22.2 C
ಪುತ್ತೂರು, ಬೆಳ್ತಂಗಡಿ
May 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಆಡಳಿತ ಸೌಧದಲ್ಲಿ ಮಹಾ ಯೋಗಿ ವೇಮನ ಜಯಂತಿ ಆಚರಣೆ

ಬೆಳ್ತಂಗಡಿ: ಮಹಾ ಯೋಗಿ ವೇಮನ ಅವರು ಮೂಲತಃ ಆಂಧ್ರಪ್ರದೇಶದ ರೆಡ್ಡಿ ಜನಾಂಗದವರು. ಕರ್ನಾಟಕದಲ್ಲಿ ರೆಡ್ಡಿ ಜನಾಂಗ ಹಾಸುಹೊಕ್ಕಾಗಿದೆ. ವೇಮ ಎಂಬುದು ಕಾವ್ಯ ನಾಮ. ಅದ್ಭುತ ತ್ರಿಪದಿಗಳನ್ನು ರಚಿಸಿದ್ದಾರೆ. ವೇಮನ ತೆಲುಗು ಕವಿಯಾದರೂ ಅವರು ಕೊಡುಗೆ ಸಮಾಜಕ್ಕೆ ಅಪಾರವಾಗಿದೆ. ದೇಶಾಭಿಮಾನ ಬೆಳೆಸಿಕೊಂಡು, ಮುಂದಿನ ಜನಾಂಗಕ್ಕೆ ಸಂತರ ಬಗ್ಗೆ ತಿಳಿಸಬೇಕು ಎಂದು ಕೊಕ್ಕಡ ಹೋಬಳಿ ಕಂದಾಯ ನಿರೀಕ್ಷಕ ಪಾವಡಪ್ಪ ದೊಡ್ಡಮನಿ ಹೇಳಿದರು.

ಅವರು ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಜ.19ರಂದು ನಡೆದ ಮಹಾ ಯೋಗಿ ವೇಮನ ಜಯಂತಿ ಆಚರಣೆಯಲ್ಲಿ ಮಾತನಾಡಿದರು.

ತಹಶೀಲ್ದಾರ್ ಪೃಥ್ವಿ ಸಾನಿಕಂ ಅಧ್ಯಕ್ಷತೆ ವಹಿಸಿದ್ದರು. ಉಪ ತಹಶೀಲ್ದಾರ್ ರವಿಕುಮಾರ್, ದಯಾನಂದ್ ಹೆಗ್ಡೆ ಜಯ ಕೆ. ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಗ್ರಾಮ ಆಡಳಿತ ಅಧಿಕಾರಿ ಹೇಮಾ ಕಾರ್ಯಕ್ರಮ ನಿರ್ವಹಿಸಿದರು. ಗ್ರಾಮ ಆಡಳಿತ ಅಧಿಕಾರಿ ಪರಮೇಶ್ವರ್ ಸಹಕರಿಸಿದರು.

Related posts

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಹಾಗೂ ವಾಣಿ ವಿದ್ಯಾ ಸಂಸ್ಥೆಗಳ ನೂತನ ಕಟ್ಟಡ ಹಾಗೂ ಸಭಾಭವನದ ಲೋಕಾರ್ಪಣಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪ್ರೇಕ್ಷಕರ ಮನಸ್ಸಲ್ಲಿ ಸಹಿ ಹಾಕಲು ರೆಡಿಯಾದ ದಸ್ಕತ್

Suddi Udaya

ವಾಣಿ ಕಾಲೇಜು: ಸಮಾನ ನಾಗರಿಕ ಸಂಹಿತೆ ಮಾಹಿತಿ ಉಪನ್ಯಾಸ

Suddi Udaya

ಗುರುವಾಯನಕೆರೆ: ಶ್ರೀ ಶಿವಂ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪೆಷಲ್ ಡಿಸ್ಕೌಂಟ್ ಆಫರ್

Suddi Udaya

ನಾವೂರು : ಹಾಲು ಉತ್ಪಾದಕರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!