22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತ

ಗುರುವಾಯನಕೆರೆ ಪೊಟ್ಟುಕೆರೆ ಯಲ್ಲಿ ಕಾರು ಡಿಕ್ಕಿ: ಬೈಕ್ ಸವಾರರಿಬ್ಬರು ಗಾಯ – ಸಹ ಸವಾರ ಮಂಗಳೂರು ಆಸ್ಪತ್ರೆಗೆ ದಾಖಲು

ಗುರುವಾಯನಕೆರೆ: ಇಲ್ಲಿಯ ಪೊಟ್ಟುಕೆರೆ ಎಂಬಲ್ಲಿ ಬೈಕ್ ಗೆ ಕಾರು ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ಗಾಯ ಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾದ ಘಟನೆ ವರದಿಯಾಗಿದೆ.

ಕುವೆಟ್ಟು ಗ್ರಾಮದ ನಿವಾಸಿ ಶವನ್ (29) ಎಂಬವರ ದೂರಿನಂತೆ, ಜ.20 ರಂದು ಬೆಳಿಗ್ಗೆ, ಶವನ್ ಅವರು ತಮ್ಮ ಬೈಕ್ ನಲ್ಲಿ ಸಹ ಸವಾರನನ್ನಾಗಿ, ಅವರ ಅಣ್ಣ ಶಮೀರ್ ಎಂಬವರನ್ನು ಕುಳ್ಳಿರಿಸಿಕೊಂಡು, ಕುವೆಟ್ಟು ಗ್ರಾಮದ ಪೊಟ್ಟುಕೆರೆ ಎಂಬಲ್ಲಿ ತಲುಪುತ್ತಿದ್ದಂತೆ, ವಿರುದ್ದ ದಿಕ್ಕಿನಿಂದ ಕಾರನ್ನು ಅದರ ಚಾಲಕ ಅಬ್ದುಲ್ಲಾ ರವರು ದುಡುಕುತನದಿಂದ ಚಲಾಯಿಸಿಕೊಂಡು ಬಂದು, ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ,ಶವನ್ ಮತ್ತು ಸಹ ಸವಾರ ಶಮೀರ್ ರವರು ಮೋಟಾರು ಸೈಕಲ್ ನೊಂದಿಗೆ ರಸ್ತೆಗೆ ಬಿದ್ದು, ಸಹ ಸವಾರ ಶಮೀರ್ ರವರು ಗಾಯಗೊಂಡು ಚಿಕಿತ್ಸೆ ಬಗ್ಗೆ ಮಂಗಳೂರು ಹೈಲ್ಯಾಂಡ್ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ ಎಂಬುದಾಗಿ ನೀಡಿದ ದೂರಿನಂತೆ, ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 09/2024 ಕಲಂ: 279,338 ಭಾ.ದಂ.ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಗೇರುಕಟ್ಟೆ: ಅಲ್ಟೋ ಕಾರು ಡಿಕ್ಕಿ – ಪಾದಚಾರಿಗೆ ಗಂಭೀರ ಗಾಯ

Suddi Udaya

ಶಿಬಾಜೆ ಬರ್ಗುಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು: ರೂ.25 ಲಕ್ಷ ಪರಿಹಾರ ನೀಡುವಂತೆ ಮೆಸ್ಕಾಂ ಇಲಾಖೆಗೆ ಶಾಸಕ ಹರೀಶ್ ಪೂಂಜಾ ಆಗ್ರಹ

Suddi Udaya

ತಣ್ಣೀರುಪoತ: ಬೈಕ್ ಗಳ ಮುಖಾಮುಖಿ ಡಿಕ್ಕಿ: ಓರ್ವ ಮೃತ್ಯು

Suddi Udaya

ಕಡಿರುದ್ಯಾವರ: ರಸ್ತೆಗೆ ಬಿದ್ದ ವಿದ್ಯುತ್ ಕಂಬಗಳು

Suddi Udaya

ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಧರ್ಮಸ್ಥಳದ ಯುವಕ ಸಾವು

Suddi Udaya

ಕೊಕ್ಕಡ: ಕೆಎಸ್ಆರ್‌ಟಿಸಿ ಬಸ್–ಕಾರು ಮುಖಾಮುಖಿ ಡಿಕ್ಕಿ: ಮಹಿಳೆಗೆ ಗಾಯ

Suddi Udaya
error: Content is protected !!