23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಆಡಳಿತ ಸೌಧದಲ್ಲಿ ಮಹಾ ಯೋಗಿ ವೇಮನ ಜಯಂತಿ ಆಚರಣೆ

ಬೆಳ್ತಂಗಡಿ: ಮಹಾ ಯೋಗಿ ವೇಮನ ಅವರು ಮೂಲತಃ ಆಂಧ್ರಪ್ರದೇಶದ ರೆಡ್ಡಿ ಜನಾಂಗದವರು. ಕರ್ನಾಟಕದಲ್ಲಿ ರೆಡ್ಡಿ ಜನಾಂಗ ಹಾಸುಹೊಕ್ಕಾಗಿದೆ. ವೇಮ ಎಂಬುದು ಕಾವ್ಯ ನಾಮ. ಅದ್ಭುತ ತ್ರಿಪದಿಗಳನ್ನು ರಚಿಸಿದ್ದಾರೆ. ವೇಮನ ತೆಲುಗು ಕವಿಯಾದರೂ ಅವರು ಕೊಡುಗೆ ಸಮಾಜಕ್ಕೆ ಅಪಾರವಾಗಿದೆ. ದೇಶಾಭಿಮಾನ ಬೆಳೆಸಿಕೊಂಡು, ಮುಂದಿನ ಜನಾಂಗಕ್ಕೆ ಸಂತರ ಬಗ್ಗೆ ತಿಳಿಸಬೇಕು ಎಂದು ಕೊಕ್ಕಡ ಹೋಬಳಿ ಕಂದಾಯ ನಿರೀಕ್ಷಕ ಪಾವಡಪ್ಪ ದೊಡ್ಡಮನಿ ಹೇಳಿದರು.

ಅವರು ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಜ.19ರಂದು ನಡೆದ ಮಹಾ ಯೋಗಿ ವೇಮನ ಜಯಂತಿ ಆಚರಣೆಯಲ್ಲಿ ಮಾತನಾಡಿದರು.

ತಹಶೀಲ್ದಾರ್ ಪೃಥ್ವಿ ಸಾನಿಕಂ ಅಧ್ಯಕ್ಷತೆ ವಹಿಸಿದ್ದರು. ಉಪ ತಹಶೀಲ್ದಾರ್ ರವಿಕುಮಾರ್, ದಯಾನಂದ್ ಹೆಗ್ಡೆ ಜಯ ಕೆ. ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಗ್ರಾಮ ಆಡಳಿತ ಅಧಿಕಾರಿ ಹೇಮಾ ಕಾರ್ಯಕ್ರಮ ನಿರ್ವಹಿಸಿದರು. ಗ್ರಾಮ ಆಡಳಿತ ಅಧಿಕಾರಿ ಪರಮೇಶ್ವರ್ ಸಹಕರಿಸಿದರು.

Related posts

ಕೊಲ್ಲಿ: ನೋಣಯ್ಯ ದೇವಾಡಿಗ ನಿಧನ

Suddi Udaya

ಮಡಂತ್ಯಾರು: ಬುಲೆಟ್ ಟ್ಯಾಂಕರ್ ಮತ್ತು ಓಮ್ನಿ ಕಾರ್ ಮುಖಾಮುಖಿ ಡಿಕ್ಕಿ

Suddi Udaya

ಕನ್ಯಾಡಿ I : ನೇರೊಳ್ದಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಮತ್ತು ಅಂಗನವಾಡಿ ಕಾರ್ಯಕರ್ತೆಗೆ ಸನ್ಮಾನ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರಕ್ಕೆ ಸೋಲಾರ್ ಅಳವಡಿಸಲು ಕೆನರಾ ಬ್ಯಾಂಕಿನಿಂದ ರೂ 2 ಲಕ್ಷ ಮಂಜೂರು

Suddi Udaya

ಬೆಳ್ತಂಗಡಿ: ಬುರುಡೆ ಪ್ರಕರಣ ವಿಚಾರಣೆ ಫೆ.13ಕ್ಕೆ ಮುಂದೂಡಿಕೆ

Suddi Udaya
error: Content is protected !!