23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿದ್ಯುತ್ ತಂತಿಗೆ ತಾಗಿದ ಕಾಂಕ್ರೀಟ್ ಮಿಕ್ಸಿಂಗ್ ಲಾರಿ : ರಸ್ತೆಗೆ ಉರುಳಿದ ಎರಡು ವಿದ್ಯುತ್ ಕಂಬ

ಬೆಳ್ತಂಗಡಿ: ಕಾಂಕ್ರೀಟ್ ಮಿಕ್ಸಿಂಗ್ ಲಾರಿಯೊಂದು ವಿದ್ಯುತ್ ತಂತಿಗಳನ್ನು ಎಳೆದಾಡಿ, ಎರಡು ವಿದ್ಯುತ್ ಕಂಬಗಳನ್ನು ರಸ್ತೆಗೆ ಉರುಳಿಸಿದ ವಿದ್ಯಮಾನ ನಾಲ್ಕೂರು ಗ್ರಾಮದ ಸೂಳಬೆಟ್ಟು ಎಂಬಲ್ಲಿ ತಡರಾತ್ರಿ ನಡೆದಿದೆ.

ವೇಣೂರು- ಅಳದಂಗಡಿ ರಸ್ತೆಯಲ್ಲಿನ ಸೂಳಬೆಟ್ಟು ಎಂಬಲ್ಲಿ ರಾತ್ರಿ, ಲಾರಿಯ ಚಾಲಕ ಮೇಲಿರುವ ತಂತಿಗಳನ್ನು ಗಮನಿಸದೆ ಚಲಾಯಿಸಿದ್ದರಿಂದ ತಂತಿಗಳು ವಾಹನಕ್ಕೆ ಸಿಲುಕಿವೆ. ಅದು ಚಾಲಕನ‌ ಗಮನಕ್ಕೆ ಬಾರದೆ ಆತ ಏಕಾಏಕಿ ಮುಂದುವರಿದಿದ್ದಾನೆ ಇದರಿಂದ ತಂತಿಗಳೊಂದಿಗೆ ಎರಡು ಜೋಡಿ ಕಂಬಗಳು ರಸ್ತೆಗೆ ಅಡ್ಡಲಾಗಿ ಬೀಳುವಂತಾಗಿದೆ. ತಂತಿಗಳ ಘರ್ಷಣೆಯಿಂದ ಭಾರೀ ಬೆಂಕಿ ಕಾಣಿಸಿತ್ತು.


ಕಾರ್ಕಳದ ಕನ್ಸ್ಟ್ರಕ್ಷನ್ ವೊಂದರ ಲಾರಿಯಾಗಿದ್ದು ಅದನ್ನು ಅಳದಂಗಡಿಯಲ್ಲಿ ತಡೆಹಿಡಿಯಲಾಗಿದೆ. ಚಾಲಕ ಹಾವೇರಿಯವರಾಗಿದ್ದಾರೆ.
ಸ್ಥಳಕ್ಕೆ ಮೆಸ್ಕಾಂ ಇಂಜಿನಿಯರ್, ವೇಣೂರು ಠಾಣೆಯ ವೆಂಕಟೇಶ್ ಭೇಟಿ ನೀಡಿದ್ದಾರೆ. ಘಟನೆಯಿಂದಾಗಿ ಘನ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದೆ. ವಿದ್ಯುತ್ ಪೂರೈಕೆ ಸಂಪೂರ್ಣ ಸ್ಥಗಿತಗೊಂಡಿದೆ.

Related posts

ಉಜಿರೆ: ಅಜಿತ್ ನಗರ ನಿವಾಸಿ ವಿಲ್ಫ್ರೆಡ್ ಡಿಸೋಜಾ ನಿಧನ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಕುಲದೈವೋ ಬ್ರಹ್ಮ ನೂತನ ಯಕ್ಷಗಾನ ಪ್ರಸಂಗ ಬಿಡುಗಡೆ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ರಕ್ಷಾಬಂಧನ ಕಾರ್ಯಕ್ರಮ 28ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಬೆಳ್ತಂಗಡಿ ಶಾಂತಾ ಬಂಗೇರರವರಿಗೆ ಸನ್ಮಾನ

Suddi Udaya

ಸುದ್ದಿ ಉದಯ ಪತ್ರಿಕೆ ಹಾಗೂ ದೀಪಾವಳಿ ವಿಶೇಷಾಂಕದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಚಿತ್ರನಟಿ ಶ್ರುತಿ

Suddi Udaya
error: Content is protected !!