27.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರ್ತವ್ಯದ ವೇಳೆ ಬೆಳ್ತಂಗಡಿ ತಹಶೀಲ್ದಾ‌ರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ : ಕರ್ತವ್ಯದ ವೇಳೆ ಬೆಳ್ತಂಗಡಿ ತಹಶೀಲ್ದಾ‌ರ್ ಮೇಲೆ ಹಲ್ಲೆಗೆ ಯತ್ನಿಸಿ, ಕಂದಾಯ ನಿರೀಕ್ಷಕರನ್ನು ಅವಾಚ್ಯವಾಗಿ ನಿಂದಿಸಿದ ಘಟನೆ ಜ.18ರಂದು ಮದ್ದಡ್ಕದಲ್ಲಿ ನಡೆದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದ್ದಡ್ಕ ಎಂಬಲ್ಲಿ ಸರಕಾರಿ ಜಾಗದ ಒತ್ತುವರಿಯಾಗಿರುವ ಬಗ್ಗೆ ಪರಿಶೀಲನೆಗಾಗಿ ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಪೃಥ್ವಿ ಸಾನಿಕಂ, ಕಂದಾಯ ನಿರೀಕ್ಷಕರು, ಗ್ರಾಮ ಅಭಿವೃದ್ಧಿ ಅಧಿಕಾರಿಯವರೊಂದಿಗೆ ಸದ್ರಿ ಜಾಗಕ್ಕೆ ಸರಕಾರಿ ವಾಹನದಲ್ಲಿ ತೆರಳಿ ಪರಿಶೀಲನೆ ನಡೆಸುತ್ತಿದ್ದರು. ಈ ವೇಳೆ ಸದ್ರಿ ಸ್ಥಳವನ್ನು ಒತ್ತುವರಿಸಿದ ನಸೀ‌ರ್ ಮತ್ತು ರೌಫ್ ಎಂಬವರು ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಅಲ್ಲದೆ ಸ್ಥಳದಲ್ಲಿದ್ದ ಕಂದಾಯ ನಿರೀಕ್ಷಕ ಪ್ರತೀಶ್‌ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ಈ ಬಗ್ಗೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಜ.19 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪೊಲೀಸರು ಐಪಿಸಿ 353, 504 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದ್ದಾರೆ.

Related posts

ರಸಪ್ರಶ್ನೆ ಸ್ಪರ್ಧೆ: ವೇಣೂರು ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಲಾಯಿಲ ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ ನಡೆದ 19ನೇ ವರ್ಷದ ಮೊಸರು ಕುಡಿಕೆ ಉತ್ಸವ: ಶ್ರೀ ಕೃಷ್ಣ ಅತ್ಯಂತ ಶ್ರೇಷ್ಠ ಮನಶಾಸ್ತ್ರಜ್ಞ: ಪ್ರತಾಪ್ ಸಿಂಹ ನಾಯಕ್

Suddi Udaya

ಶಿರ್ಲಾಲು ಸಿಎ ಬ್ಯಾಂಕಿನಿಂದ ಎಸ್.ಎಸ್.ಎಲ್.ಸಿ ಸಾಧಕ‌ ವಿದ್ಯಾರ್ಥಿನಿ ತ್ರಿಷಾರವರಿಗೆ ಸನ್ಮಾನ

Suddi Udaya

ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ವಾಸ್ತುಶಿಲ್ಪಿ ಪ್ರಸಾದ್ ಮುನಿಯoಗಳರವರು ಭೇಟಿ: ಕಾಮಗಾರಿಯ ಬಗ್ಗೆ ಸಮಾಲೋಚನೆ

Suddi Udaya

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಡಿಸ್ಕೌಂಟ್ ಸೇಲ್: ಪ್ರತಿ ಖರೀದಿಯ ಮೇಲೆ ಶೇ.20 ಡಿಸ್ಕೌಂಟ್

Suddi Udaya
error: Content is protected !!