April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸ.ಪ್ರೌ. ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಕ್ರೀಡಾಪಟು ದಿನೇಶ್ ವೇಣೂರುರಿಂದ ಕ್ರೀಡಾ ಸ್ಪೈಕ್ ಶೂ ಕೊಡುಗೆ

ನಡ: 2023-24 ನೇ ಸಾಲಿನ ಪ್ರಸಕ್ತ ವರ್ಷದಲ್ಲಿ ಸರಕಾರಿ ಪ್ರೌಢಶಾಲೆ ನಡದ ಪ್ರೌಢಶಾಲಾ ವಿದ್ಯಾರ್ಥಿಗಳು ವಲಯ, ತಾಲೂಕು ಮತ್ತು ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆಯ ಮೂಲಕ ಶಾಲೆಗೆ ಕೀರ್ತಿ ತಂದುಕೊಟ್ಟರು.

ಈ ಸಾಧನೆಗೆ ಸೂಕ್ತ ಮಾರ್ಗದರ್ಶನವನ್ನು ನೀಡಿದವರು ಶಾಲಾ ದೈಹಿಕ ಶಿಕ್ಷಕಿಯಾದ ಶ್ರೀಮತಿ ಸುಜಯ ಬಿ ಮತ್ತು ದೈಹಿಕ ಶಿಕ್ಷಣ ತರಬೇತುದಾರರಾದ ಮಹಾವೀರ್ ವೇಣೂರುಕ್ರೀಡಾಕೂಟಗಳಲ್ಲಿ ಮತ್ತಷ್ಟು ಸಾಧನೆಗೈಯಬೇಕೆಂಬ ಸದುದ್ದೇಶದಿಂದ ಜ. 18 ರಂದು ಶಾಲಾ ವಿದ್ಯಾರ್ಥಿಗಳಿಗೆ ಸುಮಾರು ಹತ್ತು ಸಾವಿರ ಬೆಲೆಯ ಕ್ರೀಡಾಕೂಟದ ಸ್ಪೈಕ್ ಶೂ ಗಳನ್ನು ದಿನೇಶ್ ರಾಜ್ಯಮಟ್ಟದ ಕ್ರೀಡಾಪಟು ವೇಣೂರು ಇವರು ವಿದ್ಯಾರ್ಥಿಗಳಿಗೆ ಕೊಡುಗೆ ನೀಡಿದರು.
ದಿನೇಶ್ ರವರು ತರಬೇತುದಾರರಾದ ಮಹಾವೀರ್ ರವರ ಶಿಷ್ಯರೂ ಆಗಿರುವುದು ವಿಶೇಷ. ಶಾಲಾ ಮುಖ್ಯ ಶಿಕ್ಷಕರಾದ ಮೋಹನ‌ಬಾಬು ಡಿ ಅಭಿನಂದನೆ ಸಲ್ಲಿಸಿದರು. ಸಂಸ್ಥೆಯ ಶಿಕ್ಷಕ ವೃಂದ ಉಪಸ್ಥಿತರಿದ್ದರು.

Related posts

ಕೊಕ್ಕಡ ಕೇಸರಿ ಗೆಳೆಯರ ಬಳಗದ ವತಿಯಿಂದ ಅಯೋಧ್ಯ ಟ್ರೋಫಿ: ಅಯೋಧ್ಯ ಕರಸೇವಕರಿಗೆ ಸನ್ಮಾನ

Suddi Udaya

ಮೇ 9 ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ

Suddi Udaya

ಮಣಿಪಾಲ ಕೆಎಂಸಿಯಿಂದ ಬೆಂಗಳೂರಿನ ಜಯದೇವಆಸ್ಪತ್ರೆಗೆ ಮಗು ವೃಂದಳನ್ನು ತುರ್ತು ಚಿಕಿತ್ಸೆಗೆ ಕರೆದೊಯ್ದ ಈಶ್ವರ್ ಮಲ್ಪೆ ಆಂಬುಲೆನ್ಸ್- ಜಿರೋ ಟ್ರಾಫಿಕ್‌ಗೆ ಸಹಕರಿಸಿದ ಸಾರ್ವಜನಿಕರು, ವಾಹನ ಸವಾರರು ಹಾಗೂ ಪೊಲೀಸರು

Suddi Udaya

ಇಂದಿನಿಂದ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ: ಸಂಜೆ ಹೊರೆಕಾಣಿಕೆ ವೈಭವ ಹಾಗೂ ಒಂದು ಸಾವಿರ ಅಧಿಕ ಮಕ್ಕಳಿಂದ ನೃತ್ಯ ಭಜನೆ

Suddi Udaya

ಶಿಶಿಲ: ದೇನೋಡಿ ನಿವಾಸಿ ನಾಣ್ಯಪ್ಪ ಪೂಜಾರಿ ನಿಧನ

Suddi Udaya

ಕೆಂಪೇಗೌಡ ಜಯಂತಿ ಅಂಗವಾಗಿ ಚಿತ್ರಕಲಾ ಸ್ಪರ್ಧೆ: ಬೆಳ್ತಂಗಡಿ ಶ್ರೀ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ರಿತಿಕಾ ಶೆಣೈಗೆ ಪ್ರಶಸ್ತಿ

Suddi Udaya
error: Content is protected !!