23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತ

ಗುರುವಾಯನಕೆರೆ ಪೊಟ್ಟುಕೆರೆ ಯಲ್ಲಿ ಕಾರು ಡಿಕ್ಕಿ: ಬೈಕ್ ಸವಾರರಿಬ್ಬರು ಗಾಯ – ಸಹ ಸವಾರ ಮಂಗಳೂರು ಆಸ್ಪತ್ರೆಗೆ ದಾಖಲು

ಗುರುವಾಯನಕೆರೆ: ಇಲ್ಲಿಯ ಪೊಟ್ಟುಕೆರೆ ಎಂಬಲ್ಲಿ ಬೈಕ್ ಗೆ ಕಾರು ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ಗಾಯ ಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾದ ಘಟನೆ ವರದಿಯಾಗಿದೆ.

ಕುವೆಟ್ಟು ಗ್ರಾಮದ ನಿವಾಸಿ ಶವನ್ (29) ಎಂಬವರ ದೂರಿನಂತೆ, ಜ.20 ರಂದು ಬೆಳಿಗ್ಗೆ, ಶವನ್ ಅವರು ತಮ್ಮ ಬೈಕ್ ನಲ್ಲಿ ಸಹ ಸವಾರನನ್ನಾಗಿ, ಅವರ ಅಣ್ಣ ಶಮೀರ್ ಎಂಬವರನ್ನು ಕುಳ್ಳಿರಿಸಿಕೊಂಡು, ಕುವೆಟ್ಟು ಗ್ರಾಮದ ಪೊಟ್ಟುಕೆರೆ ಎಂಬಲ್ಲಿ ತಲುಪುತ್ತಿದ್ದಂತೆ, ವಿರುದ್ದ ದಿಕ್ಕಿನಿಂದ ಕಾರನ್ನು ಅದರ ಚಾಲಕ ಅಬ್ದುಲ್ಲಾ ರವರು ದುಡುಕುತನದಿಂದ ಚಲಾಯಿಸಿಕೊಂಡು ಬಂದು, ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ,ಶವನ್ ಮತ್ತು ಸಹ ಸವಾರ ಶಮೀರ್ ರವರು ಮೋಟಾರು ಸೈಕಲ್ ನೊಂದಿಗೆ ರಸ್ತೆಗೆ ಬಿದ್ದು, ಸಹ ಸವಾರ ಶಮೀರ್ ರವರು ಗಾಯಗೊಂಡು ಚಿಕಿತ್ಸೆ ಬಗ್ಗೆ ಮಂಗಳೂರು ಹೈಲ್ಯಾಂಡ್ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ ಎಂಬುದಾಗಿ ನೀಡಿದ ದೂರಿನಂತೆ, ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 09/2024 ಕಲಂ: 279,338 ಭಾ.ದಂ.ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ನದಿಗೆ ಈಜಲು ಹೋದ ಯುವಕ ನೀರಲ್ಲಿ ಮುಳುಗಿ ಸಾವು

Suddi Udaya

ಚಾರ್ಮಾಡಿ ಘಾಟಿಯಲ್ಲಿ ಲಾರಿ ಮತ್ತು ಕಾರು ಡಿಕ್ಕಿ: ನಾಲ್ವರಿಗೆ ಗಾಯ

Suddi Udaya

ಜಿಪ್ಸಿ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಬಳಂಜ ಶಾಲಾ ಮುಖ್ಯೋಪಾಧ್ಯಾಯರಿಗೆ ಗಂಭೀರ ಗಾಯ

Suddi Udaya

ಧರ್ಮಸ್ಥಳ: ಇಲ್ಲಿಯ ಜೋಡುಸ್ಥಾನದ ಬಳಿ ಗಾಳಿ ಮಳೆಗೆ ಬಿದ್ದ ಮರಗಳು ಗ್ರಾಮಸ್ಥರ ಸಹಕಾರದಿಂದ ತೆರವು ಕಾರ್ಯ

Suddi Udaya

ಪದ್ಮುಂಜ ಸಿಎ ಬ್ಯಾಂಕ್ ಸಿಬ್ಬಂದಿ ಚಿದಾನಂದ ಗೌಡ ನಿಧನ

Suddi Udaya

ಬೈಕ್-ಪಿಕಪ್ ಡಿಕ್ಕಿ: ಗಂಭೀರ ಗಾಯಗೊಂಡ ಬೈಕ್‌ ಸವಾರ ನವೀನ್ ಪೂಜಾರಿ ಮೃತ್ಯು

Suddi Udaya
error: Content is protected !!