September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಜ.25: ಕೊಕ್ಕಡ ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ “ಶ್ರೀ ಲಲಿತಾ ಸಹಸ್ರನಾಮ ಯಾಗ

ಕೊಕ್ಕಡ: ಯುವ ಕೇಸರಿ, ಕಾವು ಇವರ ಆಶ್ರಯದೊಂದಿಗೆ ಮೋದಿ ಮತ್ತೊಮ್ಮೆ ಎಂಬ ಮಹಾ ಸಂಕಲ್ಪದೊಂದಿಗೆ, ವೇ.ಮೂ. ಕಶೆಕೋಡಿ ಸೂರ್ಯನಾರಾಯಣ ಭಟ್ ಇವರ ಪೌರೋಹಿತ್ಯದಲ್ಲಿ “ಶ್ರೀ ಲಲಿತಾ ಸಹಸ್ರನಾಮ ಯಾಗ”ವು ಜ.25ರಂದು ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನಡೆಯಲಿದೆ.


ಬೆಳಿಗ್ಗೆ ಗಂಟೆ 7.30ಕ್ಕೆ ಯಾಗ ಪ್ರಾರಂಭ, ಬೆಳಿಗ್ಗೆ10.30 ಕ್ಕೆ ಯಾಗ ಪೂರ್ಣಾಹುತಿ ನಂತರ ಧಾರ್ಮಿಕ ಸಭಾ ನಡೆಯಲಿದ್ದು, ಶ್ರೀ ಕ್ಷೇತ್ರ ಸೌತಡ್ಕ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ರಾವ್ ಅಧ್ಯಕ್ಷತೆ ವಹಿಸಲಿದ್ದಾರೆ.

ದಿಕ್ಸೂಚಿ ಭಾಷಣವನ್ನು ಬಾಲವಾಗ್ಮಿ ಕು| ಹಾರಿಕಾ ಮಂಜುನಾಥ್ ರವರು ನೆರವೇರಿಸಲಿದ್ದಾರೆ. ತ್ರಿಗುಣಾತ್ಮಿಕ, ಶ್ರೀ ದುರ್ಗಾಪರಮೇಶ್ವರೀ ಆಡಳಿತ ಟ್ರಸ್ಟ್‌ನ ಅಧ್ಯಕ್ಷ ಪ್ರಾಸ್ತಾವಿಕ ಮಾತುಗಳನ್ನಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಬೆಂಗಳೂರು ದಕ್ಷಿಣ ಕ್ಷೇತ್ರ ರಾಷ್ಟ್ರೀಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ ಭಾಗವಹಿಸಲಿದ್ದಾರೆ.
ನಿವೃತ್ತ ಯೋಧರಾದ ಕೆ. ಮಹಾಬಲ ಮತ್ತು ಜಿ. ದೇವಪ್ಪ ಗೌಡ ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ನಂತರ ಅನ್ನಸಂತರ್ಪಣೆ ನಡೆಯಲಿದೆ ಎಂದು ಸಂಘದ ಅಧ್ಯಕ್ಷರು ತಿಳಿಸಿದ್ದಾರೆ.

Related posts

ಪೆರೋಡಿತ್ತಾಯಕಟ್ಟೆ ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಮುಂಡಾಜೆ: ಭಾರಿ ಮಳೆಗೆ ಕುಸಿದ ಮೋರಿ: ಗುಂಡ ದೈವಸ್ಥಾನದ ಸಂಪರ್ಕ ಕಡಿತ

Suddi Udaya

ಕಾಯರ್ತಡ್ಕ : ಯುವತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ದುಬೈಯಲ್ಲಿ ನಡೆದ ಇಫ್ತಾರ್ ಕೂಟದಲ್ಲಿ ಕಾಶಿಪಟ್ಣ ದಾರುನ್ನೂರ್ ಎಜ್ಯುಕೇಶನ್ ಸೆಂಟರ್ ಅಧ್ಯಕ್ಷ ತ್ವಾಕಾ ಅಹ್ಮದ್ ಮುಸ್ಲಿಯಾರ್ ರಿಗೆ ಸನ್ಮಾನ

Suddi Udaya

ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಬೆಲೆ ಏರಿಕೆಯನ್ನು ವಿರೋಧಿಸಿ ಬೃಹತ್ ಪ್ರತಿಭಟನೆ: ಮಲ್ಲೇಶ್ವರದಿಂದ ಬಂದ ಪುಡಾರಿಯಿಂದ ದ್ವೇಷದ ರಾಜಕಾರಣ: ಹರೀಶ್ ಪೂಂಜ ಆರೋಪ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿಗೆ ಶೇ.98 ಫಲಿತಾಂಶ

Suddi Udaya
error: Content is protected !!