲ್ಲಿ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಕಾರ್ಯಕ್ರಮ ಆಯೋಜಿಸಿದ್ದು ಗ್ರಾಮೀಣ ಮಹಿಳೆಯರು ಸ್ವ ಉದ್ಯೋಗ ಮಾಡಲು ಸಹಕಾರಿ, ಮಹಿಳೆಯರು ತರಬೇತಿ ಪಡೆದು ಬ್ಯಾಂಕ್ ಸಾಲ ಸೌಲಭ್ಯ ಪಡೆದು ಯಶಸ್ವೀಯಾಗಬೇಕು” ಎಂದು ಕರೆ ನೀಡಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಕಾರ್ಯಕ್ರಮ ವ್ಯವಸ್ಥಾಪಕಾರದ ಜೀವನ್ ಕೊಲ್ಯ, ಉಜಿರೆ ಪಂಚಾಯತ್ ಉಪಾಧ್ಯಕ್ಷರಾದ ರವಿ ಬರೆಮೇಲು , ರಾಜ್ಯ ಟೈಲರ್ ಒಕ್ಕೂಟದ ಕ್ಷೇತ್ರ ಸಮಿತಿ ಅಧ್ಯಕ್ಷರಾದ ವೇದಾವತಿ ಜನಾರ್ಧನ್, ವಲಯ ಅಧ್ಯಕ್ಷರಾದ ರೂಪ ಜಗದೀಶ್, ವಲಯ ಕಾರ್ಯದರ್ಶಿ ಜೀನತ್, ಕ್ಷೇತ್ರ ಕಾರ್ಯದರ್ಶಿ ನಾಗೇಶ್, ತರಬೇತುದಾರರಾದ ಶ್ರೀಮತಿ ಸುಮನ ಉಪಸ್ಥಿತರಿದ್ದರು.

ಜಯ ಚಿದಾನಂದ್ ಕಾರ್ಯಕ್ರಮ ನಿರೂಪಿಸಿ, ಉಜಿರೆ ಗ್ರಾಮ ವ್ಯಾಪ್ತಿಯ ಸುತ್ತ ಮುತ್ತ ಊರಿನ ಸುಮಾರು 28 ಮಹಿಳೆಯರು ಈ 10 ದಿವಸದ ತರಬೇತಿ ಪಡೆಯಲಿದ್ದಾರೆ.

Related posts

ಗ್ರಾಮ ಪಂಚಾಯತ್ ಆಸ್ತಿ ತೆರಿಗೆಯನ್ನು ಏಕಕಾಲಕ್ಕೆ ಪಾವತಿಸಿ: ಇಓ ಭವಾನಿಶಂಕರ್

Suddi Udaya

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಟಿಪ್ಪರ್ ಲಾರಿ

Suddi Udaya

ಬೆಳಾಲು ಗ್ರಾ.ಪಂ. ನಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya

ಸಾಂಪ್ರದಾಯಿಕ ಕೋಳಿ ಅಂಕಕ್ಕೆ ಅನುಮತಿ ನೀಡಲು ಪಡಂಗಡಿ ಜನಸ್ಪಂದನ ಸಭೆಯಲ್ಲಿ ಗ್ರಾಮಸ್ಥರು ಆಗ್ರಹ

Suddi Udaya

ಜ.13: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ

Suddi Udaya

ಅಳದಂಗಡಿಯಲ್ಲಿ ಕಟ್ಟೂರು ಕಾಂಕ್ರೀಟ್ ಉತ್ಪನ್ನಗಳ ತಯಾರಿಕ ಘಟಕ ಶುಭಾರಂಭ:ಅತ್ಯುತ್ತಮ ಗುಣಮಟ್ಟದ ಸಾಲಿಡ್ ಬ್ಲಾಕ್-ಕಾಂಕ್ರೀಟ್ ಕಂಪೌಂಡ್ ವಾಲ್‌, ಕಾಳುಮೆಣಸು ಬೇಲಿ ಕಂಬ ಲಭ್ಯ

Suddi Udaya
error: Content is protected !!