22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸ.ಪ್ರೌ. ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಕ್ರೀಡಾಪಟು ದಿನೇಶ್ ವೇಣೂರುರಿಂದ ಕ್ರೀಡಾ ಸ್ಪೈಕ್ ಶೂ ಕೊಡುಗೆ

ನಡ: 2023-24 ನೇ ಸಾಲಿನ ಪ್ರಸಕ್ತ ವರ್ಷದಲ್ಲಿ ಸರಕಾರಿ ಪ್ರೌಢಶಾಲೆ ನಡದ ಪ್ರೌಢಶಾಲಾ ವಿದ್ಯಾರ್ಥಿಗಳು ವಲಯ, ತಾಲೂಕು ಮತ್ತು ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆಯ ಮೂಲಕ ಶಾಲೆಗೆ ಕೀರ್ತಿ ತಂದುಕೊಟ್ಟರು.

ಈ ಸಾಧನೆಗೆ ಸೂಕ್ತ ಮಾರ್ಗದರ್ಶನವನ್ನು ನೀಡಿದವರು ಶಾಲಾ ದೈಹಿಕ ಶಿಕ್ಷಕಿಯಾದ ಶ್ರೀಮತಿ ಸುಜಯ ಬಿ ಮತ್ತು ದೈಹಿಕ ಶಿಕ್ಷಣ ತರಬೇತುದಾರರಾದ ಮಹಾವೀರ್ ವೇಣೂರುಕ್ರೀಡಾಕೂಟಗಳಲ್ಲಿ ಮತ್ತಷ್ಟು ಸಾಧನೆಗೈಯಬೇಕೆಂಬ ಸದುದ್ದೇಶದಿಂದ ಜ. 18 ರಂದು ಶಾಲಾ ವಿದ್ಯಾರ್ಥಿಗಳಿಗೆ ಸುಮಾರು ಹತ್ತು ಸಾವಿರ ಬೆಲೆಯ ಕ್ರೀಡಾಕೂಟದ ಸ್ಪೈಕ್ ಶೂ ಗಳನ್ನು ದಿನೇಶ್ ರಾಜ್ಯಮಟ್ಟದ ಕ್ರೀಡಾಪಟು ವೇಣೂರು ಇವರು ವಿದ್ಯಾರ್ಥಿಗಳಿಗೆ ಕೊಡುಗೆ ನೀಡಿದರು.
ದಿನೇಶ್ ರವರು ತರಬೇತುದಾರರಾದ ಮಹಾವೀರ್ ರವರ ಶಿಷ್ಯರೂ ಆಗಿರುವುದು ವಿಶೇಷ. ಶಾಲಾ ಮುಖ್ಯ ಶಿಕ್ಷಕರಾದ ಮೋಹನ‌ಬಾಬು ಡಿ ಅಭಿನಂದನೆ ಸಲ್ಲಿಸಿದರು. ಸಂಸ್ಥೆಯ ಶಿಕ್ಷಕ ವೃಂದ ಉಪಸ್ಥಿತರಿದ್ದರು.

Related posts

‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಸಮಾವೇಶದ ಬಗ್ಗೆ ಮಚ್ಚಿನ ಕಾಂಗ್ರೆಸ್ ಗ್ರಾಮ ಸಮಿತಿ ಸಭೆ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ವತಿಯಿಂದ ವಿನೂತನ ಕಾರ್ಯಕ್ರಮ

Suddi Udaya

ಎಸ್ಐಆರ್ ಬಗ್ಗೆ ಮತದಾರರಿಗೆ ಇನ್ನಷ್ಟು ಮಾಹಿತಿ ನೀಡಲು ಶನಿವಾರ, ಭಾನುವಾರ ವಿಶೇಷ ಅಭಿಯಾನ : ವಿ.ಅನ್ಬುಕುಮಾ‌ರ್

Suddi Udaya

ಉಜಿರೆ: ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ. ಎಸ್. ಪ್ರಭಾಕರ್ ರವರ ಪತ್ನಿ ಶ್ರೀಮತಿ ಬಿ. ಸರೋಜಿನಿ ದೇವಿ ನಿಧನ

Suddi Udaya

ಬಜಿರೆ: ನಾಟಿ ವೈದ್ಯ ದುಗ್ಗಪ್ಪ ಗೌಡ ನಿಧನ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಗಾಂಧಿಯವರ ಪುಣ್ಯ ಸ್ಮರಣೆ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ರವರ ಜನ್ಮ ದಿನಾಚರಣೆ

Suddi Udaya
error: Content is protected !!