September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕ್ಷುಲಕ ವಿಚಾರದಲ್ಲಿ ಮಕ್ಕಳ ಜೊತೆ ಗಲಾಟೆ: ಬೆಂಗಳೂರಿನ ವೃದ್ಧ ಧಮ೯ಸ್ಥಳಕ್ಕೆ ಬಂದು ಖಾಸಗಿ ಲಾಡ್ಜ್ ನಲ್ಲಿ ವಿಷಸೇವಿಸಿ ಆತ್ಮಹತ್ಯೆ

ಧರ್ಮಸ್ಥಳ: ಮನೆಯಲ್ಲಿ ಕ್ಷುಲಕ ವಿಚಾರದಲ್ಲಿ ಮಕ್ಕಳ ಜೊತೆ ಗಲಾಟೆ ನಡೆದಿದ್ದು. ನಂತರ ಐದು ಮಕ್ಕಳ ತಂದೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬಂದು ಖಾಸಗಿ ಲಾಡ್ಜ್ ನಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಸಕಾಲಕ್ಕೆ ಧರ್ಮಸ್ಥಳ ಪೊಲೀಸರು ಆಸ್ಪತ್ರೆಗೆ ಸೇರಿ ಒಂದು ದಿನದ ಬಳಿಕ ವೃದ್ಧ ಸಾವನ್ನಪ್ಪಿದ್ದ ಘಟನೆ ನಡೆದಿದೆ.

ಘಟನೆ ವಿವರ: ಬೆಂಗಳೂರು ಉತ್ತರದ 06, 13 ನೇ ‘ಎ’ ಕ್ರಾಸ್, ಹೊಯ್ಸಳ ನಗರ, ಸುಂಕದಕಟ್ಟೆ ನಿವಾಸಿ ದಿ.ವೆಂಕಪ್ಪ ಯಾನೆ ಅಪ್ಪಣ್ಣ ಎಂಬವರ ಮಗನಾದ ಹೆಚ್.ವಿ.ಚಂದ್ರಶೇಖರ್ (89) ಎಂಬವರ ಮನೆಯಲ್ಲಿ ಕ್ಷುಲಕ ವಿಚಾರದಲ್ಲಿ ಗಲಾಟೆ ನಡೆದಿದೆ.ಈ ಗಲಾಟೆಯಿಂದ ನೊಂದು ಮನೆಬಿಟ್ಟು ಬೆಂಗಳೂರಿನಿಂದ ಬಸ್ ಮೂಲಕ ಧರ್ಮಸ್ಥಳಕ್ಕೆ ಬಂದು ನಂತರ ಜ.17 ರಂದು ಖಾಸಗಿ ಲಾಡ್ಜ್ ನಲ್ಲಿ ರೂಂ ಪಡೆದು, ರೂಂ ನಲ್ಲಿ ವಿಷ ಸೇವಿಸಿದ್ದಾರೆ.ಬಳಿಕ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದನ್ನು ರೂಂ ಬಾಯ್ ನೋಡಿ ತಕ್ಷಣ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ತಕ್ಷಣ ಧರ್ಮಸ್ಥಳ ಪೊಲೀಸ್‌ ಠಾಣೆಯ ಸಬ್ ಇನ್ಸೆಕ್ಟರ್ ಅನಿಲ್ ಕುಮಾರ್ ಮತ್ತು ತಂಡ ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಿಸದೆ ಜ.18 ರಂದು ಮಧ್ಯಾಹ್ನ ಮೃತಪಟ್ಟಿದ್ದಾರೆ.

ಧರ್ಮಸ್ಥಳ ಪೊಲೀಸರು ಮೃತಪಟ್ಟ ವೃದ್ಧನ ಬ್ಯಾಗ್ ನಲ್ಲಿದ್ದ ಚೀಟಿ ಹಾಗೂ ಆಧಾರ್ ಕಾರ್ಡ್ ಮೂಲಕ ಮನೆಯವರನ್ನು ಮಕ್ಕಳನ್ನು ಸಂಪರ್ಕಿಸಿದರೂ ಯಾರು ಕೂಡ ಮೃತದೇಹ ಪಡೆದುಕೊಳ್ಳಲು ನಿರಾಕರಿಸಿದ್ದು, ಮೃತದೇಹ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಇದೆ.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯ ವತಿಯಿಂದ ಹೊಸವರ್ಷದ ಪ್ರಯುಕ್ತ ಸೌಹಾರ್ದ ಕೂಟ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟು ಹಬ್ಬದ ಸಂಭ್ರಮ: ಭಾರತೀಯ ಜೀವ ವಿಮಾ ನಿಗಮ ದಿಂದ ಡಾ.ಹೆಗ್ಗಡೆಯವರಿಗೆ ಗೌರವಾರ್ಪಣೆ; ಡಾ. ಹೆಗ್ಗಡೆಯವರ ಭಾವಚಿತ್ರವಿರುವ ಅಂಚೆ ಚೀಟಿ ಬಿಡುಗಡೆ

Suddi Udaya

ಜೆಸಿಐ ಬೆಳ್ತಂಗಡಿ ಜೆಸಿ ಸಪ್ತಾಹ ಅಂಗವಾಗಿ ಗಣೇಶ್ ಆಸ್ಪತ್ರೆ ಇದರ ಸಹಭಾಗಿತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

Suddi Udaya

ಕೆಂಪುಕಲ್ಲು-ಮರಳು ಸಮಸ್ಯೆ, ಟಿಪ್ಪರ್ ಚಾಲಕ-ಮಾಲಕರು ಕಂಗಾಲು

Suddi Udaya

ರಸ್ತೆ ಬದಿ ವಾಹನಕ್ಕಾಗಿ ತನ್ನ ತಾಯಿ ಜೊತೆ ಕಾಯುತ್ತಿದ್ದ ಪುಟ್ಟ ಬಾಲಕಿ ಸಾತ್ವಿಕಾ ದ್ವಿಚಕ್ರ ವಾಹನ ‌ ಡಿಕ್ಕಿ ಹೊಡೆದು ಗಾಯಗೊಂಡು ಆಸ್ಪತ್ರೆಗೆ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್‌ ಆಚರಣೆ

Suddi Udaya
error: Content is protected !!