25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತ

ಗುರುವಾಯನಕೆರೆ ಪೊಟ್ಟುಕೆರೆ ಯಲ್ಲಿ ಕಾರು ಡಿಕ್ಕಿ: ಬೈಕ್ ಸವಾರರಿಬ್ಬರು ಗಾಯ – ಸಹ ಸವಾರ ಮಂಗಳೂರು ಆಸ್ಪತ್ರೆಗೆ ದಾಖಲು

ಗುರುವಾಯನಕೆರೆ: ಇಲ್ಲಿಯ ಪೊಟ್ಟುಕೆರೆ ಎಂಬಲ್ಲಿ ಬೈಕ್ ಗೆ ಕಾರು ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ಗಾಯ ಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾದ ಘಟನೆ ವರದಿಯಾಗಿದೆ.

ಕುವೆಟ್ಟು ಗ್ರಾಮದ ನಿವಾಸಿ ಶವನ್ (29) ಎಂಬವರ ದೂರಿನಂತೆ, ಜ.20 ರಂದು ಬೆಳಿಗ್ಗೆ, ಶವನ್ ಅವರು ತಮ್ಮ ಬೈಕ್ ನಲ್ಲಿ ಸಹ ಸವಾರನನ್ನಾಗಿ, ಅವರ ಅಣ್ಣ ಶಮೀರ್ ಎಂಬವರನ್ನು ಕುಳ್ಳಿರಿಸಿಕೊಂಡು, ಕುವೆಟ್ಟು ಗ್ರಾಮದ ಪೊಟ್ಟುಕೆರೆ ಎಂಬಲ್ಲಿ ತಲುಪುತ್ತಿದ್ದಂತೆ, ವಿರುದ್ದ ದಿಕ್ಕಿನಿಂದ ಕಾರನ್ನು ಅದರ ಚಾಲಕ ಅಬ್ದುಲ್ಲಾ ರವರು ದುಡುಕುತನದಿಂದ ಚಲಾಯಿಸಿಕೊಂಡು ಬಂದು, ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ,ಶವನ್ ಮತ್ತು ಸಹ ಸವಾರ ಶಮೀರ್ ರವರು ಮೋಟಾರು ಸೈಕಲ್ ನೊಂದಿಗೆ ರಸ್ತೆಗೆ ಬಿದ್ದು, ಸಹ ಸವಾರ ಶಮೀರ್ ರವರು ಗಾಯಗೊಂಡು ಚಿಕಿತ್ಸೆ ಬಗ್ಗೆ ಮಂಗಳೂರು ಹೈಲ್ಯಾಂಡ್ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ ಎಂಬುದಾಗಿ ನೀಡಿದ ದೂರಿನಂತೆ, ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 09/2024 ಕಲಂ: 279,338 ಭಾ.ದಂ.ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಗುರುವಾಯನಕೆರೆ: ಶಕ್ತಿನಗರದ ಬಳಿ ಕಾರು ಹಾಗೂ ಬೈಕ್ ಅಪಘಾತ

Suddi Udaya

ಕಣಿಯೂರು : ಓಮ್ಮಿ ಕಾರು ಹಾಗೂ ರಿಡ್ಜ್ ಕಾರು ಮುಖಾಮುಖಿ ಡಿಕ್ಕಿ

Suddi Udaya

ನಿಡ್ಲೆ: ಸಿಡಿಲು ಬಡಿದು ಗಾಣಂತಿ ರಾಜೇಂದ್ರ ಗೌಡರವರ ಪಂಪು ಶೆಡ್, ಬೋರ್ ಪಂಪು ಸಹಿತ ಮನೆಗೆ ಹಾನಿ

Suddi Udaya

ಮಚ್ಚಿನ: ಬಂಗೇರಕಟ್ಟೆ ಕಲ್ಲಗುಡ್ಡೆಯಲ್ಲಿ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಕಡಿರುದ್ಯಾವರ: ಗಾಳಿ ಮಳೆಯಿಂದ ದನದ ಹಟ್ಟಿಗೆ ಮರ ಬಿದ್ದು ಸಂಪೂರ್ಣ ಹಾನಿ

Suddi Udaya

ಮದ್ದಡ್ಕ: ಬೈಕ್ ನ್ನು ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

Suddi Udaya
error: Content is protected !!