ಜ.28 ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ರಕ್ತೇಶ್ವರಿ ಮತ್ತು ಪಂಜುರ್ಲಿ ದೈವಗಳ ಪ್ರತಿಷ್ಠಾಪನೆ: ಫೆ.2 ರಂದು ದೈವಗಳ ನರ್ತನ ಸೇವೆ

Suddi Udaya

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಜ.28 ರಂದು ರಕ್ತೇಶ್ವರಿ ಮತ್ತು ಪಂಜುರ್ಲಿ ದೈವಗಳ ಪ್ರತಿಷ್ಠಾಪನೆಗೊಳ್ಳಲಿದ್ದು ಬಳಿಕ ಫೆ.02 ರಂದು ಸೌತಡ್ಕ ಶ್ರೀ ಮಹಾ ಗಣಪತಿ ದೇವಸ್ಥಾನದಲ್ಲಿ ನೂತನವಾಗಿ ಪ್ರತಿಷ್ಠಾಪನೆ ಮಾಡಿದ ದೈವಗಳಿಗೆ ನರ್ತನ ಸೇವೆ ನಡೆಸಲು ದೈವ ಪರಿಚಾರಕರು, ಪೂಜಾರಿಗಳು, ಮಡಿವಾಳ, ದೈವ ನರ್ತಕರುಗಳಿಗೆ ಜ.19 ರಂದು ಸಂಪ್ರದಾಯದಂತೆ ದೇವಳದಲ್ಲಿ ವೀಳ್ಯ ನೀಡಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ, ಅರ್ಚಕರು, ಆಡಳಿತ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Leave a Comment

error: Content is protected !!