30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

ಅಳದಂಗಡಿ: ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಅಂಗವಾಗಿ ಜ.18 ರಂದು ಧಾರ್ಮಿಕ ಸಮಾರಂಭ ನಡೆಯಿತು.

ಅಳದಂಗಡಿ ಚರ್ಚ್ ಧರ್ಮಗುರುಗಳಾದ ರೆ.ಫಾ ಎಲ್ಯಾಸ್ ಡಿ.ಸೋಜಾ ಮಾತಾನಾಡಿ ಎಲ್ಲಾ ಧರ್ಮ ಜಾತಿಯವರು ಶಾಂತಿ ಸಹಬಾಳ್ವೆಯಿಂದ ಬದುಕೋಣ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಬಡಗಕಾರಂದೂರು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಶ್ರೀನಿವಾಸ ರಾವ್‌, ಸುಕ್ಕೇರಿ ಶ್ರೀರಾಮ ಶಾಲೆಯ ಅಧ್ಯಕ್ಷ ರಾಜು ಪೂಜಾರಿ, ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ, ಉಪಾಧ್ಯಕ್ಷ ಜನಾರ್ಧನ ಕೊಡಂಗೆ, ಗ್ರಾ.ಪಂ.ಮಾಜಿ ಅಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲ್ ಭಾಗವಹಿಸಿದ್ದರು.

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದರರಾದ ಶಿವಪ್ರಸಾದ್‌ ಅಜಿಲರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ನೆರವೇರಿಸಲಾಯಿತು.

ಸ್ಪರ್ಧಾ ವಿಜೇತರ ಪಟ್ಟಿಯನ್ನು ಶಿಕ್ಷಕರಾದ ಸುನಿಲ್ ಬಾಪಟ್ ವಾಚಿಸಿದರು. ಕಾರ್ಯಕ್ರಮದಲ್ಲಿ ಮೋಹನ್ ಎ.ದಾಸ್ ಉಪಸ್ಥಿತರಿದ್ದರು.

ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್‌ ಸ್ವಾಗತಿಸಿ, ಸಂದೀಪ್ ನೀರಲ್ಕೆ ಕಾರ್ಯಕ್ರಮ ನಿರೂಪಿಸಿದರು.

ಚಿತ್ರ: ಜ್ಯೋತಿಕಾ ಅಳದಂಗಡಿ

Related posts

ತೋಟತ್ತಾಡಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ದಿನಕರ ನಾಯಕ್ ಬೆಳ್ತಂಗಡಿ ಮಾದರಿ ಶಾಲೆಗೆ ವಗಾ೯ವಣೆ

Suddi Udaya

ಉಜಿರೆ: ಅನುಗ್ರಹ ಆಂ.ಮಾ. ಶಾಲೆಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಮೇ.15 ರಿಂದ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಶೇ. 50% ಡಿಸ್ಕೌಂಟ್ ಸೇಲ್: ಸೀರೆಗಳು ಕೇವಲ ರೂ. 99 ಕ್ಕೆ ಲಭ್ಯ

Suddi Udaya

ಧರ್ಮಸ್ಥಳ-ಮಂಗಳೂರು ವೇಗದೂತ ಬಸ್ಸಿನ ಬೇಡಿಕೆಗಾಗಿ ರಾಜ್ಯ ಸಾರಿಗೆ ಅಧಿಕಾರಿಗಳನ್ನು ಭೇಟಿಯಾದ ಎಸ್‌ಡಿಪಿಐ ಬೆಳ್ತಂಗಡಿ ನಿಯೋಗ

Suddi Udaya

ಸೋಮಂತ್ತಡ್ಕದಲ್ಲಿ ಶ್ರೀ ಕಟೀಲೇಶ್ವರಿ ಜನರಲ್ ಸ್ಟೋರ್ ಶುಭಾರಂಭ

Suddi Udaya

ಮಾ.23-27: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya
error: Content is protected !!