September 6, 2026
ಅಪಘಾತ

ಗುರುವಾಯನಕೆರೆ ಪೊಟ್ಟುಕೆರೆ ಯಲ್ಲಿ ಕಾರು ಡಿಕ್ಕಿ: ಬೈಕ್ ಸವಾರರಿಬ್ಬರು ಗಾಯ – ಸಹ ಸವಾರ ಮಂಗಳೂರು ಆಸ್ಪತ್ರೆಗೆ ದಾಖಲು

ಗುರುವಾಯನಕೆರೆ: ಇಲ್ಲಿಯ ಪೊಟ್ಟುಕೆರೆ ಎಂಬಲ್ಲಿ ಬೈಕ್ ಗೆ ಕಾರು ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ಗಾಯ ಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾದ ಘಟನೆ ವರದಿಯಾಗಿದೆ.

ಕುವೆಟ್ಟು ಗ್ರಾಮದ ನಿವಾಸಿ ಶವನ್ (29) ಎಂಬವರ ದೂರಿನಂತೆ, ಜ.20 ರಂದು ಬೆಳಿಗ್ಗೆ, ಶವನ್ ಅವರು ತಮ್ಮ ಬೈಕ್ ನಲ್ಲಿ ಸಹ ಸವಾರನನ್ನಾಗಿ, ಅವರ ಅಣ್ಣ ಶಮೀರ್ ಎಂಬವರನ್ನು ಕುಳ್ಳಿರಿಸಿಕೊಂಡು, ಕುವೆಟ್ಟು ಗ್ರಾಮದ ಪೊಟ್ಟುಕೆರೆ ಎಂಬಲ್ಲಿ ತಲುಪುತ್ತಿದ್ದಂತೆ, ವಿರುದ್ದ ದಿಕ್ಕಿನಿಂದ ಕಾರನ್ನು ಅದರ ಚಾಲಕ ಅಬ್ದುಲ್ಲಾ ರವರು ದುಡುಕುತನದಿಂದ ಚಲಾಯಿಸಿಕೊಂಡು ಬಂದು, ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ,ಶವನ್ ಮತ್ತು ಸಹ ಸವಾರ ಶಮೀರ್ ರವರು ಮೋಟಾರು ಸೈಕಲ್ ನೊಂದಿಗೆ ರಸ್ತೆಗೆ ಬಿದ್ದು, ಸಹ ಸವಾರ ಶಮೀರ್ ರವರು ಗಾಯಗೊಂಡು ಚಿಕಿತ್ಸೆ ಬಗ್ಗೆ ಮಂಗಳೂರು ಹೈಲ್ಯಾಂಡ್ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ ಎಂಬುದಾಗಿ ನೀಡಿದ ದೂರಿನಂತೆ, ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 09/2024 ಕಲಂ: 279,338 ಭಾ.ದಂ.ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಓಮ್ನಿ ಕಾರು – ಸ್ವಿಫ್ಟ್ ಡಿಸೈರ್ ಮುಖಾಮುಖಿ ಡಿಕ್ಕಿ

Suddi Udaya

ಬೆಳಾಲು: ಸ್ಕೂಟರ್‌ಗೆ ಕ್ರೇನ್ ಡಿಕ್ಕಿ ಹೊಡೆದು ಅಪಘಾತ-ಬಳಂಜ ಕಾಪಿನಡ್ಕ ನಿವಾಸಿ ಜಯ ಮೇಸ್ತ್ರೀ ಸ್ಥಳದಲ್ಲೇ ಸಾವು

Suddi Udaya

ಬೆಳ್ತಂಗಡಿ: ಹಳೆಕೋಟೆ ಬಳಿ ಓಮಿನಿ ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿ : ಬೈಕ್ ಸವಾರ ಗಂಭೀರ ಗಾಯ

Suddi Udaya

ಮಡಂತ್ಯಾರುನಲ್ಲಿ ಚರಂಡಿಗೆ ಬಿದ್ದ ಕಾರು

Suddi Udaya

ಸಂಚಾರಿಸುತ್ತಿದ್ದ ಬೈಕ್ ಮೇಲೆ ಕಾಡುಕೋಣ ದಾಳಿ: ಸವಾರನಿಗೆ ಗಾಯ

Suddi Udaya

ಇಳಿಯೂರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನಕ್ಕೆ ಸಿಡಿಲು ಬಡಿದು ಹಾನಿ

Suddi Udaya
error: Content is protected !!