25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಫೆ.1-5: ನಿಟ್ಟಡೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರ ಬರ್ಕಜೆಯಲ್ಲಿ 9ನೇ ವರ್ಷದ ಜಾತ್ರಾ ಮಹೋತ್ಸವ

ವೇಣೂರು : ನಿಟ್ಟಡೆ ಗ್ರಾಮದ ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರದಲ್ಲಿ 9 ನೇ ವರ್ಷದ ಜಾತ್ರಾ ಮಹೋತ್ಸವವು ಫೆ.1 ರಿಂದ ಫೆ.5 ರವರೆಗೆ ನಡೆಯಲಿದೆ.

ಫೆ.1 ರಾತ್ರಿ ವಾಸ್ತು ಪೂಜೆ, ವಾಸ್ತು ಹೋಮ, ದಿಕ್ ಬಲಿ. ಫೆ.2 ನಾಗದೇವರ ಸನ್ನಿಧಿಯಲ್ಲಿ ನಾಗತಂಬಿಲ ಹಾಗೂ ದುರ್ಗಾದೇವಿ ಗುಡಿಯಲ್ಲಿ ಮಹಾ ಚಂಡಿಕಾ ಪೂಜೆ,

ಫೆ.3 108 ಕಳಶಾಭಿಷೇಕ, ಗಣಹೋಮ, ರಂಗ ಪೂಜೆ ಹಾಗೂ ಮಧ್ಯಾಹ್ನ ಮಹಾಪೂಜೆ ಮತ್ತು ಅನ್ನಸಂತರ್ಪಣೆ.

ಮಧ್ಯಾಹ್ನ 2.00ಗಂಟೆಯಿಂದ ಭಜನಾ ಕಾರ್ಯಕ್ರಮ ಹಾಗೂ 4.00 ಗಂಟೆಗೆ ವಿಶ್ವಾವಿಖ್ಯಾತ ಡಾ. ಸುಧಾಕರ್ ರವರಿಂದ ಜಾದೂ ಪ್ರದರ್ಶನ, ಸಂಜೆ 5 ಗಂಟೆಗೆ ಶ್ರೀ ರಾಮಕುಂಜೇಶ್ವರ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಕಲಾ ಸಿಂಚನ, ರಾತ್ರಿ 7 ಗಂಟೆಗೆ ಮಹಾಪೂಜೆ, ರಾತ್ರಿ 7.30 ಗಂಟೆಗೆ ವಿಠಲ ನಾಯಕ್ ಕಲ್ಲಡ್ಕರವರಿಂದ ವಿನೂತನ ಶೈಲಿಯ ಕಾರ್ಯಕ್ರಮ ಗೀತ ಸಾಹಿತ್ಯ ಸಂಭ್ರಮ ನಡೆಯಲಿದೆ.

ಫೆ.4 ಬೆಳಿಗ್ಗೆ 8 ಗಂಟೆಯಿಂದ ಪರಿವಾರ ದೈವಗಳ ಗಗ್ಗರ ಸೇವೆ, ಮೈಸಂದಾಯ, ದುಗಲಾಯ, ಪಂಜುರ್ಲಿ, ಮೈಯಂತಿ, ಮಂತ್ರದೇವತೆ, ಸನ್ಯಾಸಿ ಗುಳಿಗ, ಕೊರಗಜ್ಜ ಹಾಗೂ ಸಂಜೆ 6.00 ಗಂಟೆಗೆ 18 ಗುಳಿಗಗಳ ಗಗ್ಗರ ಸೇವೆ ಹಾಗೂ ರಾತ್ರಿ 8.00 ಕ್ಕೆ ಅನ್ನಸಂತರ್ಪಣೆ ಮತ್ತು ರಾತ್ರಿ 9.00 ಗಂಟೆಗೆ ಶಿವದೂತ ಗುಳಿಗ ನಾಟಕ ನಡೆಯಲಿದೆ.

ಫೆ.5 ಪರಿವಾರ ದೈವಗಳ ಪರ್ವಸೇವೆ ನಡೆಯಲಿದೆ ಎಂದು ಕ್ಷೇತ್ರದ ಧರ್ಮದರ್ಶಿ ರಮೇಶ್ ಬರ್ಕಜೆ ರವರು ತಿಳಿಸಿದ್ದಾರೆ.

Related posts

ಬೆಳ್ತಂಗಡಿ ರೋಟರಿ ಭವನದಲ್ಲಿ ಪ್ರಥಮ ಚಿಕಿತ್ಸೆ ಬಗ್ಗೆ ತರಬೇತಿ

Suddi Udaya

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ, ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಯಲ್ಲಿ ಭಿತ್ತಿಪತ್ರಿಕೆ ಅನಾವರಣ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನಿಂದ 4 ಮನೆ, 3 ತಂಗುದಾಣ ಹಸ್ತಾಂತರ : 50 ನೇ ವರ್ಷದ ಪ್ರಯುಕ್ತ ವೇದಿಕೆಯಲ್ಲಿ 50 ಸೇವಾ ಚಟುವಟಿಕೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಕೊಡಿಮರ ಸಮರ್ಪಣೆ

Suddi Udaya

ನಾಳ: ದ್ವಿಚಕ್ರ ವಾಹನ ಅಪಘಾತ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!