25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಆಡಳಿತ ಸೌಧದಲ್ಲಿ ಮಹಾ ಯೋಗಿ ವೇಮನ ಜಯಂತಿ ಆಚರಣೆ

ಬೆಳ್ತಂಗಡಿ: ಮಹಾ ಯೋಗಿ ವೇಮನ ಅವರು ಮೂಲತಃ ಆಂಧ್ರಪ್ರದೇಶದ ರೆಡ್ಡಿ ಜನಾಂಗದವರು. ಕರ್ನಾಟಕದಲ್ಲಿ ರೆಡ್ಡಿ ಜನಾಂಗ ಹಾಸುಹೊಕ್ಕಾಗಿದೆ. ವೇಮ ಎಂಬುದು ಕಾವ್ಯ ನಾಮ. ಅದ್ಭುತ ತ್ರಿಪದಿಗಳನ್ನು ರಚಿಸಿದ್ದಾರೆ. ವೇಮನ ತೆಲುಗು ಕವಿಯಾದರೂ ಅವರು ಕೊಡುಗೆ ಸಮಾಜಕ್ಕೆ ಅಪಾರವಾಗಿದೆ. ದೇಶಾಭಿಮಾನ ಬೆಳೆಸಿಕೊಂಡು, ಮುಂದಿನ ಜನಾಂಗಕ್ಕೆ ಸಂತರ ಬಗ್ಗೆ ತಿಳಿಸಬೇಕು ಎಂದು ಕೊಕ್ಕಡ ಹೋಬಳಿ ಕಂದಾಯ ನಿರೀಕ್ಷಕ ಪಾವಡಪ್ಪ ದೊಡ್ಡಮನಿ ಹೇಳಿದರು.

ಅವರು ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಜ.19ರಂದು ನಡೆದ ಮಹಾ ಯೋಗಿ ವೇಮನ ಜಯಂತಿ ಆಚರಣೆಯಲ್ಲಿ ಮಾತನಾಡಿದರು.

ತಹಶೀಲ್ದಾರ್ ಪೃಥ್ವಿ ಸಾನಿಕಂ ಅಧ್ಯಕ್ಷತೆ ವಹಿಸಿದ್ದರು. ಉಪ ತಹಶೀಲ್ದಾರ್ ರವಿಕುಮಾರ್, ದಯಾನಂದ್ ಹೆಗ್ಡೆ ಜಯ ಕೆ. ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಗ್ರಾಮ ಆಡಳಿತ ಅಧಿಕಾರಿ ಹೇಮಾ ಕಾರ್ಯಕ್ರಮ ನಿರ್ವಹಿಸಿದರು. ಗ್ರಾಮ ಆಡಳಿತ ಅಧಿಕಾರಿ ಪರಮೇಶ್ವರ್ ಸಹಕರಿಸಿದರು.

Related posts

ಯಕ್ಷಭಾರತಿಯಿಂದ ಯಕ್ಷಗಾನ ನಾಟ್ಯ ತರಬೇತಿ ಆರಂಭ

Suddi Udaya

ಎಂ.ಡಿ.ಎಸ್ ಪರೀಕ್ಷೆ: ರಾಜ್ಯಮಟ್ಟದಲ್ಲಿ ವೇಣೂರಿನ ಡಾ. ದೀಕ್ಷಾ ಅಶ್ವಿತ್‌ ಕುಲಾಲ್ ರವರಿಗೆ 5ನೇ ರ್‍ಯಾಂಕ್

Suddi Udaya

ಯಕ್ಷಗಾನ ಕಲಾವಿದ ಗಂಗಾಧರ ರವರ ನಿಧನಕ್ಕೆ ಡಾ| ಹೆಗ್ಗಡೆಯವರಿಂದ ಸಂತಾಪ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ “ಸುವರ್ಣ ಸಮ್ಮಿಲನ”: ಮೋಹನ್ ಕುಮಾರ್ ಹಾಗೂ ರವಿ ಕಟಪಾಡಿ ಯವರಿಗೆ ಸುವರ್ಣ ಸೇವಾ ರತ್ನ ಪ್ರಶಸ್ತಿ ಪ್ರದಾನ: ಸೇವಾ ಪಥ ಸ್ಮರಣ ಸಂಚಿಕೆ ಬಿಡುಗಡೆ

Suddi Udaya

ಮೇ 21: ವಿದ್ಯುತ್ ನಿಲುಗಡೆ

Suddi Udaya

ಶಿಶಿಲ: ನಾಗನಡ್ಕದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ: ಆಸ್ಪತ್ರೆಗೆ ದಾಖಲಿಸಿದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya
error: Content is protected !!