25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.25 -29: ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ

ಮರೋಡಿ : ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ ಹಾಗೂ ಧಾರ್ಮಿಕ ಕಾರ್ಯಕ್ರಮವು ಜ.25ರಿಂದ ಜ.29 ರವರೆಗೆ ನಡೆಯಲಿದೆ.

ಜ.25 ರಂದು ರಾತ್ರಿ 9.00 ಕ್ಕೆ ವಾಸ್ತು ರಾಕ್ಷೋಘ್ನ ಹೋಮ, ಪ್ರಾಕಾರ ಬಲಿ, ನಿತ್ಯಪೂಜೆ. ಜ.26 ಬೆಳಿಗ್ಗೆ 8.00 ಕ್ಕೆ ದೇವತಾ ಪ್ರಾರ್ಥನೆ, ತೋರಣ ಮೂಹೂರ್ತ , ನವಕ ಪ್ರಧಾನ ಹೋಮ, ಕಲಶಾಭಿಷೇಕ, ಅಲಂಕಾರ ಪೂಜೆ, ಧ್ವಜಾರೋಹಣ , ಪ್ರಸಾದ ವಿತರಣೆ, ಅನ್ನಸಂತರ್ಪಣೆ . ಹಾಗೂ ರಾತ್ರಿ ಕುಣಿತ ಭಜನಾ ಕಾರ್ಯಕ್ರಮ.

ಜ.27 ಬೆಳಿಗ್ಗೆ 7.30ರಿಂದ ಆಶ್ಲೇಷ ಬಲಿ, 8.00 ರಿಂದ ಸಾಮೂಹಿಕ ಶ್ರಿ ಸತ್ಯನಾರಾಯಣ ಪೂಜೆ, ಮಧ್ಯಾಹ್ನ ಗಂಟೆ 12ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ 7 ರಿಂದ ಉತ್ಸವ ಬಲಿ, ಮಹಾಪೂಜೆ, ಶ್ರೀ ಭೂತ ಬಲಿ, ಕವಾಟ ಬಂಧನ, ಪಟ್ಟದ ಪಂಜುರ್ಲಿ ಮತ್ತು ಕಲ್ಕುಡ ದೈವಗಳ ಕೋಲ ,

ಜ.28 ಬೆಳಿಗ್ಗೆ ಕವಾಟ ಉದ್ಘಾಟನೆ, ಕಲಶಾಭಿಷೇಕ, ಅಲಂಕಾರ ಪೂಜೆ, ಬೆಳಿಗ್ಗೆ 11.30 ಕ್ಕೆ ಮಹಾಪೂಜೆ, ಚೂರ್ಣೋತ್ಸವ, ದರ್ಶನ ಬಲಿ , ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಪಲ್ಲ ಪೂಜೆ, ಸಂಜೆ 6ರಿಂದ ಯಾತ್ರಾ ಹೋಮ, ರಾತ್ರಿ ಬಲಿ ಉತ್ಸವ, ಸಿರಿಗಳ ಜಾತ್ರೆ, ಕುಮಾರ ದರ್ಶನ, ಕೊಡಮಣಿತ್ತಾಯ ದೈವದ ನೇಮೋತ್ಸವ, ದೈವದೇವರ ಭೇಟಿ, ಅವಭೃತ ಸ್ನಾನ, ಧ್ವಜಾವರೋಹಣ, ಮಹಾಪೂಜೆ , ಕುಣಿತ ಭಜನಾ ಕಾರ್ಯಕ್ರಮ ನಡೆಯಲಿದೆ.

ಜ.29 ಬೆಳಿಗ್ಗೆ ಗಂಟೆ 8.00 ರಿಂದ ಸಂಪ್ರೋಕ್ಷಣೆ, ಕಲಶಾಭಿಷೇಕ, ಮಂತ್ರಾಕ್ಷತೆಯೊಂದಿಗೆ ಮಂಗಲ ಪ್ರಸಾದ ವಿತರಣೆ ಜರಗಲಿದೆ ಎಂದು ದೇವಸ್ಥಾನದ ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ ತಿಳಿಸಿದ್ದಾರೆ.

Related posts

ಕೊಕ್ಕಡ: ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ ಘಟಕದ ಪದಗ್ರಹಣ ಹಾಗೂ ವಾರ್ಷಿಕ ಸಮ್ಮಿಲನ ಕಾರ್ಯಕ್ರಮ

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ, ಉಜಿರೆ ಉದ್ಯಮಿ ಕೆ.ಮೋಹನ್ ಕುಮಾರ್ ರವರಿಗೆ ಸೇವಾ ರತ್ನ ಪ್ರಶಸ್ತಿ ಪ್ರದಾನ

Suddi Udaya

ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮತ್ತು ಸುರಕ್ಷತೆಯ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಕಳೆಂಜ ವಿಶ್ವಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರಿಂದ ಸೋರುತಿದ್ದ ಮನೆಯ ಮೇಲ್ಛಾವಣಿಗೆ ಟಾರ್ಪಲ್ ಅಳವಡಿಕೆ

Suddi Udaya

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾ. ಪಂ. ಮಹಿಳಾ ಒಕ್ಕೂಟದ ಮಾಸಿಕ ಸಭೆ

Suddi Udaya

ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ನಿಂದ ರಸ್ತೆ ಸಪ್ತಾಹ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!