September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಫೆ.1-5: ನಿಟ್ಟಡೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರ ಬರ್ಕಜೆಯಲ್ಲಿ 9ನೇ ವರ್ಷದ ಜಾತ್ರಾ ಮಹೋತ್ಸವ

ವೇಣೂರು : ನಿಟ್ಟಡೆ ಗ್ರಾಮದ ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರದಲ್ಲಿ 9 ನೇ ವರ್ಷದ ಜಾತ್ರಾ ಮಹೋತ್ಸವವು ಫೆ.1 ರಿಂದ ಫೆ.5 ರವರೆಗೆ ನಡೆಯಲಿದೆ.

ಫೆ.1 ರಾತ್ರಿ ವಾಸ್ತು ಪೂಜೆ, ವಾಸ್ತು ಹೋಮ, ದಿಕ್ ಬಲಿ. ಫೆ.2 ನಾಗದೇವರ ಸನ್ನಿಧಿಯಲ್ಲಿ ನಾಗತಂಬಿಲ ಹಾಗೂ ದುರ್ಗಾದೇವಿ ಗುಡಿಯಲ್ಲಿ ಮಹಾ ಚಂಡಿಕಾ ಪೂಜೆ,

ಫೆ.3 108 ಕಳಶಾಭಿಷೇಕ, ಗಣಹೋಮ, ರಂಗ ಪೂಜೆ ಹಾಗೂ ಮಧ್ಯಾಹ್ನ ಮಹಾಪೂಜೆ ಮತ್ತು ಅನ್ನಸಂತರ್ಪಣೆ.

ಮಧ್ಯಾಹ್ನ 2.00ಗಂಟೆಯಿಂದ ಭಜನಾ ಕಾರ್ಯಕ್ರಮ ಹಾಗೂ 4.00 ಗಂಟೆಗೆ ವಿಶ್ವಾವಿಖ್ಯಾತ ಡಾ. ಸುಧಾಕರ್ ರವರಿಂದ ಜಾದೂ ಪ್ರದರ್ಶನ, ಸಂಜೆ 5 ಗಂಟೆಗೆ ಶ್ರೀ ರಾಮಕುಂಜೇಶ್ವರ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಕಲಾ ಸಿಂಚನ, ರಾತ್ರಿ 7 ಗಂಟೆಗೆ ಮಹಾಪೂಜೆ, ರಾತ್ರಿ 7.30 ಗಂಟೆಗೆ ವಿಠಲ ನಾಯಕ್ ಕಲ್ಲಡ್ಕರವರಿಂದ ವಿನೂತನ ಶೈಲಿಯ ಕಾರ್ಯಕ್ರಮ ಗೀತ ಸಾಹಿತ್ಯ ಸಂಭ್ರಮ ನಡೆಯಲಿದೆ.

ಫೆ.4 ಬೆಳಿಗ್ಗೆ 8 ಗಂಟೆಯಿಂದ ಪರಿವಾರ ದೈವಗಳ ಗಗ್ಗರ ಸೇವೆ, ಮೈಸಂದಾಯ, ದುಗಲಾಯ, ಪಂಜುರ್ಲಿ, ಮೈಯಂತಿ, ಮಂತ್ರದೇವತೆ, ಸನ್ಯಾಸಿ ಗುಳಿಗ, ಕೊರಗಜ್ಜ ಹಾಗೂ ಸಂಜೆ 6.00 ಗಂಟೆಗೆ 18 ಗುಳಿಗಗಳ ಗಗ್ಗರ ಸೇವೆ ಹಾಗೂ ರಾತ್ರಿ 8.00 ಕ್ಕೆ ಅನ್ನಸಂತರ್ಪಣೆ ಮತ್ತು ರಾತ್ರಿ 9.00 ಗಂಟೆಗೆ ಶಿವದೂತ ಗುಳಿಗ ನಾಟಕ ನಡೆಯಲಿದೆ.

ಫೆ.5 ಪರಿವಾರ ದೈವಗಳ ಪರ್ವಸೇವೆ ನಡೆಯಲಿದೆ ಎಂದು ಕ್ಷೇತ್ರದ ಧರ್ಮದರ್ಶಿ ರಮೇಶ್ ಬರ್ಕಜೆ ರವರು ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಉಜಿರೆ: “ಯಕ್ಷಸಿರಿ” ಪ್ರಶಸ್ತಿಗೆ ಆಯ್ಕೆಯಾದ ದಿವಾಕರ್ ದಾಸ್ ಕಾವಳಕಟ್ಟೆ ರವರಿಗೆ ಗೌರವಾರ್ಪಣೆ

Suddi Udaya

ನಾಲ್ಕೂರು: ರಸ್ತೆ ಬದಿಯ ಕಳೆಗಿಡಗಂಟಿಗಳನ್ನು ತೆರವುಗೊಳಿಸಿ ಮಾದರಿಯಾದ ಜಗದೀಶ್ ಬಳ್ಳಿದಡ್ಡ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ನಿಡ್ಲೆ ಅಗ್ರಿಲೀಫ್ ಸಂಸ್ಥೆಗೆ ಝೆಡ್ ಬೆಳ್ಳಿ ಪ್ರಮಾಣ ಪತ್ರ

Suddi Udaya

ಪಟ್ರಮೆ: ಕುಶಾಲಪ್ಪ ನಾಯ್ಕ್ ರ ಮನೆಗೆ ತೆಂಗಿನ ಮರ ಬಿದ್ದು, ಹಾನಿ

Suddi Udaya
error: Content is protected !!