25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತ

ಗುರುವಾಯನಕೆರೆ ಪೊಟ್ಟುಕೆರೆ ಯಲ್ಲಿ ಕಾರು ಡಿಕ್ಕಿ: ಬೈಕ್ ಸವಾರರಿಬ್ಬರು ಗಾಯ – ಸಹ ಸವಾರ ಮಂಗಳೂರು ಆಸ್ಪತ್ರೆಗೆ ದಾಖಲು

ಗುರುವಾಯನಕೆರೆ: ಇಲ್ಲಿಯ ಪೊಟ್ಟುಕೆರೆ ಎಂಬಲ್ಲಿ ಬೈಕ್ ಗೆ ಕಾರು ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ಗಾಯ ಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾದ ಘಟನೆ ವರದಿಯಾಗಿದೆ.

ಕುವೆಟ್ಟು ಗ್ರಾಮದ ನಿವಾಸಿ ಶವನ್ (29) ಎಂಬವರ ದೂರಿನಂತೆ, ಜ.20 ರಂದು ಬೆಳಿಗ್ಗೆ, ಶವನ್ ಅವರು ತಮ್ಮ ಬೈಕ್ ನಲ್ಲಿ ಸಹ ಸವಾರನನ್ನಾಗಿ, ಅವರ ಅಣ್ಣ ಶಮೀರ್ ಎಂಬವರನ್ನು ಕುಳ್ಳಿರಿಸಿಕೊಂಡು, ಕುವೆಟ್ಟು ಗ್ರಾಮದ ಪೊಟ್ಟುಕೆರೆ ಎಂಬಲ್ಲಿ ತಲುಪುತ್ತಿದ್ದಂತೆ, ವಿರುದ್ದ ದಿಕ್ಕಿನಿಂದ ಕಾರನ್ನು ಅದರ ಚಾಲಕ ಅಬ್ದುಲ್ಲಾ ರವರು ದುಡುಕುತನದಿಂದ ಚಲಾಯಿಸಿಕೊಂಡು ಬಂದು, ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ,ಶವನ್ ಮತ್ತು ಸಹ ಸವಾರ ಶಮೀರ್ ರವರು ಮೋಟಾರು ಸೈಕಲ್ ನೊಂದಿಗೆ ರಸ್ತೆಗೆ ಬಿದ್ದು, ಸಹ ಸವಾರ ಶಮೀರ್ ರವರು ಗಾಯಗೊಂಡು ಚಿಕಿತ್ಸೆ ಬಗ್ಗೆ ಮಂಗಳೂರು ಹೈಲ್ಯಾಂಡ್ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ ಎಂಬುದಾಗಿ ನೀಡಿದ ದೂರಿನಂತೆ, ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 09/2024 ಕಲಂ: 279,338 ಭಾ.ದಂ.ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಗೇರುಕಟ್ಚೆ ಪರಪ್ಪು – ಕೊಯ್ಯೂರು ಕ್ರಾಸ್ ನಲ್ಲಿ ಚರಂಡಿಗೆ ಬಿದ್ದ ಆಟೋ ರಿಕ್ಷಾ

Suddi Udaya

ನೇಣುಬಿಗಿದು ಯುವಕ ಆತ್ಮಹತ್ಯೆಗೆ ಶರಣು: ವಿಷಯ ತಿಳಿದು ತಂದೆ ಕೂಡ ಆತ್ಮಹತ್ಯೆ ಪ್ರಯತ್ನ

Suddi Udaya

ಇಂದಬೆಟ್ಟು: ವಿದ್ಯುತ್ ಕಾಮಗಾರಿ ವೇಳೆ ಅವಘಡ: ಕಾರ್ಮಿಕ ಅಕ್ಬರ್ ಅಲಿ ಮೃತ್ಯು

Suddi Udaya

ನೇರ್ತನೆ ಪರಿಸರದ ಕೃಷಿ ತೋಟಗಳಿಗೆ ನುಗ್ಗಿದ ಕಾಡಾನೆಗಳು: ಅಪಾರ ಕೃಷಿ ನಾಶ

Suddi Udaya

ಪಜಿರಡ್ಕ: ನದಿಯಲ್ಲಿ ಮುಳುಗಿ ವಿದ್ಯಾರ್ಥಿ ನೀರುಪಾಲು

Suddi Udaya

ಬೆಳ್ತಂಗಡಿ: ಹಳೆಕೋಟೆ ಬಳಿ ಓಮಿನಿ ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿ : ಬೈಕ್ ಸವಾರ ಗಂಭೀರ ಗಾಯ

Suddi Udaya
error: Content is protected !!