September 6, 2026
ಅಪಘಾತ

ಗುರುವಾಯನಕೆರೆ ಪೊಟ್ಟುಕೆರೆ ಯಲ್ಲಿ ಕಾರು ಡಿಕ್ಕಿ: ಬೈಕ್ ಸವಾರರಿಬ್ಬರು ಗಾಯ – ಸಹ ಸವಾರ ಮಂಗಳೂರು ಆಸ್ಪತ್ರೆಗೆ ದಾಖಲು

ಗುರುವಾಯನಕೆರೆ: ಇಲ್ಲಿಯ ಪೊಟ್ಟುಕೆರೆ ಎಂಬಲ್ಲಿ ಬೈಕ್ ಗೆ ಕಾರು ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ಗಾಯ ಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾದ ಘಟನೆ ವರದಿಯಾಗಿದೆ.

ಕುವೆಟ್ಟು ಗ್ರಾಮದ ನಿವಾಸಿ ಶವನ್ (29) ಎಂಬವರ ದೂರಿನಂತೆ, ಜ.20 ರಂದು ಬೆಳಿಗ್ಗೆ, ಶವನ್ ಅವರು ತಮ್ಮ ಬೈಕ್ ನಲ್ಲಿ ಸಹ ಸವಾರನನ್ನಾಗಿ, ಅವರ ಅಣ್ಣ ಶಮೀರ್ ಎಂಬವರನ್ನು ಕುಳ್ಳಿರಿಸಿಕೊಂಡು, ಕುವೆಟ್ಟು ಗ್ರಾಮದ ಪೊಟ್ಟುಕೆರೆ ಎಂಬಲ್ಲಿ ತಲುಪುತ್ತಿದ್ದಂತೆ, ವಿರುದ್ದ ದಿಕ್ಕಿನಿಂದ ಕಾರನ್ನು ಅದರ ಚಾಲಕ ಅಬ್ದುಲ್ಲಾ ರವರು ದುಡುಕುತನದಿಂದ ಚಲಾಯಿಸಿಕೊಂಡು ಬಂದು, ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ,ಶವನ್ ಮತ್ತು ಸಹ ಸವಾರ ಶಮೀರ್ ರವರು ಮೋಟಾರು ಸೈಕಲ್ ನೊಂದಿಗೆ ರಸ್ತೆಗೆ ಬಿದ್ದು, ಸಹ ಸವಾರ ಶಮೀರ್ ರವರು ಗಾಯಗೊಂಡು ಚಿಕಿತ್ಸೆ ಬಗ್ಗೆ ಮಂಗಳೂರು ಹೈಲ್ಯಾಂಡ್ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ ಎಂಬುದಾಗಿ ನೀಡಿದ ದೂರಿನಂತೆ, ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 09/2024 ಕಲಂ: 279,338 ಭಾ.ದಂ.ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಗುರುವಾಯನಕೆರೆ ಕಾರು ಪಲ್ಟಿಯಾಗಿ ಚಾಲಕ ಸಾವು: ಮೃತರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಲಾರಿ ಡಿಕ್ಕಿ : ಬೈಕ್ ಸವಾರ ಗಂಭೀರ ಗಾಯ ಮಂಗಳೂರು ಆಸ್ಪತ್ರೆಗೆ ದಾಖಲು

Suddi Udaya

ಧಾರಾಕಾರ ಮಳೆಗೆ ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು

Suddi Udaya

ಪಟ್ರಮೆ: ಚಾಲಕನ ನಿಯಂತ್ರಣ ತಪ್ಪಿ ಹೊಳೆ ಬದಿಗೆ ಬಿದ್ದ ಕಾರು

Suddi Udaya

ಬಿ.ಸಿ. ರೋಡ್ ನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್: ಬೆಳ್ತಂಗಡಿಯ ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

Suddi Udaya

ಸೋಮಂತಡ್ಕ ಟಿಪ್ಪರ್ ಪಲ್ಟಿ

Suddi Udaya
error: Content is protected !!