23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಆಡಳಿತ ಸೌಧದಲ್ಲಿ ಮಹಾ ಯೋಗಿ ವೇಮನ ಜಯಂತಿ ಆಚರಣೆ

ಬೆಳ್ತಂಗಡಿ: ಮಹಾ ಯೋಗಿ ವೇಮನ ಅವರು ಮೂಲತಃ ಆಂಧ್ರಪ್ರದೇಶದ ರೆಡ್ಡಿ ಜನಾಂಗದವರು. ಕರ್ನಾಟಕದಲ್ಲಿ ರೆಡ್ಡಿ ಜನಾಂಗ ಹಾಸುಹೊಕ್ಕಾಗಿದೆ. ವೇಮ ಎಂಬುದು ಕಾವ್ಯ ನಾಮ. ಅದ್ಭುತ ತ್ರಿಪದಿಗಳನ್ನು ರಚಿಸಿದ್ದಾರೆ. ವೇಮನ ತೆಲುಗು ಕವಿಯಾದರೂ ಅವರು ಕೊಡುಗೆ ಸಮಾಜಕ್ಕೆ ಅಪಾರವಾಗಿದೆ. ದೇಶಾಭಿಮಾನ ಬೆಳೆಸಿಕೊಂಡು, ಮುಂದಿನ ಜನಾಂಗಕ್ಕೆ ಸಂತರ ಬಗ್ಗೆ ತಿಳಿಸಬೇಕು ಎಂದು ಕೊಕ್ಕಡ ಹೋಬಳಿ ಕಂದಾಯ ನಿರೀಕ್ಷಕ ಪಾವಡಪ್ಪ ದೊಡ್ಡಮನಿ ಹೇಳಿದರು.

ಅವರು ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಜ.19ರಂದು ನಡೆದ ಮಹಾ ಯೋಗಿ ವೇಮನ ಜಯಂತಿ ಆಚರಣೆಯಲ್ಲಿ ಮಾತನಾಡಿದರು.

ತಹಶೀಲ್ದಾರ್ ಪೃಥ್ವಿ ಸಾನಿಕಂ ಅಧ್ಯಕ್ಷತೆ ವಹಿಸಿದ್ದರು. ಉಪ ತಹಶೀಲ್ದಾರ್ ರವಿಕುಮಾರ್, ದಯಾನಂದ್ ಹೆಗ್ಡೆ ಜಯ ಕೆ. ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಗ್ರಾಮ ಆಡಳಿತ ಅಧಿಕಾರಿ ಹೇಮಾ ಕಾರ್ಯಕ್ರಮ ನಿರ್ವಹಿಸಿದರು. ಗ್ರಾಮ ಆಡಳಿತ ಅಧಿಕಾರಿ ಪರಮೇಶ್ವರ್ ಸಹಕರಿಸಿದರು.

Related posts

ಕಡಿರುದ್ಯಾವರ : ಮಾರಿಯಮ್ಮ ಸೇವಾ ಸಮಿತಿ ಶ್ರೀ ಮಾರಿಯಮ್ಮ ದೇವಿ ಮತ್ತು ಗುಳಿಗ ದೈವದ ಪುನರ್ ಪ್ರತಿಷ್ಠೆ

Suddi Udaya

ಪೆರ್ಲ ಬೈಪಾಡಿ ಸ.ಹಿ.ಪ್ರಾ.ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ಕೊಲ್ಲಿ: ರತನ್ ಶೆಟ್ಟಿಯವರ ಮನೆಯೊಳಗಿದ್ದ ಸೌಂಡ್ ಬಾಕ್ಸ್ ನಲ್ಲಿ ಅವಿತಿದ್ದ ಕಾಳಿಂಗ ಸರ್ಪ

Suddi Udaya

ಮರೋಡಿ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಶಿಕ್ಷಣ ಇಲಾಖೆ ನಡೆಸುವ ಇಸಿಒ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಶಿಕ್ಷಕ ಎಡ್ವರ್ಡ್ ಡಿ’ ಸೋಜ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಪ್ರಥಮ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಇಬ್ಬರಿಗೆ ನ್ಯಾಯಾಂಗ ಬಂಧನ

Suddi Udaya
error: Content is protected !!