September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.25 -29: ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ

ಮರೋಡಿ : ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ ಹಾಗೂ ಧಾರ್ಮಿಕ ಕಾರ್ಯಕ್ರಮವು ಜ.25ರಿಂದ ಜ.29 ರವರೆಗೆ ನಡೆಯಲಿದೆ.

ಜ.25 ರಂದು ರಾತ್ರಿ 9.00 ಕ್ಕೆ ವಾಸ್ತು ರಾಕ್ಷೋಘ್ನ ಹೋಮ, ಪ್ರಾಕಾರ ಬಲಿ, ನಿತ್ಯಪೂಜೆ. ಜ.26 ಬೆಳಿಗ್ಗೆ 8.00 ಕ್ಕೆ ದೇವತಾ ಪ್ರಾರ್ಥನೆ, ತೋರಣ ಮೂಹೂರ್ತ , ನವಕ ಪ್ರಧಾನ ಹೋಮ, ಕಲಶಾಭಿಷೇಕ, ಅಲಂಕಾರ ಪೂಜೆ, ಧ್ವಜಾರೋಹಣ , ಪ್ರಸಾದ ವಿತರಣೆ, ಅನ್ನಸಂತರ್ಪಣೆ . ಹಾಗೂ ರಾತ್ರಿ ಕುಣಿತ ಭಜನಾ ಕಾರ್ಯಕ್ರಮ.

ಜ.27 ಬೆಳಿಗ್ಗೆ 7.30ರಿಂದ ಆಶ್ಲೇಷ ಬಲಿ, 8.00 ರಿಂದ ಸಾಮೂಹಿಕ ಶ್ರಿ ಸತ್ಯನಾರಾಯಣ ಪೂಜೆ, ಮಧ್ಯಾಹ್ನ ಗಂಟೆ 12ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ 7 ರಿಂದ ಉತ್ಸವ ಬಲಿ, ಮಹಾಪೂಜೆ, ಶ್ರೀ ಭೂತ ಬಲಿ, ಕವಾಟ ಬಂಧನ, ಪಟ್ಟದ ಪಂಜುರ್ಲಿ ಮತ್ತು ಕಲ್ಕುಡ ದೈವಗಳ ಕೋಲ ,

ಜ.28 ಬೆಳಿಗ್ಗೆ ಕವಾಟ ಉದ್ಘಾಟನೆ, ಕಲಶಾಭಿಷೇಕ, ಅಲಂಕಾರ ಪೂಜೆ, ಬೆಳಿಗ್ಗೆ 11.30 ಕ್ಕೆ ಮಹಾಪೂಜೆ, ಚೂರ್ಣೋತ್ಸವ, ದರ್ಶನ ಬಲಿ , ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಪಲ್ಲ ಪೂಜೆ, ಸಂಜೆ 6ರಿಂದ ಯಾತ್ರಾ ಹೋಮ, ರಾತ್ರಿ ಬಲಿ ಉತ್ಸವ, ಸಿರಿಗಳ ಜಾತ್ರೆ, ಕುಮಾರ ದರ್ಶನ, ಕೊಡಮಣಿತ್ತಾಯ ದೈವದ ನೇಮೋತ್ಸವ, ದೈವದೇವರ ಭೇಟಿ, ಅವಭೃತ ಸ್ನಾನ, ಧ್ವಜಾವರೋಹಣ, ಮಹಾಪೂಜೆ , ಕುಣಿತ ಭಜನಾ ಕಾರ್ಯಕ್ರಮ ನಡೆಯಲಿದೆ.

ಜ.29 ಬೆಳಿಗ್ಗೆ ಗಂಟೆ 8.00 ರಿಂದ ಸಂಪ್ರೋಕ್ಷಣೆ, ಕಲಶಾಭಿಷೇಕ, ಮಂತ್ರಾಕ್ಷತೆಯೊಂದಿಗೆ ಮಂಗಲ ಪ್ರಸಾದ ವಿತರಣೆ ಜರಗಲಿದೆ ಎಂದು ದೇವಸ್ಥಾನದ ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ ತಿಳಿಸಿದ್ದಾರೆ.

Related posts

ಬರೆಂಗಾಯ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಹಾಗೂ ನಿಸರ್ಗ ಯುವಜನೇತರ ಮಂಡಲದ ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಗೌರವ

Suddi Udaya

ವೇಣೂರು-ಪೆರ್ಮುಡ “ಸೂರ್ಯ – ಚಂದ್ರ” ಜೋಡುಕರೆ ಕಂಬಳದ ಫಲಿತಾಂಶ

Suddi Udaya

ಶ್ರೀ ಕ್ಷೇತ್ರ ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ಉಜಿರೆ ಲಕ್ಷ್ಮೀ ಗ್ರೂಪ್ ಗೆ ಭೇಟಿ

Suddi Udaya

ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಕಾಯರ್ತಡ್ಕ ದಿವ್ಯಜ್ಯೋತಿ ಶಾಲಾ ವಿದ್ಯಾರ್ಥಿ ಆ್ಯಡ್ಲಿನ್ ಎಲಿಜಬೆತ್ ಜೆರಿನ್ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ

Suddi Udaya

ಧರ್ಮಸ್ಥಳ ಎಸ್.ಡಿ.ಎಂ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya
error: Content is protected !!