22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಫೆ.1-5: ನಿಟ್ಟಡೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರ ಬರ್ಕಜೆಯಲ್ಲಿ 9ನೇ ವರ್ಷದ ಜಾತ್ರಾ ಮಹೋತ್ಸವ

ವೇಣೂರು : ನಿಟ್ಟಡೆ ಗ್ರಾಮದ ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರದಲ್ಲಿ 9 ನೇ ವರ್ಷದ ಜಾತ್ರಾ ಮಹೋತ್ಸವವು ಫೆ.1 ರಿಂದ ಫೆ.5 ರವರೆಗೆ ನಡೆಯಲಿದೆ.

ಫೆ.1 ರಾತ್ರಿ ವಾಸ್ತು ಪೂಜೆ, ವಾಸ್ತು ಹೋಮ, ದಿಕ್ ಬಲಿ. ಫೆ.2 ನಾಗದೇವರ ಸನ್ನಿಧಿಯಲ್ಲಿ ನಾಗತಂಬಿಲ ಹಾಗೂ ದುರ್ಗಾದೇವಿ ಗುಡಿಯಲ್ಲಿ ಮಹಾ ಚಂಡಿಕಾ ಪೂಜೆ,

ಫೆ.3 108 ಕಳಶಾಭಿಷೇಕ, ಗಣಹೋಮ, ರಂಗ ಪೂಜೆ ಹಾಗೂ ಮಧ್ಯಾಹ್ನ ಮಹಾಪೂಜೆ ಮತ್ತು ಅನ್ನಸಂತರ್ಪಣೆ.

ಮಧ್ಯಾಹ್ನ 2.00ಗಂಟೆಯಿಂದ ಭಜನಾ ಕಾರ್ಯಕ್ರಮ ಹಾಗೂ 4.00 ಗಂಟೆಗೆ ವಿಶ್ವಾವಿಖ್ಯಾತ ಡಾ. ಸುಧಾಕರ್ ರವರಿಂದ ಜಾದೂ ಪ್ರದರ್ಶನ, ಸಂಜೆ 5 ಗಂಟೆಗೆ ಶ್ರೀ ರಾಮಕುಂಜೇಶ್ವರ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಕಲಾ ಸಿಂಚನ, ರಾತ್ರಿ 7 ಗಂಟೆಗೆ ಮಹಾಪೂಜೆ, ರಾತ್ರಿ 7.30 ಗಂಟೆಗೆ ವಿಠಲ ನಾಯಕ್ ಕಲ್ಲಡ್ಕರವರಿಂದ ವಿನೂತನ ಶೈಲಿಯ ಕಾರ್ಯಕ್ರಮ ಗೀತ ಸಾಹಿತ್ಯ ಸಂಭ್ರಮ ನಡೆಯಲಿದೆ.

ಫೆ.4 ಬೆಳಿಗ್ಗೆ 8 ಗಂಟೆಯಿಂದ ಪರಿವಾರ ದೈವಗಳ ಗಗ್ಗರ ಸೇವೆ, ಮೈಸಂದಾಯ, ದುಗಲಾಯ, ಪಂಜುರ್ಲಿ, ಮೈಯಂತಿ, ಮಂತ್ರದೇವತೆ, ಸನ್ಯಾಸಿ ಗುಳಿಗ, ಕೊರಗಜ್ಜ ಹಾಗೂ ಸಂಜೆ 6.00 ಗಂಟೆಗೆ 18 ಗುಳಿಗಗಳ ಗಗ್ಗರ ಸೇವೆ ಹಾಗೂ ರಾತ್ರಿ 8.00 ಕ್ಕೆ ಅನ್ನಸಂತರ್ಪಣೆ ಮತ್ತು ರಾತ್ರಿ 9.00 ಗಂಟೆಗೆ ಶಿವದೂತ ಗುಳಿಗ ನಾಟಕ ನಡೆಯಲಿದೆ.

ಫೆ.5 ಪರಿವಾರ ದೈವಗಳ ಪರ್ವಸೇವೆ ನಡೆಯಲಿದೆ ಎಂದು ಕ್ಷೇತ್ರದ ಧರ್ಮದರ್ಶಿ ರಮೇಶ್ ಬರ್ಕಜೆ ರವರು ತಿಳಿಸಿದ್ದಾರೆ.

Related posts

ವೇಣೂರು ಭಗವಾನ್ ಶ್ರೀ ಬಾಹುಬಲಿಗೆ ಮಹಾ ಮಸ್ತಕಾಭಿಷೇಕ: ಶ್ರೀ ಧ.ಮಂ. ಐಟಿಐ ವಿದ್ಯಾರ್ಥಿಗಳಿಂದ ಸ್ವಚ್ಚತಾ ಕಾರ್ಯ

Suddi Udaya

ಕಳೆದ ಎರಡೂವರೆ ದಶಕಗಳಿಂದ ಅಮೂಲ್ಯ ಸೇವೆ ಸಲ್ಲಿಸಿದ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್. ಎಚ್. ಮಂಜುನಾಥ್ ರವರಿಗೆ ಬೀಳ್ಕೊಡುಗೆ

Suddi Udaya

ಕುಂಟಿನಿ ಮದ್ರಸದಲ್ಲಿ 79 ನೇ ಸ್ವಾತಂತ್ರ್ಯ ಸಂಭ್ರಮ ಆಚರಣೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಿಂದ “ಸ್ವಚ್ಛ ನೇತ್ರಾವತಿ” ಬೃಹತ್ ಸ್ವಚ್ಛತಾ ಅಭಿಯಾನ

Suddi Udaya

ಸೆ.7-9: ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya

ಉಜಿರೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ರಾಣಿ ಅಬ್ಬಕ್ಕ ರಥಯಾತ್ರೆ

Suddi Udaya
error: Content is protected !!