22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕ್ಷುಲಕ ವಿಚಾರದಲ್ಲಿ ಮಕ್ಕಳ ಜೊತೆ ಗಲಾಟೆ: ಬೆಂಗಳೂರಿನ ವೃದ್ಧ ಧಮ೯ಸ್ಥಳಕ್ಕೆ ಬಂದು ಖಾಸಗಿ ಲಾಡ್ಜ್ ನಲ್ಲಿ ವಿಷಸೇವಿಸಿ ಆತ್ಮಹತ್ಯೆ

ಧರ್ಮಸ್ಥಳ: ಮನೆಯಲ್ಲಿ ಕ್ಷುಲಕ ವಿಚಾರದಲ್ಲಿ ಮಕ್ಕಳ ಜೊತೆ ಗಲಾಟೆ ನಡೆದಿದ್ದು. ನಂತರ ಐದು ಮಕ್ಕಳ ತಂದೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬಂದು ಖಾಸಗಿ ಲಾಡ್ಜ್ ನಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಸಕಾಲಕ್ಕೆ ಧರ್ಮಸ್ಥಳ ಪೊಲೀಸರು ಆಸ್ಪತ್ರೆಗೆ ಸೇರಿ ಒಂದು ದಿನದ ಬಳಿಕ ವೃದ್ಧ ಸಾವನ್ನಪ್ಪಿದ್ದ ಘಟನೆ ನಡೆದಿದೆ.

ಘಟನೆ ವಿವರ: ಬೆಂಗಳೂರು ಉತ್ತರದ 06, 13 ನೇ ‘ಎ’ ಕ್ರಾಸ್, ಹೊಯ್ಸಳ ನಗರ, ಸುಂಕದಕಟ್ಟೆ ನಿವಾಸಿ ದಿ.ವೆಂಕಪ್ಪ ಯಾನೆ ಅಪ್ಪಣ್ಣ ಎಂಬವರ ಮಗನಾದ ಹೆಚ್.ವಿ.ಚಂದ್ರಶೇಖರ್ (89) ಎಂಬವರ ಮನೆಯಲ್ಲಿ ಕ್ಷುಲಕ ವಿಚಾರದಲ್ಲಿ ಗಲಾಟೆ ನಡೆದಿದೆ.ಈ ಗಲಾಟೆಯಿಂದ ನೊಂದು ಮನೆಬಿಟ್ಟು ಬೆಂಗಳೂರಿನಿಂದ ಬಸ್ ಮೂಲಕ ಧರ್ಮಸ್ಥಳಕ್ಕೆ ಬಂದು ನಂತರ ಜ.17 ರಂದು ಖಾಸಗಿ ಲಾಡ್ಜ್ ನಲ್ಲಿ ರೂಂ ಪಡೆದು, ರೂಂ ನಲ್ಲಿ ವಿಷ ಸೇವಿಸಿದ್ದಾರೆ.ಬಳಿಕ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದನ್ನು ರೂಂ ಬಾಯ್ ನೋಡಿ ತಕ್ಷಣ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ತಕ್ಷಣ ಧರ್ಮಸ್ಥಳ ಪೊಲೀಸ್‌ ಠಾಣೆಯ ಸಬ್ ಇನ್ಸೆಕ್ಟರ್ ಅನಿಲ್ ಕುಮಾರ್ ಮತ್ತು ತಂಡ ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಿಸದೆ ಜ.18 ರಂದು ಮಧ್ಯಾಹ್ನ ಮೃತಪಟ್ಟಿದ್ದಾರೆ.

ಧರ್ಮಸ್ಥಳ ಪೊಲೀಸರು ಮೃತಪಟ್ಟ ವೃದ್ಧನ ಬ್ಯಾಗ್ ನಲ್ಲಿದ್ದ ಚೀಟಿ ಹಾಗೂ ಆಧಾರ್ ಕಾರ್ಡ್ ಮೂಲಕ ಮನೆಯವರನ್ನು ಮಕ್ಕಳನ್ನು ಸಂಪರ್ಕಿಸಿದರೂ ಯಾರು ಕೂಡ ಮೃತದೇಹ ಪಡೆದುಕೊಳ್ಳಲು ನಿರಾಕರಿಸಿದ್ದು, ಮೃತದೇಹ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಇದೆ.

Related posts

ಬಿಜೆಪಿಯಿಂದ ಹಣ ಹಂಚಿಕೆ ಆರೋಪ : ಮಾಜಿ ಶಾಸಕರಿಂದ ಠಾಣೆಗೆ ದೂರು: ಫ್ಲೈಯಿಂಗ್ ಸ್ಕ್ಯಾಡ್‌ನಿಂದ ಕಾರಿನ ಪರಿಶೀಲನೆ : ಮುಂದುವರಿದ ತನಿಖೆ

Suddi Udaya

ವೇಣೂರಿನಲ್ಲಿ ಪ್ರಥಮ ದರ್ಜೆ ಕಾಲೇಜನ್ನು ಆರಂಭಿಸಲು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya

ಪಟ್ರಮೆ ಗ್ರಾ.ಪಂ. ಮಟ್ಟದ ಸ್ಪಂದನ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಆಚರಣೆ

Suddi Udaya

ಜ.28 ರಂದು ಉಜಿರೆಯ ಆರು ಕೇಂದ್ರದಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ

Suddi Udaya

ಕೆಎಸ್ ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು ಪ್ರಕರಣ: ಬಸ್ ಚಾಲಕನಿಗೆ ಶಿಕ್ಷೆ ಹಾಗೂ ದಂಡ ಪ್ರಕಟ

Suddi Udaya
error: Content is protected !!