24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕ್ಷುಲಕ ವಿಚಾರದಲ್ಲಿ ಮಕ್ಕಳ ಜೊತೆ ಗಲಾಟೆ: ಬೆಂಗಳೂರಿನ ವೃದ್ಧ ಧಮ೯ಸ್ಥಳಕ್ಕೆ ಬಂದು ಖಾಸಗಿ ಲಾಡ್ಜ್ ನಲ್ಲಿ ವಿಷಸೇವಿಸಿ ಆತ್ಮಹತ್ಯೆ

ಧರ್ಮಸ್ಥಳ: ಮನೆಯಲ್ಲಿ ಕ್ಷುಲಕ ವಿಚಾರದಲ್ಲಿ ಮಕ್ಕಳ ಜೊತೆ ಗಲಾಟೆ ನಡೆದಿದ್ದು. ನಂತರ ಐದು ಮಕ್ಕಳ ತಂದೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬಂದು ಖಾಸಗಿ ಲಾಡ್ಜ್ ನಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಸಕಾಲಕ್ಕೆ ಧರ್ಮಸ್ಥಳ ಪೊಲೀಸರು ಆಸ್ಪತ್ರೆಗೆ ಸೇರಿ ಒಂದು ದಿನದ ಬಳಿಕ ವೃದ್ಧ ಸಾವನ್ನಪ್ಪಿದ್ದ ಘಟನೆ ನಡೆದಿದೆ.

ಘಟನೆ ವಿವರ: ಬೆಂಗಳೂರು ಉತ್ತರದ 06, 13 ನೇ ‘ಎ’ ಕ್ರಾಸ್, ಹೊಯ್ಸಳ ನಗರ, ಸುಂಕದಕಟ್ಟೆ ನಿವಾಸಿ ದಿ.ವೆಂಕಪ್ಪ ಯಾನೆ ಅಪ್ಪಣ್ಣ ಎಂಬವರ ಮಗನಾದ ಹೆಚ್.ವಿ.ಚಂದ್ರಶೇಖರ್ (89) ಎಂಬವರ ಮನೆಯಲ್ಲಿ ಕ್ಷುಲಕ ವಿಚಾರದಲ್ಲಿ ಗಲಾಟೆ ನಡೆದಿದೆ.ಈ ಗಲಾಟೆಯಿಂದ ನೊಂದು ಮನೆಬಿಟ್ಟು ಬೆಂಗಳೂರಿನಿಂದ ಬಸ್ ಮೂಲಕ ಧರ್ಮಸ್ಥಳಕ್ಕೆ ಬಂದು ನಂತರ ಜ.17 ರಂದು ಖಾಸಗಿ ಲಾಡ್ಜ್ ನಲ್ಲಿ ರೂಂ ಪಡೆದು, ರೂಂ ನಲ್ಲಿ ವಿಷ ಸೇವಿಸಿದ್ದಾರೆ.ಬಳಿಕ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದನ್ನು ರೂಂ ಬಾಯ್ ನೋಡಿ ತಕ್ಷಣ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ತಕ್ಷಣ ಧರ್ಮಸ್ಥಳ ಪೊಲೀಸ್‌ ಠಾಣೆಯ ಸಬ್ ಇನ್ಸೆಕ್ಟರ್ ಅನಿಲ್ ಕುಮಾರ್ ಮತ್ತು ತಂಡ ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಿಸದೆ ಜ.18 ರಂದು ಮಧ್ಯಾಹ್ನ ಮೃತಪಟ್ಟಿದ್ದಾರೆ.

ಧರ್ಮಸ್ಥಳ ಪೊಲೀಸರು ಮೃತಪಟ್ಟ ವೃದ್ಧನ ಬ್ಯಾಗ್ ನಲ್ಲಿದ್ದ ಚೀಟಿ ಹಾಗೂ ಆಧಾರ್ ಕಾರ್ಡ್ ಮೂಲಕ ಮನೆಯವರನ್ನು ಮಕ್ಕಳನ್ನು ಸಂಪರ್ಕಿಸಿದರೂ ಯಾರು ಕೂಡ ಮೃತದೇಹ ಪಡೆದುಕೊಳ್ಳಲು ನಿರಾಕರಿಸಿದ್ದು, ಮೃತದೇಹ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಇದೆ.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ

Suddi Udaya

ಗಡಾಯಿಕಲ್ಲು ಚಾರಣಕ್ಕೆ ಮುಂದಿನ ಆದೇಶದವರೆಗೆ ನಿಷೇಧ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕಮೋಡ್ ವೀಲ್‌ಚೇರ್ ವಿತರಣೆ

Suddi Udaya

ಮಹಾ ಯೋಜನೆ: ಬೆಳ್ತಂಗಡಿ ಪಟ್ಟಣ ಪಂಚಾಯತನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಯೋಜನೆಯ ನಿಯಮಗಳನ್ನು ಅನ್ವಯಿಸದಂತೆ ಕ್ರಮ ತೆಗೆದುಕೊಳ್ಳಲು ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಆಗ್ರಹ: ನಗರಾಭಿವೃದ್ದಿ ಸಚಿವರಿಂದ ಸಕಾರಾತ್ಮಕವಾಗಿ ಸ್ಪಂದನೆ ಸಮಸ್ಯೆ ಪರಿಹರಿಸುವ ಭರವಸೆ

Suddi Udaya

ಮಡಂತ್ಯರು ವಲಯದಲ್ಲಿ ನೂತನವಾಗಿ ಆಯ್ಕೆಯಾದ ಒಕ್ಕೂಟದ ಪದಾಧಿಕಾರಿಗಳಿಗೆ ತರಬೇತಿ ಕಾರ್ಯಗಾರ

Suddi Udaya

ರೆಖ್ಯ : ಮರದ ಕೊಂಬೆ ಮುರಿದು ಬಿದ್ದು ಮನೆಯ ಛಾವಣಿಗೆ ಹಾನಿ: ಶಿರಾಡಿ ಗ್ರಾಮ ವಿಕಾಸ ತಂಡ ಹಾಗೂ ಕೊಕ್ಕಡ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ದುರಸ್ತಿ ಕಾರ್ಯ

Suddi Udaya
error: Content is protected !!