25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿದ್ಯುತ್ ತಂತಿಗೆ ತಾಗಿದ ಕಾಂಕ್ರೀಟ್ ಮಿಕ್ಸಿಂಗ್ ಲಾರಿ : ರಸ್ತೆಗೆ ಉರುಳಿದ ಎರಡು ವಿದ್ಯುತ್ ಕಂಬ

ಬೆಳ್ತಂಗಡಿ: ಕಾಂಕ್ರೀಟ್ ಮಿಕ್ಸಿಂಗ್ ಲಾರಿಯೊಂದು ವಿದ್ಯುತ್ ತಂತಿಗಳನ್ನು ಎಳೆದಾಡಿ, ಎರಡು ವಿದ್ಯುತ್ ಕಂಬಗಳನ್ನು ರಸ್ತೆಗೆ ಉರುಳಿಸಿದ ವಿದ್ಯಮಾನ ನಾಲ್ಕೂರು ಗ್ರಾಮದ ಸೂಳಬೆಟ್ಟು ಎಂಬಲ್ಲಿ ತಡರಾತ್ರಿ ನಡೆದಿದೆ.

ವೇಣೂರು- ಅಳದಂಗಡಿ ರಸ್ತೆಯಲ್ಲಿನ ಸೂಳಬೆಟ್ಟು ಎಂಬಲ್ಲಿ ರಾತ್ರಿ, ಲಾರಿಯ ಚಾಲಕ ಮೇಲಿರುವ ತಂತಿಗಳನ್ನು ಗಮನಿಸದೆ ಚಲಾಯಿಸಿದ್ದರಿಂದ ತಂತಿಗಳು ವಾಹನಕ್ಕೆ ಸಿಲುಕಿವೆ. ಅದು ಚಾಲಕನ‌ ಗಮನಕ್ಕೆ ಬಾರದೆ ಆತ ಏಕಾಏಕಿ ಮುಂದುವರಿದಿದ್ದಾನೆ ಇದರಿಂದ ತಂತಿಗಳೊಂದಿಗೆ ಎರಡು ಜೋಡಿ ಕಂಬಗಳು ರಸ್ತೆಗೆ ಅಡ್ಡಲಾಗಿ ಬೀಳುವಂತಾಗಿದೆ. ತಂತಿಗಳ ಘರ್ಷಣೆಯಿಂದ ಭಾರೀ ಬೆಂಕಿ ಕಾಣಿಸಿತ್ತು.


ಕಾರ್ಕಳದ ಕನ್ಸ್ಟ್ರಕ್ಷನ್ ವೊಂದರ ಲಾರಿಯಾಗಿದ್ದು ಅದನ್ನು ಅಳದಂಗಡಿಯಲ್ಲಿ ತಡೆಹಿಡಿಯಲಾಗಿದೆ. ಚಾಲಕ ಹಾವೇರಿಯವರಾಗಿದ್ದಾರೆ.
ಸ್ಥಳಕ್ಕೆ ಮೆಸ್ಕಾಂ ಇಂಜಿನಿಯರ್, ವೇಣೂರು ಠಾಣೆಯ ವೆಂಕಟೇಶ್ ಭೇಟಿ ನೀಡಿದ್ದಾರೆ. ಘಟನೆಯಿಂದಾಗಿ ಘನ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದೆ. ವಿದ್ಯುತ್ ಪೂರೈಕೆ ಸಂಪೂರ್ಣ ಸ್ಥಗಿತಗೊಂಡಿದೆ.

Related posts

ಕೊಕ್ಕಡ ಅಮೃತ ಗ್ರಾ. ಪಂ. ಹಾಗೂ ಅಮೃತ ಸರೋವರದಲ್ಲಿ ಸ್ವಾತಂತ್ರೋತ್ಸವ ಆಚರಣೆ: ನಿವೃತ್ತ ಸೈನಿಕರಿಗೆ ಗೌರವಾರ್ಪಣೆ

Suddi Udaya

ನ.7 ರಂದು ಚುನಾಯಿತ ಸದಸ್ಯರ ಅಧಿಕಾರಾವಧಿ ಮುಗಿಯಲಿರುವ ಬೆಳ್ತಂಗಡಿ ಪಟ್ಟಣ ಪಂಚಾಯತ್‌ ಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡದಂತೆ ರಾಜ್ಯ ಹೈಕೋರ್ಟ್ ಮಧ್ಯಂತರ ತಡೆ

Suddi Udaya

ಮಾಲಾಡಿ: ಪೆರ್ಡೆ ಕ್ರಾಸ್ – ಊರ್ಲ ರಸ್ತೆ ಶಾಸಕ ಹರೀಶ್ ಪೂಂಜರಿಂದ ಲೋಕಾರ್ಪಣೆ

Suddi Udaya

ಜೇಸಿಐ ಕೊಕ್ಕಡ ಕಪಿಲಾ ಘಟಕದ ಸದಸ್ಯ ಜೆಸಿ ಅಕ್ಷತ್ ರೈ ರವರು “ಸಾಧನಶ್ರೀ” ಪ್ರಶಸ್ತಿಗೆ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭ ಹಾಗೂ ಆಟಿದ ಕೂಟ

Suddi Udaya

ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಮೆಟ್ರಿ ಕ್ ಮೇಳ

Suddi Udaya
error: Content is protected !!