22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಫೆ.1-5: ನಿಟ್ಟಡೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರ ಬರ್ಕಜೆಯಲ್ಲಿ 9ನೇ ವರ್ಷದ ಜಾತ್ರಾ ಮಹೋತ್ಸವ

ವೇಣೂರು : ನಿಟ್ಟಡೆ ಗ್ರಾಮದ ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರದಲ್ಲಿ 9 ನೇ ವರ್ಷದ ಜಾತ್ರಾ ಮಹೋತ್ಸವವು ಫೆ.1 ರಿಂದ ಫೆ.5 ರವರೆಗೆ ನಡೆಯಲಿದೆ.

ಫೆ.1 ರಾತ್ರಿ ವಾಸ್ತು ಪೂಜೆ, ವಾಸ್ತು ಹೋಮ, ದಿಕ್ ಬಲಿ. ಫೆ.2 ನಾಗದೇವರ ಸನ್ನಿಧಿಯಲ್ಲಿ ನಾಗತಂಬಿಲ ಹಾಗೂ ದುರ್ಗಾದೇವಿ ಗುಡಿಯಲ್ಲಿ ಮಹಾ ಚಂಡಿಕಾ ಪೂಜೆ,

ಫೆ.3 108 ಕಳಶಾಭಿಷೇಕ, ಗಣಹೋಮ, ರಂಗ ಪೂಜೆ ಹಾಗೂ ಮಧ್ಯಾಹ್ನ ಮಹಾಪೂಜೆ ಮತ್ತು ಅನ್ನಸಂತರ್ಪಣೆ.

ಮಧ್ಯಾಹ್ನ 2.00ಗಂಟೆಯಿಂದ ಭಜನಾ ಕಾರ್ಯಕ್ರಮ ಹಾಗೂ 4.00 ಗಂಟೆಗೆ ವಿಶ್ವಾವಿಖ್ಯಾತ ಡಾ. ಸುಧಾಕರ್ ರವರಿಂದ ಜಾದೂ ಪ್ರದರ್ಶನ, ಸಂಜೆ 5 ಗಂಟೆಗೆ ಶ್ರೀ ರಾಮಕುಂಜೇಶ್ವರ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಕಲಾ ಸಿಂಚನ, ರಾತ್ರಿ 7 ಗಂಟೆಗೆ ಮಹಾಪೂಜೆ, ರಾತ್ರಿ 7.30 ಗಂಟೆಗೆ ವಿಠಲ ನಾಯಕ್ ಕಲ್ಲಡ್ಕರವರಿಂದ ವಿನೂತನ ಶೈಲಿಯ ಕಾರ್ಯಕ್ರಮ ಗೀತ ಸಾಹಿತ್ಯ ಸಂಭ್ರಮ ನಡೆಯಲಿದೆ.

ಫೆ.4 ಬೆಳಿಗ್ಗೆ 8 ಗಂಟೆಯಿಂದ ಪರಿವಾರ ದೈವಗಳ ಗಗ್ಗರ ಸೇವೆ, ಮೈಸಂದಾಯ, ದುಗಲಾಯ, ಪಂಜುರ್ಲಿ, ಮೈಯಂತಿ, ಮಂತ್ರದೇವತೆ, ಸನ್ಯಾಸಿ ಗುಳಿಗ, ಕೊರಗಜ್ಜ ಹಾಗೂ ಸಂಜೆ 6.00 ಗಂಟೆಗೆ 18 ಗುಳಿಗಗಳ ಗಗ್ಗರ ಸೇವೆ ಹಾಗೂ ರಾತ್ರಿ 8.00 ಕ್ಕೆ ಅನ್ನಸಂತರ್ಪಣೆ ಮತ್ತು ರಾತ್ರಿ 9.00 ಗಂಟೆಗೆ ಶಿವದೂತ ಗುಳಿಗ ನಾಟಕ ನಡೆಯಲಿದೆ.

ಫೆ.5 ಪರಿವಾರ ದೈವಗಳ ಪರ್ವಸೇವೆ ನಡೆಯಲಿದೆ ಎಂದು ಕ್ಷೇತ್ರದ ಧರ್ಮದರ್ಶಿ ರಮೇಶ್ ಬರ್ಕಜೆ ರವರು ತಿಳಿಸಿದ್ದಾರೆ.

Related posts

ಜಾರಿಗೆಬೈಲು ಬದ್ರಿಯಾ ಹಿದಾಯತುಲ್ ಇಸ್ಲಾಂ ಮದರಸ ಸಮಿತಿ ಹಾಗೂ ಗಲ್ಫ್ ಸಮಿತಿ ನೇತೃತ್ವದಲ್ಲಿ; ಜ. 7 : ಪರಿಮ ಜಾರಿಗೆ ಬೈಲಿನಲ್ಲಿ ಏಕದಿನ ಮತ ಪ್ರಭಾಷಣ – ಸನ್ಮಾನ ಕಾರ್ಯಕ್ರಮ

Suddi Udaya

ಕಾರಿಂಜ ಶ್ರೀ ವನಶಾಸ್ತರ ಶ್ರೀ ವೀರಭದ್ರ ದೇವಸ್ಥಾನ ಜೀರ್ಣೋದ್ದಾರ ಮತ್ತು ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ

Suddi Udaya

ಪುದುವೆಟ್ಟು: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ಅನಧಿಕೃತವಾಗಿ ಕಟ್ಟಡ ನಿರ್ಮಿಸುತ್ತಿದ್ದು ಸ್ಥಳ ಪರಿಶೀಲನೆ ವೇಳೆ ಗ್ರಾಮ ಆಡಳಿತ ಅಧಿಕಾರಿಯ ಮೇಲೆ ಹಲ್ಲೆ ಆರೋಪ: ಹಲ್ಲೆ ಮಾಡಿರುವ ಆರೋಪಿತರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಪೊಲೀಸ್ ಉಪನಿರೀಕ್ಷಕರಿಗೆ ಸೂಕ್ತ ನಿರ್ದೇಶನ ನೀಡಲು ಜಿಲ್ಲಾಧಿಕಾರಿಗಳಿಗೆ ಪತ್ರ

Suddi Udaya

ನಿಡಿಗಲ್ ನೇತ್ರಾವತಿ ನದಿಯಲ್ಲಿ ಸಿಕ್ಕಿಹಾಕಿಕೊಂಡ ದನಗಳ ರಕ್ಷಣೆ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ

Suddi Udaya
error: Content is protected !!