25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮದ್ದಡ್ಕದಲ್ಲಿ ನ್ಯಾಯಬೆಲೆ ಅಂಗಡಿ ಶುಭಾರಂಭ

ಕುವೆಟ್ಟು: ಮದ್ದಡ್ಕ ಜನತೆಯ ನ್ಯಾಯಬೆಲೆ (ರೇಷನ್ )ಅಂಗಡಿಯ ಕಳೆದ 3 ವರ್ಷಗಳ ಹಿಂದಿನ ಬೇಡಿಕೆ ಈಡೇರಿದಂತಾಗಿದೆ ಕೆಲವು ವರ್ಷಗಳಲ್ಲಿ ಕುವೆಟ್ಟು, ಓಡಿಲ್ನಾಳ ಪರಿಸರದ ಜನರೀಗೆ ನ್ಯಾಯಬೆಲೆ ಅಂಗಡಿ ಮದ್ದಡ್ಕದಲ್ಲಿ ಕಾರ್ಯನಿರ್ವಸುತ್ತಿತ್ತು ಕಾರಣಾಂತರದಿಂದ ಪಿಲಿಚಾಮುಂಡಿಕಲ್ಲು ಇಲ್ಲಿಗೆ ವರ್ಗಾವಣೆಯಾಗಿ ಜನರು ರೇಷನ್ ತರಲು ಬಹಳ ಕಷ್ಟ ಪಡುತ್ತಿದ್ದರು ಇದೀಗ ಕುವೆಟ್ಟು ಗ್ರಾಮ ಪಂಚಾಯತ್ ಮತ್ತು ಆಹಾರ ಇಲಾಖೆಯ ಸಹಕಾರದಲ್ಲಿ ಮತ್ತೆ ಮದ್ದಡ್ಕದಲ್ಲಿ ಜ 18 ರಂದು ಪ್ರಾರಂಭವಾಗಿದೆ.

ಕುವೆಟ್ಟು ಗ್ರಾಮ ಪಂ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ನ್ಯಾಯಬೆಲೆ ಅಂಗಡಿ ಉದ್ಘಾಟಿಸಿದರು. ಆಹಾರ ಇಲಾಖೆಯ ನಿರೀಕ್ಷಕ ವಿಶ್ವರವರು ಉಪಸ್ಥಿತರಿದ್ದು ನಿರ್ವಾಣೆಯ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಗ್ರಾ ಪಂ ಉಪಾಧ್ಯಕ್ಷ ಗಣೇಶ್ ಕುಲಾಲ್, ಮಾಜಿ ಅಧ್ಯಕ್ಷೆ ಆಶಾಲತ, ಉಪಾಧ್ಯಕ್ಷ ಪ್ರದೀಪ್ ಶೆಟ್ಟಿ, ಪಂಚಾಯತ್ ಅಭಿವೃದ್ದಿ ಅಧಿಕಾರಿ ಗೀತಾ ಸಾಲಿಯನ್, ಗ್ರಾ ಪಂ ಸದಸ್ಯರಾದ ಸಿಲ್ವೆಸ್ಟರ್ ಮೋನಿಸ್, ಸುಮಂಗಲ ಪ್ರಭು, ಶಾಲಿನಿ, ರಿಯಾಝ್, ಆಮೀನ,ಆನಂದಿ , ಮುಸ್ತಾಫ, ಮಾಜಿ ತಾ. ಪಂ ಪ್ರಭಾಕರ ಶೆಟ್ಟಿ ಉಪ್ಪಡ್ಕ, ನ್ಯಾಯ ಬೆಲೆ ಅಂಗಡಿ ನಿರ್ವಾಹಕಿ ನಿಕ್ಷೀತಾ ಮತ್ತಿತರರು ಉಪಸ್ಥಿತರಿದ್ದರು.

Related posts

ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗನಗದು ದೋಚಿ ಪರಾರಿ

Suddi Udaya

ಅಳದಂಗಡಿ ಸರಸ್ವತಿ ಭಟ್ ಹೃದಯಾಘಾತದಿಂದ ನಿಧನ

Suddi Udaya

ಮೇಲಂತಬೆಟ್ಟು : ಕೆಲ್ಲಕೆರೆ ಕೊರಗ ಸಮುದಾಯದ ಕಾಲೋನಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮಡಂತ್ಯಾರು ಗ್ರಾ.ಪಂ ನಿಂದ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಕರಪತ್ರ ವಿತರಣೆ

Suddi Udaya

ನಾವೂರು ಗ್ರಾ. ಪಂ.ನಲ್ಲಿ ಸ್ವಾತಂತ್ರ್ಯೋತ್ಸವ: ಡಿಜಿಟಲ್ ಗ್ರಂಥಾಲಯದ ಉದ್ಘಾಟನೆ

Suddi Udaya

ಹೆದ್ದಾರಿ ಅವಾಂತರ ಕೈಗಾರಿಕಾ ವಸಾಹತಿನ ಉದ್ಯಮಿಗಳ ಪ್ರತಿಭಟನೆ: ತಾ.ಪಂಕಾರ್ಯನಿರ್ವಹಣಾಧಿಕಾರಿ ಭೇಟಿ

Suddi Udaya
error: Content is protected !!