37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಪೇಟೆಯಲ್ಲಿ ಪಾರ್ಕಿಂಗ್ ಸುವ್ಯವಸ್ಥೆ ಕುರಿತು ಸಭೆ

ಉಜಿರೆ: ಉಜಿರೆ ಪೇಟೆಯ ಅವ್ಯವಸ್ಥಿತ ಪಾರ್ಕಿಂಗ್ ನಿಂದ ಉಂಟಾಗುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವ ಕುರಿತು ಗ್ರಾಮ ಪಂಚಾಯಿತಿ ವಠಾರದಲ್ಲಿ ಪಂಚಾಯಿತ್ ಅಧ್ಯಕ್ಷೆ ಉಷಾಕಿರಣ ಕಾರಂತ್ ಅವರ ಅಧ್ಯಕ್ಷತೆಯಲ್ಲಿ ಜ.17ರಂದು ವಿಶೇಷ ಸಭೆ ಜರಗಿತು.

ಪಂಚಾಯಿತ್ ಉಪಾಧ್ಯಕ್ಷ ರವಿಕುಮಾರ್ ಬರೆಮೇಲು, ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚ, ಸಂಚಾರಿ ಪೊಲೀಸ್ ಠಾಣೆಯ ಪಿಎಸ್ ಐ ಅರ್ಜುನ್, ವರ್ತಕರು,ವಾಹನ ಚಾಲಕ-ಮಾಲಕ ಸಂಘದ ಪದಾಧಿಕಾರಿಗಳು, ಸಾರ್ವಜನಿಕರು, ಕಾರ್ಯದರ್ಶಿ ಶ್ರವಣ್ ಕುಮಾರ್ ಉಪಸ್ಥಿತರಿದ್ದರು.


ಉಜಿರೆ ಪೇಟೆಯ ಕಾಲೇಜು ರಸ್ತೆಯಲ್ಲಿ ಹಾಗೂ ಫುಟ್ ಪಾತ್ ನಲ್ಲಿ ವಾಹನಗಳನ್ನು ನಿಲ್ಲಿಸುವುದು ಹಾಗೂ ತಾತ್ಕಾಲಿಕ ಅಂಗಡಿಗಳು ತಲೆ ಎತ್ತುತ್ತಿರುವುದರಿಂದ ಸಾರ್ವಜನಿಕರು, ವಿದ್ಯಾರ್ಥಿಗಳು ಸಂಚಾರಕ್ಕೆ ಭಾರಿ ಸಮಸ್ಯೆ ಎದುರಿಸುತ್ತಿದ್ದಾರೆ ಎಂಬ ವಿಚಾರ ಪ್ರಸ್ತಾಪವಾಯಿತು. ಫುಟ್ ಪಾತ್ ಮೇಲೆ ವಾಹನಗಳನ್ನು ನಿಲ್ಲಿಸುವವರ ವಿರುದ್ಧ ಕ್ರಮ ಹಾಗೂ ತಾತ್ಕಾಲಿಕ ವ್ಯಾಪಾರ ನಿರ್ವಹಿಸುವುದನ್ನು ನಿರ್ಬಂಧಿಸುವ ಕುರಿತು ನಿರ್ಣಯಿಸಿ,ಅಂತವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಲಾಯಿತು.


ಕಾಲೇಜು ರಸ್ತೆ ಕೆಲವು ಕಡೆ ಬೇಕಾಬಿಟ್ಟಿ ವಾಹನ ಪಾರ್ಕಿಂಗ್ ಮಾಡುವುದರ ಕುರಿತು ಸೂಕ್ತ ಕ್ರಮ ಕೈಗೊಳ್ಳುವುದು ಹಾಗೂ ಮೂರು ಕಡೆಗಳಲ್ಲಿ ಎಚ್ಚರಿಕೆ ಫಲಕ ಅಳವಡಿಸುವ ನಿರ್ಣಯ ಕೈಗೊಳ್ಳಲಾಯಿತು.
ಅಂಗಡಿಗಳ ಮುಂಭಾಗ ವಾಹನ ಪಾರ್ಕಿಂಗ್ ಮಾಡಿ ಗ್ರಾಹಕರಿಗೆ ಹಾಗೂ ವರ್ತಕರಿಗೆ ತೊಂದರೆ ನೀಡುವವರ ವಿರುದ್ಧ ಪೊಲೀಸ್ ಇಲಾಖೆ ಸಹಕಾರದಲ್ಲಿ ದಂಡ ವಿಧಿಸುವ ಕುರಿತು ನಿರ್ಣಯಿಸಲಾಯಿತು.
ಖಾಸಗಿ ವಾಹನಗಳನ್ನು ಅಲ್ಲಲ್ಲಿ ನಿಲ್ಲಿಸಿ ತೊಂದರೆ ನೀಡುವವರ ವಿರುದ್ಧವು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಭೆಗೆ ತಿಳಿಸಲಾಯಿತು.


ಬಸ್ ನಿಲ್ದಾಣಗಳಲ್ಲಿ ಬಾಡಿಗೆ ವಾಹನಗಳನ್ನು ನಿಲ್ಲಿಸುವವರಿಗೆ ಕಡಿವಾಣ ಹಾಕುವ ಕುರಿತು ಚರ್ಚೆ ನಡೆಯಿತು. ಪಿಡಿಒ ಪ್ರಕಾಶ ಶೆಟ್ಟಿ ನೊಚ್ಚ ಕಾರ್ಯಕ್ರಮ ನಿರ್ವಹಿಸಿದರು.

Related posts

ಉಜಿರೆ: ಕುಂಜರ್ಪ ನಿವಾಸಿ ಆನಂದ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ: ಕೃಷಿ ತರಬೇತಿ ಕೇಂದ್ರದಲ್ಲಿ ಕೃಷಿ ಪಂಪ್‌ಸೆಟ್‌ಗಳು ಮತ್ತು ನೀರಿನ ಸಂರಕ್ಷಣೆ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಲಾಯಿಲ: ಸ.ಹಿ.ಪ್ರಾ. ಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ ಬಿ.ಎಸ್. ಸೇವಾ ನಿವೃತ್ತಿ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿಯ ಸಾಧನೆ

Suddi Udaya

ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾದ ನವಚೇತನ ಆಂ.ಮಾ. ಶಾಲೆಯ ವಿದ್ಯಾರ್ಥಿ ಶರ್ವಿನ್ ಮೊನಿಸ್ ರವರನ್ನು ಸನ್ಮಾನಿಸಿ ಅಭಿನಂದಿಸಿದ ಶಾಸಕ ಹರೀಶ್ ಪೂಂಜ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಪೆನ್ಸಿಲ್ವೇನಿಯ ಯುನಿರ್ವಸಿಟಿಯ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya
error: Content is protected !!