September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸ.ಪ್ರೌ. ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಕ್ರೀಡಾಪಟು ದಿನೇಶ್ ವೇಣೂರುರಿಂದ ಕ್ರೀಡಾ ಸ್ಪೈಕ್ ಶೂ ಕೊಡುಗೆ

ನಡ: 2023-24 ನೇ ಸಾಲಿನ ಪ್ರಸಕ್ತ ವರ್ಷದಲ್ಲಿ ಸರಕಾರಿ ಪ್ರೌಢಶಾಲೆ ನಡದ ಪ್ರೌಢಶಾಲಾ ವಿದ್ಯಾರ್ಥಿಗಳು ವಲಯ, ತಾಲೂಕು ಮತ್ತು ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆಯ ಮೂಲಕ ಶಾಲೆಗೆ ಕೀರ್ತಿ ತಂದುಕೊಟ್ಟರು.

ಈ ಸಾಧನೆಗೆ ಸೂಕ್ತ ಮಾರ್ಗದರ್ಶನವನ್ನು ನೀಡಿದವರು ಶಾಲಾ ದೈಹಿಕ ಶಿಕ್ಷಕಿಯಾದ ಶ್ರೀಮತಿ ಸುಜಯ ಬಿ ಮತ್ತು ದೈಹಿಕ ಶಿಕ್ಷಣ ತರಬೇತುದಾರರಾದ ಮಹಾವೀರ್ ವೇಣೂರುಕ್ರೀಡಾಕೂಟಗಳಲ್ಲಿ ಮತ್ತಷ್ಟು ಸಾಧನೆಗೈಯಬೇಕೆಂಬ ಸದುದ್ದೇಶದಿಂದ ಜ. 18 ರಂದು ಶಾಲಾ ವಿದ್ಯಾರ್ಥಿಗಳಿಗೆ ಸುಮಾರು ಹತ್ತು ಸಾವಿರ ಬೆಲೆಯ ಕ್ರೀಡಾಕೂಟದ ಸ್ಪೈಕ್ ಶೂ ಗಳನ್ನು ದಿನೇಶ್ ರಾಜ್ಯಮಟ್ಟದ ಕ್ರೀಡಾಪಟು ವೇಣೂರು ಇವರು ವಿದ್ಯಾರ್ಥಿಗಳಿಗೆ ಕೊಡುಗೆ ನೀಡಿದರು.
ದಿನೇಶ್ ರವರು ತರಬೇತುದಾರರಾದ ಮಹಾವೀರ್ ರವರ ಶಿಷ್ಯರೂ ಆಗಿರುವುದು ವಿಶೇಷ. ಶಾಲಾ ಮುಖ್ಯ ಶಿಕ್ಷಕರಾದ ಮೋಹನ‌ಬಾಬು ಡಿ ಅಭಿನಂದನೆ ಸಲ್ಲಿಸಿದರು. ಸಂಸ್ಥೆಯ ಶಿಕ್ಷಕ ವೃಂದ ಉಪಸ್ಥಿತರಿದ್ದರು.

Related posts

ಬಂಗಾಡಿ ಬಿಎಸ್ಎನ್ಎಲ್ ನೆಟ್ವರ್ಕ್ಸ್ ಸಮಸ್ಯೆಯಿಂದ ಗ್ರಾಹಕರು ಕಂಗಾಲು: ಸಂಬಂಧ ಪಟ್ಟವರು ನೆಟ್ವರ್ಕ್ಸ್ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ತಾ| ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯರಿಗೆ ಬಹುಮಾನ

Suddi Udaya

ಪಾರೆoಕಿ: ಕೋಟೆಗುತ್ತು ನಿವಾಸಿ ಭೂದ ಪೂಜಾರಿ ನಿಧನ

Suddi Udaya

ಭಾರಿ ಗಾಳಿ ಮಳೆ: ಗುರುವಾಯನಕೆರೆ ಶಕ್ತಿನಗರದ ಸುದೇಕ್ಕರುನಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಇಂದಬೆಟ್ಟು: ಹೆಬ್ಬಾವನ್ನು ಬೇಟೆಯಾಡಿದ ಕಾಳಿಂಗ ಸರ್ಪ: ಸ್ನೇಕ್ ಅಶೋಕ್ ರವರಿಂದ ಹೆಬ್ಬಾವು ರಕ್ಷಣೆ

Suddi Udaya

ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ನಟ ಯಶ್ ಕುಟುಂಬ ಸಮೇತ ಭೇಟಿ: ವಿಶೇಷ ಪೂಜೆ

Suddi Udaya
error: Content is protected !!