ಲಾಯಿಲ: ಪ್ರಸನ್ನ ಆಯುರ್ವೇದ ಮತ್ತು ಆಸ್ಪತ್ರೆ ಕಾಲೇಜು ಹಾಗೂ ಪ್ರಸನ್ನ ನರ್ಸಿಂಗ್ ಕಾಲೇಜಿನ ಪದವಿ ಪ್ರದಾನ ಸಮಾರಂಭ

Suddi Udaya

Updated on:

ಲಾಯಿಲ: ಪ್ರಸನ್ನ ಆಯುರ್ವೇದ ಮತ್ತು ಆಸ್ಪತ್ರೆ ಕಾಲೇಜು ಹಾಗೂ ಪ್ರಸನ್ನ ನರ್ಸಿಂಗ್ ಕಾಲೇಜಿನ ಪದವಿ ಪ್ರದಾನ ಸಮಾರಂಭವು ಜ.17ರಂದು ಎಜುಕೇಶನ್ ಟ್ರಸ್ಟ್ ಕ್ಯಾಂಪಸ್ ನಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ವಿಧಾನ ಸಭಾ ಸದಸ್ಯರುಗಳಾದ ಪ್ರತಾಪ್ ಸಿಂಹ ನಾಯಕ್ , ಹರೀಶ್ ಕುಮಾರ್, ವಿದ್ಯಾಸಂಸ್ಥೆಯ ಅಧ್ಯಕ್ಷ ಮಾಜಿ ಸಚಿವ ಕೆ. ಗಂಗಾಧರ ಗೌಡ, ಮಾಜಿ ಶಾಸಕ ಪ್ರಭಾಕರ ಬಂಗೇರ, ಉಪಸ್ಥಿತರಿದ್ದರು. ಸಮಾರಂಭದಲ್ಲಿ ಪದವಿ ಪಡೆದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.

ಈ ಸಂದರ್ಭದಲ್ಲಿ ನರ್ಸಿಂಗ್ ಪ್ರಾಂಶುಪಾಲ ಸರ್ವೇಸ್ ಎನ್.ಜಿ, ಕಾಲೇಜಿನ ಶಿಕ್ಷಕರು, ವಿದ್ಯಾರ್ಥಿಗಳು, ತಾಲೂಕಿನ ಗಣ್ಯರು ಉಪಸ್ಥಿತರಿದ್ದರು.

ಪ್ರಸನ್ನ ಕಾಲೇಜಿನ ಆಯುರ್ವೇದ ಮತ್ತು ಆಸ್ಪತ್ರೆಯ ಪ್ರಾಂಶುಪಾಲ ಡಾ| ಪ್ರಶಾಂತ್ ಬಿ.ಕೆ ಸ್ವಾಗತಿಸಿದರು.

Leave a Comment

error: Content is protected !!