32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿದ್ಯುತ್ ತಂತಿಗೆ ತಾಗಿದ ಕಾಂಕ್ರೀಟ್ ಮಿಕ್ಸಿಂಗ್ ಲಾರಿ : ರಸ್ತೆಗೆ ಉರುಳಿದ ಎರಡು ವಿದ್ಯುತ್ ಕಂಬ

ಬೆಳ್ತಂಗಡಿ: ಕಾಂಕ್ರೀಟ್ ಮಿಕ್ಸಿಂಗ್ ಲಾರಿಯೊಂದು ವಿದ್ಯುತ್ ತಂತಿಗಳನ್ನು ಎಳೆದಾಡಿ, ಎರಡು ವಿದ್ಯುತ್ ಕಂಬಗಳನ್ನು ರಸ್ತೆಗೆ ಉರುಳಿಸಿದ ವಿದ್ಯಮಾನ ನಾಲ್ಕೂರು ಗ್ರಾಮದ ಸೂಳಬೆಟ್ಟು ಎಂಬಲ್ಲಿ ತಡರಾತ್ರಿ ನಡೆದಿದೆ.

ವೇಣೂರು- ಅಳದಂಗಡಿ ರಸ್ತೆಯಲ್ಲಿನ ಸೂಳಬೆಟ್ಟು ಎಂಬಲ್ಲಿ ರಾತ್ರಿ, ಲಾರಿಯ ಚಾಲಕ ಮೇಲಿರುವ ತಂತಿಗಳನ್ನು ಗಮನಿಸದೆ ಚಲಾಯಿಸಿದ್ದರಿಂದ ತಂತಿಗಳು ವಾಹನಕ್ಕೆ ಸಿಲುಕಿವೆ. ಅದು ಚಾಲಕನ‌ ಗಮನಕ್ಕೆ ಬಾರದೆ ಆತ ಏಕಾಏಕಿ ಮುಂದುವರಿದಿದ್ದಾನೆ ಇದರಿಂದ ತಂತಿಗಳೊಂದಿಗೆ ಎರಡು ಜೋಡಿ ಕಂಬಗಳು ರಸ್ತೆಗೆ ಅಡ್ಡಲಾಗಿ ಬೀಳುವಂತಾಗಿದೆ. ತಂತಿಗಳ ಘರ್ಷಣೆಯಿಂದ ಭಾರೀ ಬೆಂಕಿ ಕಾಣಿಸಿತ್ತು.


ಕಾರ್ಕಳದ ಕನ್ಸ್ಟ್ರಕ್ಷನ್ ವೊಂದರ ಲಾರಿಯಾಗಿದ್ದು ಅದನ್ನು ಅಳದಂಗಡಿಯಲ್ಲಿ ತಡೆಹಿಡಿಯಲಾಗಿದೆ. ಚಾಲಕ ಹಾವೇರಿಯವರಾಗಿದ್ದಾರೆ.
ಸ್ಥಳಕ್ಕೆ ಮೆಸ್ಕಾಂ ಇಂಜಿನಿಯರ್, ವೇಣೂರು ಠಾಣೆಯ ವೆಂಕಟೇಶ್ ಭೇಟಿ ನೀಡಿದ್ದಾರೆ. ಘಟನೆಯಿಂದಾಗಿ ಘನ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದೆ. ವಿದ್ಯುತ್ ಪೂರೈಕೆ ಸಂಪೂರ್ಣ ಸ್ಥಗಿತಗೊಂಡಿದೆ.

Related posts

ಲಾಯಿಲ ಮತಗಟ್ಟೆಗೆ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಭೇಟಿ

Suddi Udaya

ಹಿಂದೂ ಧರ್ಮದ ವಿರುದ್ಧ ನೀಡಿರುವ ಹೇಳಿಕೆಗೆ ದ.ಕ. ಜಿಲ್ಲಾ ಶಿವಳ್ಳಿ ಬ್ರಾಹ್ಮಣ ಸಂಘ ಮತ್ತು ಸಮಗ್ರ ಹಿಂದೂ ಸಮಾಜ ಖಂಡನೆ: ಡಾ| ಎಂ.ಎಂ. ದಯಾಕರ್

Suddi Udaya

ಎ.30-ಮೇ.3: ಮಾನ್ಯ ಸತ್ಯಚಾವಡಿ ತರವಾಡು ಮನೆಯ ಗೃಹಪ್ರವೇಶ: ಸ್ಥಳ ದೇವತಾ ಸಾನಿಧ್ಯಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಪ್ಪರ ಮೂಹೂರ್ತ

Suddi Udaya

ಮೇ 12-16 ಉಜಿರೆ ಎಸ್ ಡಿ ಎಂ ನ್ಯಾಚುರೋಪತಿ ಕಾಲೇಜಿನಲ್ಲಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಜ್ಞಾನದ ಮಹಾಸಮ್ಮೇಳನ

Suddi Udaya

ಅಳದಂಗಡಿ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ

Suddi Udaya

ಕುವೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!